ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ನಡೆಯಲಿದ್ದು, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಎಲ್ಲರ ಸಹಕಾರದ ಅಗತ್ಯವಿದೆ. ಈಗಾಗಲೇ ಪೂರ್ವಭಾವಿ ಸಭೆಗಳನ್ನು ಹಣಕಾಸು ಸಂಸ್ಥೆಗಳು, ಪೊಲೀಸ್, ಆರ್ .ಟಿ.ಓ. ಪುರಸಭೆ ಅಧಿಕಾರಿಗಳು, ತಹಶೀಲ್ದಾರ್, ವಕೀಲರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳೊಂದಿಗೆ ಮಾಡಲಾಗಿದೆ. ಹಣಕಾಸು ಸಂಸ್ಥೆಗಳಿಗೆ ಬಡ್ಡಿ ಹಣದಲ್ಲಿ ರಿಯಾಯಿತಿ ನೀಡಿ ಸಹಕರಿಸಬೇಕು ಎಂದು ಕೇಳಿಕೊಳ್ಳಲಾಗಿದೆ. ಸಾಲಗಾರರ ಮನವೊಲಿಸುವ ಪ್ರಯತ್ನಗಳನ್ನು ಕುಂಡ ಮಾಡುವಂತೆ ಅಧಿಕಾರಿಗಳಿಗೆ ಮತ್ತು ವಕೀಲರಿಗೆ ಹೇಳಲಾಗಿದೆ. ಈ ರೀತಿ ರಾಜಿ ಸಂಧಾನ ಮಾಡಿ ಪ್ರಕರಣಗಳನ್ನು ಇತ್ಯರ್ಥ ಮಾಡುವುದರಿಂದ ಹಣ ಮತ್ತು ಸಮಯದ ಉಳಿತಾಯ ಮಾನಸಿಕ ನೆಮ್ಮದಿ ಮತ್ತು ತ್ವರಿತ ನ್ಯಾಯಾಧಾನ ಆಗುತ್ತದೆ. ಈಗ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜೀ ಮಾಡಲು ಇಚ್ಚಿಸುವ ಎಲ್ಲರೂ ನ್ಯಾಯಾಲಯಕ್ಕೆ ಹಾಜರಾಗಿ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಬೇಕೆಂದು ವಿನಂತಿ.
ಜನರಿಗೆ ಲೋಕ್ ಅದಾಲತ್ ಬಗ್ಗೆ ತಿಳಿಯುವಂತೆ ಮಾಡಲು ಕಸ ವಿಲೇವಾರಿ ವಾಹನಕ್ಕೆ ನಮ್ಮ ಲೋಕ್ ಅದಾಲತ್ ಬಗೆಗಿನ ಒಂದು ಆಡಿಯೋ ತುಣುಕನ್ನು ನಾವು ಪುರಸಭೆಗೆ ನೀಡುತ್ತಿದ್ದು. ಪ್ರತಿ ವಾರ್ಡಿಗೆ ಕಸ ಸಂಗ್ರಹಿಸಲು ಹೋಗುವಾಗ ಸದರಿ ಹಾಡನ್ನು ಹಾಕಿ ಮನೆ ಮನೆಗೆ ನಮ್ಮ ಲೋಕ್ ಅದಾಲತ್ ನ ವಿಚಾರವನ್ನು ತಿಳಿಯುವಂತೆ ಮಾಡುತ್ತಿದ್ದೇವೆ ಎಂದರು
ತಾಲೂಕು ಕಾನೂನು ಸಮಿತಿಯ ಛೇರ್ಮನ್ – ಶ್ರೀಮತಿ ಪ್ರಕೃತಿ ಕಲ್ಯಾಣ್ ಪುರ, ಗೌ. ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
ಸಮಿತಿಯ ಸದಸ್ಯ ಕಾರ್ಯದರ್ಶಿಯವರು – ಶ್ರೀ ಶಿವಣ್ಣ ಎಚ್. ಆರ್., ಗೌ. ಪ್ರಧಾನ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
– ಶ್ರೀ ಯೋಗೇಂದ್ರ ಶೆಟ್ಟಿ, ಗೌ. ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
– ಶ್ರೀ ಜಿ. ಜಗನ್ನಾಥ ರೈ, ವಕೀಲರು
– ಅಧ್ಯಕ್ಷರು, ವಕೀಲರ ಸಂಘ (ರಿ.) ಪುತ್ತೂರು.ಉಪಸ್ಥಿತರಿದ್ದರು