ದಿನಾಂಕ 09.02.2025 ರಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ,ಮತ್ತು ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ.ಹಾಗೂ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಇಂದು ವಳಾಲು ಶಾಲಾ ವಠಾರದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ಮತ್ತು ದಂತ ಚಿಕಿತ್ಸಾ ಶಿಬಿರ ಹಾಗೂ ಇನ್ನಿತರ ವೈದ್ಯಕೀಯ ಶಿಬಿರ ಬಜತ್ತೂರು ಘಟಕ ದ ಅಧ್ಯಕ್ಷ ಹರಿಕೃಷ್ಣ ಕಾಂಚನ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕರು ಶ್ರೀ ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತಾಡಿ ಶುಭಕೋರಿದರು, ವೇದಿಕೆಯಲ್ಲಿ ಟ್ರಸ್ಟ್ ನ ತಾಲೂಕಿನ ಅಧ್ಯಕ್ಷ ಮಹೇಂದ್ರ ವರ್ಮಾ ಬಜತ್ತೂರು, ಪ್ರಧಾನ ಕಾರ್ಯದರ್ಶಿ ಕೆದಂಬಾಡಿ ಮಠ ರವಿಕುಮಾರ್ ರೈ, ಟ್ರಸ್ಟಿನ ಕೋಶಾಧಿಕಾರಿ ಗಣೇಶ್ ಭಟ್ ಮಕರಂದ ಶಾರದಾಂಬ ಟ್ರಸ್ಟಿನ ನ ಪದಾಧಿಕಾರಿಗಳು, ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ಯ ವೈದ್ಯಧಿಕಾರಿಗಳು ಉಪಸ್ಥಿತರಿದ್ದರು ಒಟ್ಟಾರೆ ಸರಿಸುಮಾರು 350ಕ್ಕೂ ಹೆಚ್ಚು ಗ್ರಾಮೀಣ ಪ್ರದೇಶದ ನಾಗರಿಕರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು