ಸ್ಯಾಂಡಲ್ವುಡ್ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.
ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.
ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.