ಪುತ್ತೂರು: ಮದುವೆಯಾಗುವುದಾಗಿ ವಂಚನೆಗೊಳಪಟ್ಟ ಸಂತ್ರಸ್ಥೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರೆಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿ, ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.
ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬರ್ಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ ಇರುತ್ತೇವೆ ಎಂದು ಹೇಳಿದ್ದೇವೆ ಎಂದ ಅವರು ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ದರಿದ್ದೇವೆ ಎಂದರು.
ಸಂತ್ರಸ್ತೆಯ ತಾಯಿ ಮಾಧ್ಯಮದ ಮುಂದೆ ಮಾತನಾಡಿ ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಹೇಳುತ್ತೇನೆ ಎಂದರು.ಈ ಸಂದರ್ಭ ಬಜರಂಗದಳ, ವಿಶ್ವಹಿಂದೂ ಪರಿಷದ್ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.