• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

August 9, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
August 9, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ವರಮಹಾಲಕ್ಷ್ಮೀ ಪೂಜೆ- ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ; ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ
19
SHARES
53
VIEWS
ShareShareShare

ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಯಾರೇ ಕಾರ್ಯಕ್ರಮ ಮಾಡಲಿ ಅವರೆಲ್ಲ ನಮ್ಮವರು ಎಂಬ ಭಾವನೆ ಮೂಡಿದಾಗ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು.

ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ,ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ದೇವಳದ ನಟರಾಜ ವೇದಿಕೆಯಲ್ಲಿ ಆ.8ಕ್ಕೆ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಇವತ್ತು ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯುತ್ತಿದೆ. ನಾಡಿದ್ದು ಇನ್ನೊಂದು ಸಂಘಟನೆಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಚೌತಿ, ಕಂಬಳೋತ್ಸವ, ಪಿಲಿಗೊಬ್ಬು, ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಸಂಘಟನೆಗಳು ಬೇರೆ ಬೇರೆ ಆಗಿರಬಹುದು. ಆದರೆ ಇವರೆಲ್ಲರು ನಮ್ಮವರು ಎಂಬ ಭಾವನೆ ಮೂಡಿದಾಗ ಮಾತ್ರ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಪೂರ್ವಜರು ಮಾಡಿದ ಪುಣ್ಯದ ಫಲ ಎಂದ ಅವರು, ಇಂತಹ ಸಂಘಟನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಬೆನ್ನೆಲುಬಾಗಿ ನಿಂತು ಕೆಲಸ ಮಾಡುತ್ತೇವೆ ಎಂದರು.

7 ತಿಂಗಳಲ್ಲಿ ಭಕ್ತರ ಆಶೀರ್ವಾದದಿಂದ ಹಲವಾರು ಬದಲಾವಣೆ ತಂದಿದ್ದೇವೆ. ಅನ್ನಪ್ರಸಾದ ವಿತರಣೆ ವ್ಯವಸ್ಥೆ, ಶುದ್ದ ಎಳ್ಳೆಣ್ಣೆ, ಶುದ್ಧ ಕುಂಕುಮ, ಶುದ್ಧ ತುಪ್ಪ ಸಮರ್ಪಣೆ ಆಗಿರಬಹುದು.ಇವೆಲ್ಲವೂ ಇವತ್ತು ದೇವಳದಲ್ಲಿ ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ದೈವಜ್ಞರ ಸಲಹೆಯಂತೆ ರಕ್ತೇಶ್ವರಿ ದೇವಿಯನ್ನು ದೇವಸ್ಥಾನದ ಒಳಗೆ ತಂದ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದ ಚಿತ್ರಣವೇ ಬದಲಾಯಿತು. ಧರ್ಮಸ್ಥಳ, ಸುಬ್ರಹ್ಮಣ್ಯ, ಸೌತಡ್ಕ ಕ್ಷೇತ್ರದಲ್ಲಿ ಹೊರಗಿನಿಂದ ಬಂದು ಭಕ್ತರು ಕಾಣಿಕೆ ಹಾಕುತ್ತಾರೆ.ಆದರೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಮ್ಮವರೇ ನಮ್ಮ ಊರಿನವರೇ ಬಂದು ದೇಣೀಗೆ ನೀಡಿ ದೇವಸ್ಥಾನವನ್ನು ವ್ಯವಸ್ಥಿತ ರೂಪದಲ್ಲಿ ನಡೆಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ ಎಂದರು.

ಇವತ್ತು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾನು ಅಧ್ಯಕ್ಷ, ವ್ಯವಸ್ಥಾಪನಾ ಸಮಿತಿ ಇರಬಹುದು. ಆದರೆ ಇಲ್ಲಿ ನಾವು ವ್ಯವಸ್ಥೆಗೆ ಮಾತ್ರ ಅಧ್ಯಕ್ಷ. ದೇವರ ಸೇವೆ ಮಾಡುವವರು. ದೇವಳದ ಅಭಿವೃದ್ದಿ ಕೆಲಸದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು.ನಾನಾಗಲಿ, ನಮ್ಮ ಸಮಿತಿಯಾಗಲಿ ತಪ್ಪು ಮಾಡಿದರೆ ತಿಳಿಸಿ. ನಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ತಿದ್ದಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಈಶ್ವರ ಭಟ್ ಪಂಜಿಗುಡ್ಡೆಯವರು ಹೇಳಿದರು.

Poorna squash

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ,ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಮಾತನಾಡಿ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಅರುಣ್ ಕುಮಾರ್ ಪುತ್ತಿಲ ವರಮಹಾಲಕ್ಷ್ಮೀ ಪೂಜೆ ಆರಂಭಿಸಿ 2 ವರ್ಷದ ಬಳಿಕ ನನಗೆ ತಂದು ಕೊಟ್ಟರು.ನಾವು ಶುರು ಮಾಡಿ ಇವತ್ತಿಗೆ 18 ವರ್ಷ ಆಗಿದೆ. ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಎಲ್ಲಾ ಕಾರ್ಯಕ್ರಮ ಅವನ ಆಶೀರ್ವಾದದಲ್ಲಿ ನಡೆಯುತ್ತದೆ. ಯಾಕೆಂದರೆ ಕಂಬಳಕ್ಕೂ ಅಪವಾದ ಇತ್ತು, ಆ ಅಪವಾದ ಹೋಗಿ ಈಗ ಬಹಳಷ್ಟು ಜನರು ಕಂಬಳಕ್ಕೆ ಕರೆಯದವರೂ ಬಂದು ಅಲ್ಲಿ ಕೂತು ದೊಡ್ಡ ಹುದ್ದೆಗೆ ಹೋಗುತ್ತಿದ್ದಾರೆ.

ವರಮಹಾಲಕ್ಷ್ಮೀ ಪೂಜೆಗೂ ಅದೇ ಕಳಂಕ ಆಗಿತ್ತು. ಅದೆಲ್ಲವನ್ನೂ ಮೀರಿ ಯಾರೆಲ್ಲಾ ಪೂಜೆಯಲ್ಲಿ ಭಾಗವಹಿಸಿದ್ದಾರೋ, ಪೂಜೆ ಮಾಡಿಸಿದ್ದಾರೋ ಅವರೆಲ್ಲರೂ ಇವತ್ತು ಸಮಾಜದ ಉನ್ನತ ಹುದ್ದೆಗೆ ಹೋಗಿದ್ದಾರೆ. ಅಂತಹ ಶಕ್ತಿ ವರಮಹಾಲಕ್ಷ್ಮೀ ಪೂಜೆಗಿದೆ. ವೇ.ಮೂ ಹರಿಪ್ರಸಾದ್ ವೈಲಾಯ ಅವರು ಇಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭದಿಂದಲೇ ಪೌರೋಹಿತ್ವ ಮಾಡುತ್ತಿದ್ದಾರೆ ಎಂದರು.

ashwinistudioputtur

ಜಾಹೀರಾತು

ವರಮಹಾಲಕ್ಷ್ಮೀ ವಿಚಾರದಲ್ಲಿ ದೇವಸ್ಥಾನದ ಸಮಿತಿಯೊಂದಿಗೆ ಯಾವ ಕೋಪವೂ ಇಲ್ಲ. ಲೋಕೇಶರು ಗೊಂದಲಕ್ಕೆ ಪರಿಹಾರ ಎಂದು ಹಾಕಿದ್ದರು. ಆದರೆ ಶಕು ಅಕ್ಕ ಯಾವತ್ತೂ ಯಾರಲ್ಲೂ ಗ್ಯಾಪ್ ಇಟ್ಟುಕೊಳ್ಳುವುದಿಲ್ಲ. ನಾನು ನಿನ್ನೆಯೂ ಯಾವಾಗಲೂ ಹೋಗುವಂತೆ ದೇವಸ್ಥಾನಕ್ಕೆ ಮಧ್ಯಾಹ್ನದ ಅನ್ನಪ್ರಸಾದ ಸೇವನೆಗೆ ಹೋಗಿದ್ದೇ ಹೊರತು ರಾಜಿಪಂಚಾತಿಕೆಗೆ ಅಲ್ಲ. ರಾಜಿ ಆಗಲು ನಮಗೆ ಕೋಪ ಆಗಿದ್ದರೆ ತಾನೆ, ನಮಗೆ ಕೋಪವೇ ಆಗಿಲ್ಲ. ಅವರ ಮನೆಗೆ ನಾನು ಹೋಗುತ್ತೇನೆ. ಆದರೆ ಇಲ್ಲಿ ಮಹಾಲಿಂಗೇಶ್ವರನೇ ನನಗೆ ಈ ರೀತಿ ಮಾಡಿಸಿದ್ದು ಎಂದು ಅನಿಸಿದೆ. ಯಾಕೆಂದರೆ ಸ್ವಲ್ಪ ಗೊಂದಲ ಆಗಿತ್ತು. ಮೊನ್ನೆ ಒಂದು ವಾಟ್ಸಪ್‌ನಲ್ಲಿ ಬಂದ ನ್ಯೂಸ್ ನೋಡಿ ಎಲ್ಲರೂ ಕರೆ ಮಾಡಿ ಶಕು ಅಕ್ಕ 5 ಸಾವಿರ ಮಂದಿಗೆ ನನ್ನ ಕಡೆಯಿಂದ ಊಟ, ಹಾಗೆ ಹೀಗೆಂದು, ನನ್ನಿಂದ 5 ಪೈಸೆ ಪ್ರಯೋಜನ ಪಡೆಯದವರು, ನಾವು 5 ಪೈಸೆ ವ್ಯಾಪಾರವನ್ನೇ ಮಾಡದವರು ಕೂಡಾ ನನಗೆ ಕರೆ ಮಾಡಿ ಹೇಳಿದ್ದಾರೆ.ಅದರಲ್ಲಿ ಜ್ಯುವೆಲ್ಲರ‍್ಸ್‌ನ ಉದ್ಯಮಿಯೊಬ್ಬರು ಶಕು ಅಕ್ಕ ಏನು ಬೇಕೆಂದು ಕೇಳಿದರು.

ಪಾಣಾಜೆಯಿಂದ ಅಕ್ಕಿ ಬೇಕ, ತೆಂಗಿನ ಕಾಯಿ ಬೇಕಾ ಎಂದು ಕೇಳಿದ್ದಾರೆ. ಇದನ್ನೆಲ್ಲ ಕೇಳುವಾಗ ಮಹಾಲಿಂಗೇಶ್ವರ ದೇವರು 18ನೇ ವರ್ಷದ ಪೂಜೆಯಲ್ಲಿ ನಿಮ್ಮ ಜೊತೆ ನಾನಿದ್ದೇನೆ ಎಂದು ನಮಗೆ ಗೊತ್ತಾಗಲು ಬೇಕಾಗಿ ಸಣ್ಣ ನಾಟಕ ಆಡಿದ್ದಾನೆ ಎಂದು ನನಗೆ ಅನಿಸಿದೆ. ನನಗೂ ಪ್ರಾಯ ಆಗಿದೆ.ಗಂಗಕ್ಕನಿಗೂ, ಶುಭಕ್ಕನಿಗೂ ಪ್ರಾಯ ಆಗಿದೆ.ಆದರೆ ಪ್ರಾಯದವರನ್ನು ತಾಯಿ ಸ್ಥಾನದಲ್ಲಿಟ್ಟು ನನ್ನನ್ನು ಅಕ್ಕನ ಸ್ಥಾನದಲ್ಲಿಟ್ಟು ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವಾಗ ಮನಸ್ಸು ತೃಪ್ತಿಯಾಗಿದೆ. ಯಾರು ಏನು ಕೊಡುವುದು ಬೇಡ.ನಿಮ್ಮ ಬೆಂಬಲ ನಮಗಿರಲಿ. ಮಹಾಲಿಂಗೇಶ್ವರನ ಅನುಗ್ರಹ ಇದ್ದರೆ ಸಾಕು. ನಾವು 15 ದಿನದ ಹಿಂದೆಯೇ ಅನ್ನಪ್ರಸಾದ ತಯಾರಿಸಲು ಹರೀಶ್ ಭಟ್ ಅವರನ್ನು ಹೇಳಿ ಆಗಿದೆ. ಏನೂ ಸಮಸ್ಯೆ ಇಲ್ಲ. ಇನ್ನು ಪತ್ರಿಕೆಯಲ್ಲಿ ಬರೆದ ಅಥವಾ ಓದಿದ್ದರಲ್ಲಿ, ಕೇಳಿದ್ದರಲ್ಲಿ ವ್ಯತ್ಯಾಸ ಇರಬಹುದು. ನನಗೂ ಕಮಿಟಿಗೂ ಯಾರಿಗೂ ಕೋಪ ಇಲ್ಲ.ನಾವು ಅಕ್ಕ ತಮ್ಮಂದಿರ ಹಾಗೆ ಇದ್ದೇವೆ. ಲೋಕೇಶರಲ್ಲಿ ತಮಾಷೆಗೆ ಹೇಳಿ, ಅದನ್ನು ಹಾಕಬೇಡಿ ಎಂದು ಹೇಳಿದ್ದೆ. ಆದರೆ ಅವರು ಹಾಕಿದ್ದಾರೆ. ಒಟ್ಟಿನಲ್ಲಿ ಮಹಾಲಿಂಗೇಶ್ವರನ ಈ ಜಾಗದಲ್ಲಿ ಏನೇ ಆಗಲಿ ಅದು ಗಣೇಶೋತ್ಸವ, ಕೃಷ್ಣ, ವರಮಹಾಲಕ್ಷ್ಮೀ ಇರಲಿ ಎಲ್ಲದಕ್ಕೂ ಮೂಲ ಮಹಾಲಿಂಗೇಶ್ವರ.ಇಲ್ಲಿ ನಾನು ಎಂದು ಹೇಳಿದವರನ್ನು ಇಳಿಸ್ತಾನೆ. ನಾವು, ನಮ್ಮಿಂದ ನೀನೇ ಮೇಲೆ ಎಂದು ಹೇಳಿದವರನ್ನು ಎತ್ತಿ ಮೇಲೆ ಕೂರಿಸುತ್ತಾನೆ ಎಂದರು.

ಮಂಗಳೂರು ಶ್ರೀನಿವಾಸ ಕಾಲೇಜಿನ ಉಪನ್ಯಾಸಕಿ ಡಾ|ವೀಣಾ ಸಂತೋಷ್ ರೈ ಅವರು ಮಾತನಾಡಿ ದಿನ ನಿತ್ಯದ ಜೀವನದಲ್ಲಿ ಒಳ್ಳೆಯ ಸಂಸ್ಕೃತಿಯನ್ನು ಅಳವಡಿಸುವ ಕೆಲಸ ಮಾಡಬೇಕು. ಜೀವನದ ಎಲ್ಲಾ ದಿನವನ್ನು ಉತ್ತಮ ದಿನವನ್ನಾಗಿ ನೋಡಬೇಕು. .ನಮ್ಮ ಹಬ್ಬಗಳು ಸೀಮಿತವಾಗಬಾರದು.ನಮ್ಮೆಲ್ಲ ಸಂಸ್ಕಾರ, ಆಚಾರ ವಿಚಾರಗಳನ್ನು ಮುಂದಿನ ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.

Muliya

ಜಾಹೀರಾತು

ಮುಖ್ಯ ಅತಿಥಿ ರಕ್ಷಾ ಉಜ್ವಲ್ ಅವರು ಮಾತನಾಡಿ ಧಾರ್ಮಿಕ ಹಬ್ಬ ಹರಿದಿನಗಳಲ್ಲಿ ಪ್ರತಿ ಮನೆಯಲ್ಲೂ ಸಕಾರಾತ್ಮಕ ಬದಲಾವಣೆ ಆಗಲಿ ಎಂದು ಶುಭ ಹಾರೈಸಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕೃಷ್ಣವೇಣಿ ಅವರು ಮಾತನಾಡಿ ಮಹಾಲಕ್ಷ್ಮೀಯ ಆರಾಧನೆಯ ಮೂಲಕ ಎಲ್ಲರ ಮನದಲ್ಲೂ ಭಕ್ತಿಯ ಭಾವನೆ ಇರಲಿ. ಎಲ್ಲರಿಗೂ ತಾಯಿ ಸನ್ಮಂಗಲವನ್ನುಂಟು ಮಾಡಲಿ ಎಂದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ನಯನಾ ರೈ, ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ.ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

camera center ad

ಜಾಹೀರಾತು

ಸಮಿತಿ ಸದಸ್ಯೆ ಜಯಂತಿ ಬಲ್ನಾಡು, ವಿಜಯ ಸರಸ್ವತಿ ಎಡಕ್ಕಾನ, ಪರಮೇಶ್ವರಿ ಶೆಟ್ಟಿ, ಶಾರದಾ ಕೇಶವ್, ರಾಜೇಶ್ವರಿ, ಯಮುನಾ, ವತ್ಸಲಾ ಪದ್ಮನಾಭ ಶೆಟ್ಟಿ, ಅನುಶ್ರೀ, ಮಲ್ಲಿಕಾ ಸುಭಾಶ್ ರೈ, ಅನ್ನಪೂರ್ಣ ಕುತ್ಯಾಡಿ ಅತಿಥಿಗಳನ್ನು ಗೌರವಿಸಿದರು.ಸೀತಾ ಭಟ್ ಪ್ರಾರ್ಥಿಸಿದರು.ಸ್ವರ್ಣಲತಾ ಹೆಗ್ಡೆ ಸ್ವಾಗತಿಸಿದರು. ಅನ್ನಪೂರ್ಣ ಕುತ್ಯಾಡಿ ವಂದಿಸಿದರು. ಶಾರದಾ ಅರಸ್ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯ ಮಹಾಪೂಜೆ ನಡೆಯಿತು.ಈ ಸಂದರ್ಭ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಕಲ್ಲೇಗ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ, ಯು.ಲೋಕೇಶ್ ಹೆಗ್ಡೆ, ಶ್ಯಾಮಸುಂದರ ರೈ, ಜೋಕಿಂ ಡಿ’ಸೋಜ, ಗ್ಯಾರೆಂಟಿ ಅನುಷ್ಠಾನದ ತಾಲೂಕು ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ, ಡಾ.ರಾಜಾರಾಮ್ ಕೆ.ಬಿ.ಉಪ್ಪಿನಂಗಡಿ ಸಹಿತ ಹಲವಾರು ಮಂದಿ ಪ್ರಮುಖರು ಪೂಜೆಯಲ್ಲಿ ಪಾಲ್ಗೊಂಡರು.ಸ್ವಯಂ ಸೇವಕರಾಗಿ ಭಾಗವಹಿಸಿದ್ದ ಕಲ್ಲೇಗದ ಸರ್ವೆಶ್ ಮತ್ತು ತಂಡವನ್ನು ಶಕುಂತಳಾ ಶೆಟ್ಟಿ ಅಭಿನಂದಿಸಿದರು. ಅನ್ನದಾನಕ್ಕೆ ಸಹಕರಿಸಿದವರನ್ನು ಗುರುತಿಸಲಾಯಿತು.

 

SendShare8Share
Previous Post

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Next Post

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

ಫ್ರೀಫೈರ್ ಗೇಮ್​​ಗೆ ಅಡಿಕ್ಟ್! 14 ವರ್ಷದ ಅಕ್ಕನ ಮಗನನ್ನೇ ಕೊಂದ ಮಾವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..