ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಆ ಬಳಿಕ ಹಲವಾರು ಪ್ರತಿಭಟನೆಗಳೂ ನಡೆದಿದ್ದು, ಹಲವಾರು ರಾಜಕೀಯ ನೇತಾರರು ದಿಗಂತ್ ಮನೆಗೆ ಭೇಟಿ ನೀಡಿದ್ದು, ಪತ್ತೆ ಹಚ್ಚಿ ಕೊಡುವ ಭರವಸೆ ನೀಡಿದ್ದರು. ತದನಂತರ ಪರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿಲ್ಲ ಎಂಬ ಆರೋಪವು ಕೇಳಿ ಬಂದಿತ್ತು.
ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸಂಪೂರ್ಣ ವಿವರ ಲಭ್ಯವಾಗಿಲ್ಲ