• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

December 25, 2025
ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

December 24, 2025
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

December 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

December 24, 2025
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

December 24, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರಿನಲ್ಲಿ  ಸೆಟ್ಟಿಂಗ್ ರಾಜಕೀಯ ಅನಾವರಣ

by ಪ್ರಜಾಧ್ವನಿ ನ್ಯೂಸ್
June 30, 2025
in ಕ್ರೈಮ್, ಪುತ್ತೂರು
0
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ
181
SHARES
518
VIEWS
ShareShareShare

ಪುತ್ತೂರು:ʼನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ. ಹಿಂದೂ ಸಂಘಟನೆಯ ಮುಖಂಡರಿಂದಲೂ, ಶಾಸಕರಿಂದಲೂ, ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ನಮಗೆ ಎಲ್ಲಿ ನೋಡಿದರೂ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ. ಎಲ್ಲಿಯೂ ಪ್ರತಿಭಟನೆಗೂ ಸಿದ್ಧ ಎಂದು ಸಂತ್ರಸ್ತೆ ಯುವತಿಯ ತಾಯಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

camera center ad

ಜಾಹೀರಾತು

ಪಿ.ಜಿ.ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್‌ಗೆ ನನ್ನ ಮಗಳೊಂದಿಗೆ ಲವ್ ಇತ್ತು. ಆಕೆ 8 ರಿಂದ 10ನೇ ತರಗತಿಯ ತನಕ ರಾಮಕೃಷ್ಣ ಶಾಲೆಗೆ ಹೋಗಿದ್ದಳು. ಅಲ್ಲಿಂದ ನಂತರ ಮಂಗಳೂರಿನಲ್ಲಿ ಸಯನ್ಸ್ ವಿದ್ಯಾರ್ಥಿನಿಯಾಗಿ, ವಿದ್ಯಾರ್ಜನೆ ಪೂರ್ಣಗೊಳಿಸಿದ್ದಾಳೆ. ಈ ನಡುವೆ ಆಕೆ ಗರ್ಭಿಣಿಯಾಗಿರುವ ವಿಚಾರವನ್ನು ಶ್ರೀಕೃಷ್ಣನೇ ನನ್ನ ಬಳಿ ಬಂದು ಆಂಟಿ ನಮ್ಮಿಂದ ತಪ್ಪಾಗಿದೆ ಎಂದು ಹೇಳಿ ವಿಷಯ ತಿಳಿಸಿದ್ದ. ಈ ವಿಚಾರವನ್ನು ಅವನ ತಂದೆಗೂ ತಿಳಿಸಿದ್ದೆ. ಆಗ ಅವರೇ ಹಾಗಾದರೆ ಮದುವೆ ಮಾಡಿಸಿ ಬಿಡುವ ಎಂದು ತಿಳಿಸಿದ್ದರು. ಹಾಗೆ ಗರ್ಭಿಣಿಯ ಪರೀಕ್ಷೆಗೆಂದು ಪಿ.ಜಿ.ಜಗನ್ನಿವಾಸ ರಾವ್, ಅವರ ಪತ್ನಿ ಹಾಗು ನಾನು ಮತ್ತು ಮಗಳು ಜೊತೆಯಲ್ಲೇ ಅಥೇನಾ ಆಸ್ಪತ್ರೆಗೆ ಹೋದಾಗ ಮಗುವನ್ನು ತೆಗೆಸುವಂತೆ ಪರೀಕ್ಷೆ ಮಾಡಿದಾಗ ಆಕೆಗೆ 7 ತಿಂಗಳಾಗಿರುವುದರಿಂದ ಕಷ್ಟ ಸಾಧ್ಯ ಎಂದಿದ್ದರು. ಮತ್ತೆ 2ನೇ ಸಲಹೆ ಪಡೆಯಲು ಶ್ರೀಕೃಷ್ಣನ ತಂದೆ ತಾಯಿ ಹಾಗು ನಾನು ನನ್ನ ಗಂಡ, ನನ್ನ ತಂಗಿ ಗಂಡ ಜೊತೆಯಾಗಿ ದೇರಳಕಟ್ಟೆ ಆಸ್ಪತ್ರೆಗೆ ಹೋದಾಗ ಸ್ಕ್ಯಾನಿಂಗ್ ಮಾಡಿದಾಗ ಏಳುವರೆ ತಿಂಗಳು ಆಗಿದೆ. ಇದು ಸಾಧ್ಯವಿಲ್ಲ ಎಂದಿದ್ದರು.

ಈ ನಡುವೆ ಶ್ರೀಕೃಷ್ಣನ ತಾಯಿ ನಮ್ಮಲ್ಲಿ ನನ್ನ ಮಗನೊಂದಿಗೆ ಮದುವೆಗೆ ಕನಸಿನಲ್ಲೂ ಗ್ರಹಿಸಬೇಡಿ ಎಂದಿದರಲ್ಲದೆ ಬಂಟ್ವಾಳದ ಡಾಕ್ಟರ್‌ನ ಪರಿಚಯವಿದೆ. ಅವರು ಎಲ್ಲಾ ವ್ಯವಸ್ಥೆ ಮಾಡುತ್ತಾರೆ ಎಂದಾಗ ನನ್ನ ಮಗಳಿಗೆ ತೊಂದರೆ ಆಗುವ ಲಕ್ಷಣ ಕಂಡು ನಾನು ಹಿಂಜರಿದೆ. ಆಗ ಅವರ ಪುತ್ರ ನನಗೆ ಕರೆ ಮಾಡಿ ಆಂಟಿ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಹೇಳಿದ. ಈ ಕುರಿತು ನಾನು ಪೊಲೀಸರಿಗೆ ದೂರು ನೀಡಲು ಮುಂದಾದಾಗ ನನ್ನ ಗಂಡ ಮತ್ತು ಪಿ.ಜಿ.ಜಗನ್ನಿವಾಸ ರಾವ್ ಅವರು ಒಂದೇ ಕ್ಲಾಸ್‌ಮೆಟ್ ಆಗಿದ್ದರಿಂದ ನನ್ನ ಗಂಡ ದೂರು ಕೊಡುವುದು ಬೇಡ. ಯಾರಿಗೂ ಗೊತ್ತಾಗುವುದು ಬೇಡ. ಅವರು ನನಗೆ ಪರಿಚಯ ಇದೆ. ಅವರು ಮದುವೆ ಮಾಡಿಕೊಟ್ಟಾರೂ ಎಂದಿದ್ದರು. ಆದರೆ ಪಿ.ಜಿ.ಜಗನ್ನಿವಾಸ ರಾವ್ ಅವರ ನಡವಳಿಕೆ ಸಂಶಯವಿದ್ದರಿಂದ ನಾನು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆ. ಆ ಸಂದರ್ಭ ಹುಡುಗನನ್ನು ಪೊಲೀಸರು ಕರೆಸಿದ್ದರು. ಆಗ ಮತ್ತೆ ಮದುವೆಯ ರಾಜಿ ಪಂಚಾತಿಕೆಗೆ ಶಾಸಕರ ಪ್ರವೇಶವಾಯಿತು ಎಂದು ಆರೋಪಿಸಿದರು.

ನಾನು ಜೂ.22ಕ್ಕೆ ಮಹಿಳಾ ಪೊಲೀಸ್ ಸ್ಟೇಷನ್‌ನಲ್ಲಿ ದೂರು ನೀಡಲು ಹೋದಾಗ ಪಿ.ಜಿ.ಜಗನ್ನಿವಾಸ ರಾವ್ ಅವರು ಠಾಣೆಗೆ ಬಂದು ನನ್ನ ಮಗನಿಗೆ 21 ವರ್ಷ ಆದ ತಕ್ಷಣ ರಿಜಿಸ್ಟರ್ ಮದುವೆ ಮಾಡಿಸುತ್ತೇನೆ ಎಂದು ಹೇಳಿ ಬಳಿಕ ಶಾಸಕರಿಗೆ ಕರೆ ಮಾಡಿದ್ದರು. ಶಾಸಕರ ಕರೆಯನ್ನು ನನಗೆ ಕೊಟ್ಟು ಶಾಸಕರೊಂದಿಗೆ ಮಾತನಾಡಲು ತಿಳಿಸಿದರು. ಶಾಸಕರು ಪೋನ್‌ನಲ್ಲಿ ನನ್ನಲ್ಲಿ ಮಾತನಾಡಿ ಎಫ್‌ಐಆರ್ ಈಗ ಮಾಡಬೇಡಿ. ಜೂ.23ಕ್ಕೆ ಆವನಿಗೆ 21 ವರ್ಷ ಆದ ಬಳಿಕ ಅವರು ಮದುವೆ ಒಪ್ಪಿದಾರಲ್ಲ ಎಂದರು. ಹಾಗೆ ಠಾಣೆಯಲ್ಲಿ ಮುಚ್ಚಳಿಕೆ ಬರೆಸಿ ಇತ್ಯರ್ಥ ಆಗಿತ್ತು. ಆದರೆ ಹುಡುಗನಿಗೆ 21 ವರ್ಷ ಆದ ಬಳಿಕ ಅವರು ಮದುವೆ ಒಪ್ಪದಿರುವುದನ್ನು ಶಾಸಕರಿಗೆ ಕರೆ ಮಾಡಿ ತಿಳಿಸಿದೆ. ಅದಕ್ಕೆ ಅವರು ಮದುವೆಗೆ ಒಪ್ಪದಿದ್ದರೆ ನಿಮಗೆ ಹೇಗೆ ಬೇಕೋ ಹಾಗೆ ಕೇಸ್ ಮುಂದುವರಿಸಿ ಎಂದು ಹೇಳಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ಹುಡುಗನಿಗೆ 21 ವರ್ಷ ಆದ ಬಳಿಕ ನಮ್ಮ ಮನೆಯಲ್ಲೇ ಶ್ರೀಕೃಷ್ಣ, ಅವನ ತಂದೆ ಪಿ.ಜಿ.ಜಗನ್ನಿವಾಸ ರಾವ್, ಅವರ ಅಣ್ಣ ಮತ್ತು ಲಕ್ಷ್ಮೀ ಬೆಟ್ಟದ ಅಣ್ಣತಮ್ಮಂದಿರು ಬಂದು ಮಾತುಕತೆ ನಡೆಸಿದರು. ಅವರು ನಮಗೆ ಹಲವು ರೀತಿಯಲ್ಲಿ ಮಗಳ ಮೇಲೆಯೇ ಸಂಶಯದ ರೀತಿಯಲ್ಲಿ ಪ್ರಶ್ನೆ ಮಾಡಿದರು. ಮಗು ನನ್ನದಲ್ಲ ಎಂದು ಹುಡುಗನೇ ಹೇಳಿ ಆಕೆಗೆ ಹಲ್ಲೆಗೂ ಯತ್ನಿಸಿದ. ಮಾತುಕತೆಗೆ ಬಂದವರು ಮನೆ ಬಿಟ್ಟು ಹೋಗುವಂತೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ನನ್ನ ಮಗಳನ್ನು ಮದುವೆ ಆಗಲು ಒಪ್ಪದ ಶ್ರೀಕೃಷ್ಣನ ವಿರುದ್ಧ ನಾವು ಜೂ.24ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದೇವೆ. ಆದರೆ ಪೊಲೀಸರು ಅವರನ್ನು ವಿಚಾರಣೆ ಕರೆದಿಲ್ಲ. ಪೊಲೀಸರನ್ನು ಈ ಕುರಿತು ಪ್ರಶ್ನಿಸಿದರೆ ಶ್ರೀಕೃಷ್ಣ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ತಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ. ಶ್ರೀಕೃಷ್ಣ ಓಡಿ ಹೊದದಲ್ಲ ಮನೆಯವರೇ ಅವನನ್ನು ಮುಚ್ಚಿಟ್ಟಿದ್ದಾರೆ. ಪೊಲೀಸರು ಪ್ರಯತ್ನ ಪಟ್ಟರೆ ಆತನನ್ನು ಪತ್ತೆ ಮಾಡುವುದು ಕಷ್ಟವಿಲ್ಲ. ಈ ಕುರಿತು ಎಸ್ಪಿಯವರಲ್ಲೂ ಹೋಗಿ ತಿಳಿಸಿದ್ದೇವೆ. ಅವರು ಯುವಕನ ಕ್ಲೂ ಸಿಕ್ಕಿದೆ ಎಂದು ಹೇಳುತ್ತಾರೆ ಹೊರತು ಇಲ್ಲಿನ ತನಕ ಪತ್ತೆ ಮಾಡಿಲ್ಲ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

ಹಿಂದೂ ಆಗಿ ನಮ್ಮಲ್ಲೇ ಅನ್ಯಾಯ ಆದಾಗ ನನ್ನ ಮಗಳಿಗೆ ನ್ಯಾಯಕ್ಕಾಗಿ ಹಿಂದು ಸಂಘಟನೆಯ ಮುಖಂಡರಲ್ಲೂ ಮನವಿ ಮಾಡಿದ್ದೇವೆ. ಅವರಲ್ಲಿ ಮಾತನಾಡಿದಾಗ ಅವರು ಹುಡುಗ ಒಪ್ಪುತ್ತಿಲ್ಲ ಎಂದು ಹೇಳಿದರಲ್ಲೆ 10ಲಕ್ಷ ಕೊಟ್ಟರೆ ಆಗಬಹುದಾ ಎಂದು ಕೇಳಿದ್ದಾರೆ. ನಾನು 10 ಲಕ್ಷವಲ್ಲ 1 ಕೋಟಿ ಕೊಟ್ಟರು ನಾನು ನ್ಯಾಯ ಸಿಗದೆ ಬಿಡುವುದಿಲ್ಲ ಎಂದು ಹೇಳಿದ್ದೆ. ಮಂಗಳೂರಿನಲ್ಲೂ ಶರಣ್‌ಪಂಪ್‌ವೆಲ್ ಅವರಲ್ಲಿ ಪೋನ್‌ನಲ್ಲಿ ಕರೆ ಮಾಡಿ ಮನವಿ ಮಾಡಿದ್ದೆವು. ಅವರು ಮಗುವನ್ನು ಡೊನೆಟ್ ಮಾಡಬಹುದಾ ಎಂದು ಕೇಳಿದ್ದರು. ಅರುಣ್ ಕುಮಾರ್ ಪುತ್ತಿಲರಲ್ಲೂ ಮಾತನಾಡಿದಾಗ ಇದರಲ್ಲಿ ನಾನು ಬಂದ್ರೆ ತಪ್ಪಾಗುತ್ತದೆ ಎಂದು ಹೇಳಿ ಕೈಚೆಲ್ಲಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಈ ವಿಚಾರದಲ್ಲಿ ಪುತ್ತೂರಿನಲ್ಲಿ  ಸೆಟ್ಟಿಂಗ್ ರಾಜಕೀಯ ಅನಾವರಣ

ಶಾಸಕರ ಸ್ಪಷ್ಟನೆ : ಯುವತಿಯ ತಾಯಿ ಕರೆ ಮಾಡಿ ಇದೇ ವಿಚಾರವನ್ನು ಹೇಳಿ ಜಗನ್ನಿವಾಸ್ ರಾವ್ ಮಗ ನನ್ನ ಮಗಳನ್ನು ಮದುವೆಯಾಗುವುದಾಗಿ ಹೇಳಿದ್ದಾರೆ 21 ವರ್ಷ ಪ್ರಾಯ ಪೂರ್ತಿಯಾಗಿಲ್ಲ ಆದ ಕೂಡಲೇ ಮದುವೆಯಾಗುತ್ತಾರೆ ಎಂದು ನನ್ನಲ್ಲಿ ಹೇಳಿದ್ದರು. ಆಗ ನಾನು ಅವರಲ್ಲಿ ” ಮದುವೆಯಾಗುವುದಾಗಿ ಒಪ್ಪಿಕೊಂಡಲ್ಲಿ ಕೇಸು ಯಾಕೆ? ನಿಮ್ಮೊಳಗೆ ರಾಜಿ ಮಾತುಕತೆ ನಡೆಸಿದ್ದೀರಲ್ಲ ಮದುವೆಯಾಗುವುದಾದರೆ ಸಮಸ್ಯೆ ಇತ್ಯರ್ಥವಾಯಿತಲ್ಲ ಎಂದು ಹೇಳಿದಾಗ ಮಹಿಳೆ ಹೌದು ಎಂದು ಹೇಳಿದ್ದರು. ಆ ನಂತರ ಕೆಲವು ವಾರಗಳ ಬಳಿಕ ಇತ್ಗೀಚೆಗೆ ಮಹಿಳೆ ಕರೆ ಮಾಡಿ ಅವನು ಮದುವೆಯಾಗುದಿಲ್ವಂತೆ ಏನು ಮಾಡುವುದು ಎಂದು ಹೇಳಿದ್ದರು. ಮದುವೆಯಾಗದೇ ಇದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಯಲಿ ಎಂದು ಹೇಳಿದ್ದೆ ವಿನಾ ನಾನು ಬೇರೇನು ಹೇಳಿಲ್ಲ. ನಾನು ಯಾವುದೇ ಅನ್ಯಾಯ ಯಾರಿಗೂ ಮಾಡಿಲ್ಲ, ಅನ್ಯಾಯ ಮಾಡಿ ನಾನು ಗಳಿಸುವಂತದ್ದೇನಿಲ್ಲ. ಈಗ ಪ್ರಕರಣ ದಾಖಲಾಗಿದೆ,ಮುಂದೆ ಕಾನೂನು ಪ್ರಕಾರವೇ ನಡೆಯಲಿದೆ.

 

SendShare72Share
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..