ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈತನ್ಮಧ್ಯೆ ಅನಾಮಿಕ ನೀಡಿದ ದೂರಿನನ್ವಯ ಕೇಸ್ ದಾಖಲಾಗಿ ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ. ಅನಾಮಿಕ ತೋರಿಸಿದ ಬಹುತೇಕ ಜಾಗಗಳಲ್ಲಿ ಯಾವುದೇ ಕಳೇಬರ ಸಿಗದ ಹಿನ್ನೆಲೆ ಇದೀಗ ಎಸ್ಐಟಿ ಅಧಿಕಾರಿಗಳು ಮತ್ತೆ ಅನಾಮಿಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ವಿಚಾರಣೆ ವೇಳೆ ಅನಾಮಿಕ ಉಲ್ಟಾ ಹೊಡೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ.
ಸುಜಾತ ಭಟ್ ದೂರು ನೀಡುವ ಮುನ್ನ ಯಾವುದೇ ಹೇಳಿಕೆಯಾಗಲೀ, ಏನೂ ಹೇಳಬಾರದು. ದೂರು ಕೊಟ್ಟ ಬಳಿಕ ಬಾ ಎಂದು ಮೂವರು ಹೇಳಿದ್ದರು. ಸುಜಾತಾ ಭಟ್ ದೂರು ನೀಡುವ ತನಕ ನನಗೆ ಭಯ ಆಗ್ತಿತ್ತು. ಹೀಗಾಗಿ ನಾನು ಬಂದೆ. ಮೂವರು ಪೊಲೀಸರ ಮುಂದೆ ಏನು ಹೇಳಬೇಕು ಎಂಬ ಕುರಿತಂತೆ ತಯಾರು ಮಾಡಿದ್ದರು. ಮೊದಲ ಕೋರ್ಟ್ ನಲ್ಲಿ ಏನು ಹೇಳಬೇಕು ಎಂಬ ಕುರಿತಂತೆಯೂ ಹೇಳಿದ್ದರು. ಆ ಗುಂಪು ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು ಎಂದು ಮುಸುಕುಧಾರಿ ಬಾಯ್ಬಿಟ್ಟಿದ್ದಾನೆ.
ಬುರುಡೆ ತಂದು ಮೂವರ ಗುಂಪು ಹೇಳಿದಂತೆ ಮಾಡಿದ್ದೇನೆ ಎಂದು ಹೇಳಿದ್ದಾನೆ. ಈ ವಿಡಿಯೋವನ್ನು ಎಸ್ ಐಟಿ ಅಧಿಕಾರಿಗಳು ದಾಖಲೆ ಮಾಡಿಕೊಂಡಿದ್ದಾರೆ. ನಾನು ಕಾನೂನು ಬದ್ಧವಾಗಿಯೇ ಹೆಣಗಳನ್ನು ಹೂತಿದ್ದೆ ಎಂದೆ. ಆದ್ರೆ,
ಮೂವರ ಗುಂಪು ಹೆಣವನ್ನು ಹೂತಿರುವುದಾಗಿ ಹೇಳು ಎಂದು ನನ್ನ ತಲೆಗೆ ತುಂಬಿದ್ದರು. ಮಹಿಳೆಯ ದೂರಿನ ನಂತರ ತಪ್ಪು ಹೇಳಿಕೆ ನೀಡುವಂತೆ ಹೇಳಿದ್ದರು. ಪೊಲೀಸರ ಮುಂದೆ ಏನು ಹೇಳಬೇಕೆಂಬ ಕುರಿತಂತೆಯೂ ನನಗೆ ಹೇಳಿದ್ದರು.
2014ರ ನಂತರ ನಾನು ತಮಿಳುನಾಡಿನಲ್ಲಿ ವಾಸವಿದ್ದೆ. ಆದ್ರೆ, 2023ರಲ್ಲಿ ನನ್ನನ್ನು ಗುಂಪೊಂದು ಸಂಪರ್ಕಿಸಿತು. ನಾನು ಲೀಗಲ್ ಆಗಿಯೇ ಶವಗಳನ್ನು ಹೂತಿದ್ದಾಗಿಯೇ ಹಲವುಬಾರಿ ಹೇಳಿದ್ದೇನೆ. ಆದರೂ ಕೇಳಲಿಲ್ಲ. ಮಹಿಳೆ ದೂರು ನೀಡುತ್ತಾರೆ. ಆಮೇಲೆ ನೀನು ಬಾ ಎಂದರು. ಅದೇ ರೀತಿಯಲ್ಲಿ ನಾನು ಬಂದೆ ಎಂಬ ಮಾಹಿತಿ ನೀಡಿದ್ದಾನೆ. ಈ ಮೂಲಕ ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿರುವ ಕೇಸ್ ಮತ್ತೊಂದು ಚರ್ಚೆಗೆ ಹುಟ್ಟು ಹಾಕಿದೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ‘ಮುಸುಕುಧಾರಿ ಹೇಳಿದ್ದಾನಂತೆ, ಯಾರೋ ನನ್ನ ಮೇಲೆ ಒತ್ತಡ ಹಾಕಿದ್ದಾನೆಂದು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಿಟ್ ಆ್ಯಂಡ್ ರನ್ ಮಾಡಬಾರದು’ ಎಂದು ವಿಜಯೇಂದ್ರ ಹೇಳಿದ್ದಾರೆ.