ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿಯವರು ಇಂದು ಆದಿತ್ಯವಾರ ಬೆಳಿಗ್ಗೆ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಮೊಟ್ಟೆತಡ್ಕ ಪ್ರದೇಶದಲ್ಲಿ ಮತಯಾಚನೆ ಮಾಡುತ್ತಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಮನೆ ಮನೆ ಪ್ರಚಾರದ ಬಗ್ಗೆ ಮಾಹಿತಿ ಪಡಕೊಂಡರು, ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಕೆ ಹರೀಶ್ ಕುಮಾರ್,,ಕೆಪಿಸಿಸಿ ಸಂಯೋಜಕರಾದ ಶ್ರೀ ಲಾರೆನ್ಸ್ ಡಿಸೋಜಾ,
ಪುತೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಎಚ್.ಮೊಹಮ್ಮದ್ ಅಲಿ ಜತೆಗಿದ್ದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯೆ ಶ್ರೀಮತಿ ಶೈಲಾ ಪೈ ಉಸ್ತುವಾರಿ ರಫೀಕ್ ಎಂ ಕೆ,ನಗರ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ ಪೂಜಾರಿ,ಕಾರ್ಯದರ್ಶಿ ಸುರೇಂದ್ರ ಮೊಟ್ಟೆತಡ್ಕ, ಹಮೀದ್ ಕೆ ಅಬ್ದುಲ್ ಕುಂಹಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.