• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

January 4, 2025
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

by ಪ್ರಜಾಧ್ವನಿ ನ್ಯೂಸ್
January 4, 2025
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.
50
SHARES
142
VIEWS
ShareShareShare

ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

ರಾಜ್ಯ ರಾಜಕೀಯ ಸಂಚಲನವೇ…?

 

ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ashwinistudioputtur

ಜಾಹೀರಾತು

ಕರಾವಳಿ ತೀರದ ಸುರಕ್ಷತೆ ದೃಷ್ಟಿಯಿಂದ ಭಾರತೀಯ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆ ಯೋಜನೆ ಅನುಷ್ಠಾನ, ದಕ್ಷಿಣ ಕನ್ನಡದಲ್ಲಿ ಸೈನಿಕ ಶಾಲೆ-ಮಿಲಿಟರಿ ನೆಲೆ ಸ್ಥಾಪಿಸುವುದು, ಮಂಗಳೂರು-ಬೆಂಗಳೂರು ನಡುವಿನ ರೈಲು ಹಾಗೂ ರಸ್ತೆ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು ಸೇರಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷತೆ ಹೆಚ್ಚಳಕ್ಕೆ ಪೂರಕವಾದ ಹಲವು ಪ್ರಮುಖ ಬೇಡಿಕೆ ಒಳಗೊಂಡಿರುವ ಮನವಿಯನ್ನು ಇದೇ ವೇಳೆ ಸಂಸದ ಕ್ಯಾ. ಚೌಟ ಅವರು ಗೃಹ ಸಚಿವ ಅಮಿತ್‌ ಶಾ ಅವರಿಗೆ ಸಲ್ಲಿಕೆ ಮಾಡಿದ್ದಾರೆ.

ಸಂಸದರಾದ ಬಳಿಕ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಮೊದಲ ಬಾರಿಗೆ ಅಧಿಕೃತವಾಗಿ ಅಮಿತ್‌ ಶಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಕ್ಯಾ. ಚೌಟ ಅವರು ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಲೋಚಿಸಿದ್ದು ಈ ವೇಳೆ ಗೃಹಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

*ಮಂಗಳೂರಿಗೆ ಶೀಘ್ರ ಎನ್‌ಐಎ ಘಟಕ*
ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯಾದ ಎನ್‌ಐಎ ಘಟಕ ಸ್ಥಾಪಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬಂದಿತ್ತು. ಈ ಬೇಡಿಕೆಯನ್ನು ಆದ್ಯತೆಯಾಗಿ ಪರಿಗಣಿಸಿದ್ದ ಕ್ಯಾ. ಚೌಟ ಸಂಸದರಾದ ಕೂಡಲೇ ಎನ್‌ಐಎ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದರು. ಅದರಂತೆ ಇಂದು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಗಳೂರು ಸೇರಿ ಕರಾವಳಿಯಲ್ಲಿ ಎಸ್‌ಡಿಪಿಐ, ಪಿಎಫ್‌ಐನಂಥ ಮತಾಂಧ ಸಮಾಜಘಾತುಕ ಸಂಘಟನೆಗಳ ಮೂಲಕ ಸ್ಲೀಪರ್‌ಸೆಲ್‌ನಂತಿರುವ ಉಗ್ರ ಚಟುವಟಿಕೆ ಮಟ್ಟ ಹಾಕಬೇಕಾದರೆ ಕರಾವಳಿಯಲ್ಲಿ ಎನ್‌ಐಎ ಘಟಕ ಸ್ಥಾಪಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿಂದೆ ಸಿಎಎ ಪ್ರತಿಭಟನೆ ಹೆಸರಿನಲ್ಲಿ ನಡೆಸಿದ್ದ ಮೂಲಭೂತವಾದಿಗಳ ಗಲಭೆ ಕೂಡ ಕರಾವಳಿಯ ಭದ್ರತೆಗೆ ಎದುರಾದ ಸವಾಲಿಗೆ ಸ್ಪಷ್ಟ ನಿದರ್ಶನ. ಹೀಗಿರುವಾಗ, ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಯಾದರೆ ಈ ಭಾಗದಲ್ಲಿ ಉಗ್ರ ಚಟುವಟಿಕೆಯ ಮೂಲೋತ್ಪಾಟನೆ ಜತೆಗೆ ಕರಾವಳಿಯ ಸುರಕ್ಷತೆ ಹೆಚ್ಚಿಸುವುದಕ್ಕೂ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಕ್ಯಾ. ಚೌಟ ತಿಳಿಸಿದ್ದಾರೆ.

*ಸೈನಿಕ ಶಾಲೆ ಮತ್ತು ಮಿಲಿಟರಿ ಬೇಸ್‌ ಸ್ಥಾಪನೆಗೆ ಮನವಿ*
ಶೈಕ್ಷಣಿಕವಾಗಿ ಮಂಗಳೂರು ವಿಶ್ವದರ್ಜೆ ಮನ್ನಣೆ ಪಡೆದಿರುವ ಹಿನ್ನಲೆಯಲ್ಲಿ ಈ ಭಾಗದಲ್ಲಿ ದೇಶ ಸೇವೆಗೆ ಮುಂದಾಗುವ ಯುವಕರನ್ನು ಪ್ರೋತ್ಸಾಹಿಸುವುದಕ್ಕೆ ಹಾಗೂ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ, ಶಿಸ್ತು, ನಾಯಕತ್ವ ಗುಣ ಬೆಳೆಸುವುದಕ್ಕೆ ಸೈನಿಕ ಶಾಲೆ ಸ್ಥಾಪನೆಯಾಗಬೇಕು. ನಮ್ಮ ಕರಾವಳಿ ತೀರದ ರಕ್ಷಣಾ ಸಾಮರ್ಥ್ಯ ಹಾಗೂ ರಾಷ್ಟ್ರೀಯ ಭದ್ರತೆ ಹೆಚ್ಚಿಸುವ ದೃಷ್ಟಿಯಿಂದ ಮಿಲಿಟರಿ ಬೇಸ್‌ ಮಂಗಳೂರಿನಲ್ಲಿ ಸ್ಥಾಪಿಸಬೇಕು. ಸೈನಿಕ ಶಾಲೆ ಜತೆಗೆ ಮಿಲಿಟರಿ ನೆಲೆಯನ್ನೂ ಸ್ಥಾಪಿಸುವುದರಿಂದ ಕರಾವಳಿ ಭಾಗದ ಸುರಕ್ಷತೆಯ ಜತೆಗೆ ದೇಶದ ರಕ್ಷಣಾ ಮೂಲಸೌಕರ್ಯ ಮತ್ತಷ್ಟು ಬಲಗೊಳಿಸುವುದಕ್ಕೆ ವಿಪುಲ ಅವಕಾಶ-ಅನುಕೂಲತೆಗಳು ದೊರೆಯುತ್ತದೆ ಎಂದು ಚೌಟ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರವು ಮಂಗಳೂರಿಗೆ 2020ರಲ್ಲಿ ಭಾರತೀಯ ಕೋಸ್ಟ್‌ಗಾರ್ಡ್‌ ಅಕಾಡೆಮಿ ಮಂಜೂರು ಮಾಡಿದೆ. ಆದರೆ, ನಮ್ಮ ಜಿಲ್ಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಗ್ಗುರುತಾಗುವ ಈ ಯೋಜನೆ ಕಾರ್ಯರೂಪಕ್ಕೆ ಬರಲು ಕೆಲವು ಅನುಮತಿ ಪ್ರಕ್ರಿಯೆಗಳು ಗೃಹ ಸಚಿವಾಲಯದ ಮುಂದೆ ಬಾಕಿಯಿದೆ. ಹೀಗಾಗಿ ಆದಷ್ಟು ಬೇಗ ಅಕಾಡೆಮಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಮಂಗಳೂರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪಿಸುವುದರಿಂದ ಕರಾವಳಿ ತೀರದ ಕಣ್ಗಾವಲು, ಪ್ರಾಕೃತಿ ವಿಕೋಪದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲಿದೆ. ಅಲ್ಲದೆ, ಆಯಕಟ್ಟಿನ ಅರೇಬಿಯನ್ ಸಮುದ್ರ ಮತ್ತು ಮಂಗಳೂರು ಬಂದರಿನ ಸಮೀಪದಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಯಾದರೆ ಲಕ್ಷದ್ವೀಪ ದ್ವೀಪಗಳು ಮತ್ತು ಮಾಲ್ಡೀವ್ಸ್ ಸೇರಿದಂತೆ ಪ್ರಮುಖ ಕಡಲ ವಲಯಗಳ ಸಾಮೀಪ್ಯದಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಕ್ಯಾ. ಚೌಟ ಅವರು ಸಲಹೆ ನೀಡಿದ್ದಾರೆ.

ಮಂಗಳೂರು ಈಗಾಗಲೇ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಯಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಭಾಗದಲ್ಲಿರುವ ಸಹಕಾರ ಬ್ಯಾಂಕಿಂಗ್‌ ವಲಯದ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಸಣ್ಣ ಉದ್ದಿಮೆದಾರರು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಕೋ ಆಪರೇಟಿವ್‌ ಬ್ಯಾಂಕ್‌ಗಳ ಉತ್ತೇಜನ ಅನುಕೂಲ ಮಾಡಲಿದೆ ಎಂದು ಸಹಕಾರಿ ಸಚಿವರೂ ಆಗಿರುವ ಅಮಿತ್‌ ಶಾ ಅವರಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ.

Muliya

ಜಾಹೀರಾತು

ಭೇಟಿಯ ವೇಳೆ ಕೇಂದ್ರ ಸಚಿವರಿಗೆ ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳದ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದರು.

8722552464 Astrloger

ಜಾಹೀರಾತು

SendShare20Share
Previous Post

ಪುತ್ತೂರು :ಜ.04 ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

Next Post

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..