ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ. ಇದರಿಂದ ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರೋಪ್ ಹಾಕಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಐವರ ಜೀವ ಉಳಿದಂತಾಗಿದೆ.
ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ. ಇದರಿಂದ ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರೋಪ್ ಹಾಕಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಐವರ ಜೀವ ಉಳಿದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮದಲ್ಲಿ ಎರುಗುಂಡಿ ಫಾಲ್ಸ್ ಇದೆ. ಮುಂಗಾರು ಮಳೆಯ ಅಬ್ಬರಕ್ಕೆ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಇನ್ನೂ ರಕ್ಷಣೆಗೊಳಗಾದ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪರಿಸರದಲ್ಲಿ ಈ ಹಿಂದೆ ಕೂಡ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಇಲ್ಲಿಗೆ ಮೋಜಿನಾಟಕ್ಕೆ ಬರುವ ಪ್ರವಾಸಿಗರನ್ನು ಎಚ್ಚರಿಸುವ ಕಾರ್ಯ ಮಾಡಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.