• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

August 9, 2025
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 6, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
August 9, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ
19
SHARES
54
VIEWS
ShareShareShare

ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಯಾರೇ ಕಾರ್ಯಕ್ರಮ ಮಾಡಲಿ ಅವರೆಲ್ಲ ನಮ್ಮವರು ಎಂಬ ಭಾವನೆ ಮೂಡಿದಾಗ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು.

ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ,ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ದೇವಳದ ನಟರಾಜ ವೇದಿಕೆಯಲ್ಲಿ ಆ.8ಕ್ಕೆ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಇವತ್ತು ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯುತ್ತಿದೆ. ನಾಡಿದ್ದು ಇನ್ನೊಂದು ಸಂಘಟನೆಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಚೌತಿ, ಕಂಬಳೋತ್ಸವ, ಪಿಲಿಗೊಬ್ಬು, ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಸಂಘಟನೆಗಳು ಬೇರೆ ಬೇರೆ ಆಗಿರಬಹುದು. ಆದರೆ ಇವರೆಲ್ಲರು ನಮ್ಮವರು ಎಂಬ ಭಾವನೆ ಮೂಡಿದಾಗ ಮಾತ್ರ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಪೂರ್ವಜರು ಮಾಡಿದ ಪುಣ್ಯದ ಫಲ ಎಂದ ಅವರು, ಇಂತಹ ಸಂಘಟನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಬೆನ್ನೆಲುಬಾಗಿ ನಿಂತು ಕೆಲಸ ಮಾಡುತ್ತೇವೆ ಎಂದರು.

7 ತಿಂಗಳಲ್ಲಿ ಭಕ್ತರ ಆಶೀರ್ವಾದದಿಂದ ಹಲವಾರು ಬದಲಾವಣೆ ತಂದಿದ್ದೇವೆ. ಅನ್ನಪ್ರಸಾದ ವಿತರಣೆ ವ್ಯವಸ್ಥೆ, ಶುದ್ದ ಎಳ್ಳೆಣ್ಣೆ, ಶುದ್ಧ ಕುಂಕುಮ, ಶುದ್ಧ ತುಪ್ಪ ಸಮರ್ಪಣೆ ಆಗಿರಬಹುದು.ಇವೆಲ್ಲವೂ ಇವತ್ತು ದೇವಳದಲ್ಲಿ ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ದೈವಜ್ಞರ ಸಲಹೆಯಂತೆ ರಕ್ತೇಶ್ವರಿ ದೇವಿಯನ್ನು ದೇವಸ್ಥಾನದ ಒಳಗೆ ತಂದ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದ ಚಿತ್ರಣವೇ ಬದಲಾಯಿತು. ಧರ್ಮಸ್ಥಳ, ಸುಬ್ರಹ್ಮಣ್ಯ, ಸೌತಡ್ಕ ಕ್ಷೇತ್ರದಲ್ಲಿ ಹೊರಗಿನಿಂದ ಬಂದು ಭಕ್ತರು ಕಾಣಿಕೆ ಹಾಕುತ್ತಾರೆ.ಆದರೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಮ್ಮವರೇ ನಮ್ಮ ಊರಿನವರೇ ಬಂದು ದೇಣೀಗೆ ನೀಡಿ ದೇವಸ್ಥಾನವನ್ನು ವ್ಯವಸ್ಥಿತ ರೂಪದಲ್ಲಿ ನಡೆಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ ಎಂದರು.

ಇವತ್ತು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾನು ಅಧ್ಯಕ್ಷ, ವ್ಯವಸ್ಥಾಪನಾ ಸಮಿತಿ ಇರಬಹುದು. ಆದರೆ ಇಲ್ಲಿ ನಾವು ವ್ಯವಸ್ಥೆಗೆ ಮಾತ್ರ ಅಧ್ಯಕ್ಷ. ದೇವರ ಸೇವೆ ಮಾಡುವವರು. ದೇವಳದ ಅಭಿವೃದ್ದಿ ಕೆಲಸದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು.ನಾನಾಗಲಿ, ನಮ್ಮ ಸಮಿತಿಯಾಗಲಿ ತಪ್ಪು ಮಾಡಿದರೆ ತಿಳಿಸಿ. ನಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ತಿದ್ದಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಈಶ್ವರ ಭಟ್ ಪಂಜಿಗುಡ್ಡೆಯವರು ಹೇಳಿದರು.

vishnu studio

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ,ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಮಾತನಾಡಿ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಅರುಣ್ ಕುಮಾರ್ ಪುತ್ತಿಲ ವರಮಹಾಲಕ್ಷ್ಮೀ ಪೂಜೆ ಆರಂಭಿಸಿ 2 ವರ್ಷದ ಬಳಿಕ ನನಗೆ ತಂದು ಕೊಟ್ಟರು.ನಾವು ಶುರು ಮಾಡಿ ಇವತ್ತಿಗೆ 18 ವರ್ಷ ಆಗಿದೆ. ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ. ಯಾಕೆಂದರೆ ಕಂಬಳಕ್ಕೂ ಅಪವಾದ ಇತ್ತು, ಆ ಅಪವಾದ ಹೋಗಿ ಈಗ ಬಹಳಷ್ಟು ಜನರು ಕಂಬಳಕ್ಕೆ ಕರೆಯದವರೂ ಬಂದು ಅಲ್ಲಿ ಕೂತು ದೊಡ್ಡ ಹುದ್ದೆಗೆ ಹೋಗುತ್ತಿದ್ದಾರೆ.

ವರಮಹಾಲಕ್ಷ್ಮೀ ಪೂಜೆಗೂ ಅದೇ ಕಳಂಕ ಆಗಿತ್ತು. ಅದೆಲ್ಲವನ್ನೂ ಮೀರಿ ಯಾರೆಲ್ಲಾ ಪೂಜೆಯಲ್ಲಿ ಭಾಗವಹಿಸಿದ್ದಾರೋ, ಪೂಜೆ ಮಾಡಿಸಿದ್ದಾರೋ ಅವರೆಲ್ಲರೂ ಇವತ್ತು ಸಮಾಜದ ಉನ್ನತ ಹುದ್ದೆಗೆ ಹೋಗಿದ್ದಾರೆ. ಅಂತಹ ಶಕ್ತಿ ವರಮಹಾಲಕ್ಷ್ಮೀ ಪೂಜೆಗಿದೆ. ವೇ.ಮೂ ಹರಿಪ್ರಸಾದ್ ವೈಲಾಯ ಅವರು ಇಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭದಿಂದಲೇ ಪೌರೋಹಿತ್ವ ಮಾಡುತ್ತಿದ್ದಾರೆ ಎಂದರು.

ವರಮಹಾಲಕ್ಷ್ಮೀ ವಿಚಾರದಲ್ಲಿ ದೇವಸ್ಥಾನದ ಸಮಿತಿಯೊಂದಿಗೆ ಯಾವ ಕೋಪವೂ ಇಲ್ಲ. ಲೋಕೇಶರು ಗೊಂದಲಕ್ಕೆ ಪರಿಹಾರ ಎಂದು ಹಾಕಿದ್ದರು. ಆದರೆ ಶಕು ಅಕ್ಕ ಯಾವತ್ತೂ ಯಾರಲ್ಲೂ ಗ್ಯಾಪ್ ಇಟ್ಟುಕೊಳ್ಳುವುದಿಲ್ಲ. ನಾನು ನಿನ್ನೆಯೂ ಯಾವಾಗಲೂ ಹೋಗುವಂತೆ ದೇವಸ್ಥಾನಕ್ಕೆ ಮಧ್ಯಾಹ್ನದ ಅನ್ನಪ್ರಸಾದ ಸೇವನೆಗೆ ಹೋಗಿದ್ದೇ ಹೊರತು ರಾಜಿಪಂಚಾತಿಕೆಗೆ ಅಲ್ಲ. ರಾಜಿ ಆಗಲು ನಮಗೆ ಕೋಪ ಆಗಿದ್ದರೆ ತಾನೆ, ನಮಗೆ ಕೋಪವೇ ಆಗಿಲ್ಲ. ಅವರ ಮನೆಗೆ ನಾನು ಹೋಗುತ್ತೇನೆ. ಆದರೆ ಇಲ್ಲಿ ಮಹಾಲಿಂಗೇಶ್ವರನೇ ನನಗೆ ಈ ರೀತಿ ಮಾಡಿಸಿದ್ದು ಎಂದು ಅನಿಸಿದೆ. ಯಾಕೆಂದರೆ ಸ್ವಲ್ಪ ಗೊಂದಲ ಆಗಿತ್ತು. ಮೊನ್ನೆ ಒಂದು ವಾಟ್ಸಪ್‌ನಲ್ಲಿ ಬಂದ ನ್ಯೂಸ್ ನೋಡಿ ಎಲ್ಲರೂ ಕರೆ ಮಾಡಿ ಶಕು ಅಕ್ಕ 5 ಸಾವಿರ ಮಂದಿಗೆ ನನ್ನ ಕಡೆಯಿಂದ ಊಟ, ಹಾಗೆ ಹೀಗೆಂದು, ನನ್ನಿಂದ 5 ಪೈಸೆ ಪ್ರಯೋಜನ ಪಡೆಯದವರು, ನಾವು 5 ಪೈಸೆ ವ್ಯಾಪಾರವನ್ನೇ ಮಾಡದವರು ಕೂಡಾ ನನಗೆ ಕರೆ ಮಾಡಿ ಹೇಳಿದ್ದಾರೆ.ಅದರಲ್ಲಿ ಜ್ಯುವೆಲ್ಲರ‍್ಸ್‌ನ ಉದ್ಯಮಿಯೊಬ್ಬರು ಶಕು ಅಕ್ಕ ಏನು ಬೇಕೆಂದು ಕೇಳಿದರು.

Poorna squash

ಜಾಹೀರಾತು

ಪಾಣಾಜೆಯಿಂದ ಅಕ್ಕಿ ಬೇಕ, ತೆಂಗಿನ ಕಾಯಿ ಬೇಕಾ ಎಂದು ಕೇಳಿದ್ದಾರೆ. ಇದನ್ನೆಲ್ಲ ಕೇಳುವಾಗ ಮಹಾಲಿಂಗೇಶ್ವರ ದೇವರು 18ನೇ ವರ್ಷದ ಪೂಜೆಯಲ್ಲಿ ನಿಮ್ಮ ಜೊತೆ ನಾನಿದ್ದೇನೆ ಎಂದು ನಮಗೆ ಗೊತ್ತಾಗಲು ಬೇಕಾಗಿ ಸಣ್ಣ ನಾಟಕ ಆಡಿದ್ದಾನೆ ಎಂದು ನನಗೆ ಅನಿಸಿದೆ. ನನಗೂ ಪ್ರಾಯ ಆಗಿದೆ.ಗಂಗಕ್ಕನಿಗೂ, ಶುಭಕ್ಕನಿಗೂ ಪ್ರಾಯ ಆಗಿದೆ.ಆದರೆ ಪ್ರಾಯದವರನ್ನು ತಾಯಿ ಸ್ಥಾನದಲ್ಲಿಟ್ಟು ನನ್ನನ್ನು ಅಕ್ಕನ ಸ್ಥಾನದಲ್ಲಿಟ್ಟು ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವಾಗ ಮನಸ್ಸು ತೃಪ್ತಿಯಾಗಿದೆ. ಯಾರು ಏನು ಕೊಡುವುದು ಬೇಡ.ನಿಮ್ಮ ಬೆಂಬಲ ನಮಗಿರಲಿ. ಮಹಾಲಿಂಗೇಶ್ವರನ ಅನುಗ್ರಹ ಇದ್ದರೆ ಸಾಕು. ನಾವು 15 ದಿನದ ಹಿಂದೆಯೇ ಅನ್ನಪ್ರಸಾದ ತಯಾರಿಸಲು ಹರೀಶ್ ಭಟ್ ಅವರನ್ನು ಹೇಳಿ ಆಗಿದೆ. ಏನೂ ಸಮಸ್ಯೆ ಇಲ್ಲ. ಇನ್ನು ಪತ್ರಿಕೆಯಲ್ಲಿ ಬರೆದ ಅಥವಾ ಓದಿದ್ದರಲ್ಲಿ, ಕೇಳಿದ್ದರಲ್ಲಿ ವ್ಯತ್ಯಾಸ ಇರಬಹುದು. ನನಗೂ ಕಮಿಟಿಗೂ ಯಾರಿಗೂ ಕೋಪ ಇಲ್ಲ.ನಾವು ಅಕ್ಕ ತಮ್ಮಂದಿರ ಹಾಗೆ ಇದ್ದೇವೆ. ಲೋಕೇಶರಲ್ಲಿ ತಮಾಷೆಗೆ ಹೇಳಿ, ಅದನ್ನು ಹಾಕಬೇಡಿ ಎಂದು ಹೇಳಿದ್ದೆ. ಆದರೆ ಅವರು ಹಾಕಿದ್ದಾರೆ. ಒಟ್ಟಿನಲ್ಲಿ ಮಹಾಲಿಂಗೇಶ್ವರನ ಈ ಜಾಗದಲ್ಲಿ ಏನೇ ಆಗಲಿ ಅದು ಗಣೇಶೋತ್ಸವ, ಕೃಷ್ಣ, ವರಮಹಾಲಕ್ಷ್ಮೀ ಇರಲಿ ಎಲ್ಲದಕ್ಕೂ ಮೂಲ ಮಹಾಲಿಂಗೇಶ್ವರ.ಇಲ್ಲಿ ನಾನು ಎಂದು ಹೇಳಿದವರನ್ನು ಇಳಿಸ್ತಾನೆ. ನಾವು, ನಮ್ಮಿಂದ ನೀನೇ ಮೇಲೆ ಎಂದು ಹೇಳಿದವರನ್ನು ಎತ್ತಿ ಮೇಲೆ ಕೂರಿಸುತ್ತಾನೆ ಎಂದರು.

ಮಂಗಳೂರು ಶ್ರೀನಿವಾಸ ಕಾಲೇಜಿನ ಉಪನ್ಯಾಸಕಿ ಡಾ|ವೀಣಾ ಸಂತೋಷ್ ರೈ ಅವರು ಮಾತನಾಡಿ ದಿನ ನಿತ್ಯದ ಜೀವನದಲ್ಲಿ ಒಳ್ಳೆಯ ಸಂಸ್ಕೃತಿಯನ್ನು ಅಳವಡಿಸುವ ಕೆಲಸ ಮಾಡಬೇಕು. ಜೀವನದ ಎಲ್ಲಾ ದಿನವನ್ನು ಉತ್ತಮ ದಿನವನ್ನಾಗಿ ನೋಡಬೇಕು. .ನಮ್ಮ ಹಬ್ಬಗಳು ಸೀಮಿತವಾಗಬಾರದು.ನಮ್ಮೆಲ್ಲ ಸಂಸ್ಕಾರ, ಆಚಾರ ವಿಚಾರಗಳನ್ನು ಮುಂದಿನ ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.

Muliya

ಜಾಹೀರಾತು

ಮುಖ್ಯ ಅತಿಥಿ ರಕ್ಷಾ ಉಜ್ವಲ್ ಅವರು ಮಾತನಾಡಿ ಧಾರ್ಮಿಕ ಹಬ್ಬ ಹರಿದಿನಗಳಲ್ಲಿ ಪ್ರತಿ ಮನೆಯಲ್ಲೂ ಸಕಾರಾತ್ಮಕ ಬದಲಾವಣೆ ಆಗಲಿ ಎಂದು ಶುಭ ಹಾರೈಸಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕೃಷ್ಣವೇಣಿ ಅವರು ಮಾತನಾಡಿ ಮಹಾಲಕ್ಷ್ಮೀಯ ಆರಾಧನೆಯ ಮೂಲಕ ಎಲ್ಲರ ಮನದಲ್ಲೂ ಭಕ್ತಿಯ ಭಾವನೆ ಇರಲಿ. ಎಲ್ಲರಿಗೂ ತಾಯಿ ಸನ್ಮಂಗಲವನ್ನುಂಟು ಮಾಡಲಿ ಎಂದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ನಯನಾ ರೈ, ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ.ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಸಮಿತಿ ಸದಸ್ಯೆ ಜಯಂತಿ ಬಲ್ನಾಡು, ವಿಜಯ ಸರಸ್ವತಿ ಎಡಕ್ಕಾನ, ಪರಮೇಶ್ವರಿ ಶೆಟ್ಟಿ, ಶಾರದಾ ಕೇಶವ್, ರಾಜೇಶ್ವರಿ, ಯಮುನಾ, ವತ್ಸಲಾ ಪದ್ಮನಾಭ ಶೆಟ್ಟಿ, ಅನುಶ್ರೀ, ಮಲ್ಲಿಕಾ ಸುಭಾಶ್ ರೈ, ಅನ್ನಪೂರ್ಣ ಕುತ್ಯಾಡಿ ಅತಿಥಿಗಳನ್ನು ಗೌರವಿಸಿದರು.ಸೀತಾ ಭಟ್ ಪ್ರಾರ್ಥಿಸಿದರು.ಸ್ವರ್ಣಲತಾ ಹೆಗ್ಡೆ ಸ್ವಾಗತಿಸಿದರು. ಅನ್ನಪೂರ್ಣ ಕುತ್ಯಾಡಿ ವಂದಿಸಿದರು. ಶಾರದಾ ಅರಸ್ ಕಾರ್ಯಕ್ರಮ ನಿರೂಪಿಸಿದರು.

camera center ad

ಜಾಹೀರಾತು

ಸಭಾ ಕಾರ್ಯಕ್ರಮದ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯ ಮಹಾಪೂಜೆ ನಡೆಯಿತು.ಈ ಸಂದರ್ಭ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಕಲ್ಲೇಗ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ, ಯು.ಲೋಕೇಶ್ ಹೆಗ್ಡೆ, ಶ್ಯಾಮಸುಂದರ ರೈ, ಜೋಕಿಂ ಡಿ’ಸೋಜ, ಗ್ಯಾರೆಂಟಿ ಅನುಷ್ಠಾನದ ತಾಲೂಕು ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ, ಡಾ.ರಾಜಾರಾಮ್ ಕೆ.ಬಿ.ಉಪ್ಪಿನಂಗಡಿ ಸಹಿತ ಹಲವಾರು ಮಂದಿ ಪ್ರಮುಖರು ಪೂಜೆಯಲ್ಲಿ ಪಾಲ್ಗೊಂಡರು.ಸ್ವಯಂ ಸೇವಕರಾಗಿ ಭಾಗವಹಿಸಿದ್ದ ಕಲ್ಲೇಗದ ಸರ್ವೆಶ್ ಮತ್ತು ತಂಡವನ್ನು ಶಕುಂತಳಾ ಶೆಟ್ಟಿ ಅಭಿನಂದಿಸಿದರು. ಅನ್ನದಾನಕ್ಕೆ ಸಹಕರಿಸಿದವರನ್ನು ಗುರುತಿಸಲಾಯಿತು.

Keshari Durga

ಜಾಹೀರಾತು

 

SendShare8Share
Previous Post

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Next Post

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..