ಕಾನ್ಪುರ, ಆಗಸ್ಟ್ 23: ಕಾನ್ಪುರದಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಈ ದಾಳಿಯಿಂದ ಆಕೆಯ ಮುಖದ ಮೇಲೆ ಆಳವಾದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆಗೆ 17 ಹೊಲಿಗೆಗಳನ್ನು ಹಾಕಿದ್ದಾರೆ. ಬೀದಿ ನಾಯಿಗಳು ಅವಳನ್ನು ನೆಲಕ್ಕೆ ಎಳೆದುಕೊಂಡು ಮುಖ ಮತ್ತು ದೇಹದ ಮೇಲೆ ಕ್ರೂರವಾಗಿ ದಾಳಿ ಮಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಾಯಿ ಕಚ್ಚಿ ಎಳೆದಿದ್ದರಿಂದ ಆಕೆಯ ಬಲ ಕೆನ್ನೆ ಎರಡು ಭಾಗವಾಗಿದ್ದು, ಆಕೆಯ ಮೂಗಿನ ಮೇಲೆ, ದೇಹದ ಇತರ ಭಾಗಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಆಗಸ್ಟ್ 20ರಂದು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಆ 21 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯಲ್ಲಿ ಆಕೆಗೆ ಹಲವು ಬಾರಿ ಕಚ್ಚಿದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆ ಮತ್ತು ಮೂಗಿನ ಮೇಲೆ 17 ಹೊಲಿಗೆಗಳನ್ನು ಹಾಕಬೇಕಾಯಿತು. ಅಲೆನ್ ಹೌಸ್ ರುಮಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲ್ಪಟ್ಟ ಯುವತಿ ಶ್ಯಾಮ್ ನಗರದ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಮತ್ತು ಕೋತಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಅವುಗಳ ಜಗಳದಲ್ಲಿ ಕೋಪಗೊಂಡಿದ್ದ ಮೂರು ನಾಯಿಗಳು ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದವು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಾಣಿಗಳು ಆಕೆಯನ್ನು ನೆಲಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮುಖ ಮತ್ತು ದೇಹವನ್ನು ಕಚ್ಚಿದವು. ಆಕೆಯ ಬಲ ಕೆನ್ನೆ ಎರಡು ಭಾಗಗಳಾಗಿ ಹರಿದುಹೋಗಿತ್ತು.ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆವೇಶದಲ್ಲಿದ್ದ ಬೀದಿ ನಾಯಿಗಳು ಮತ್ತೆ ಆಕೆಯ ಮೇಲೆ ದಾಳಿ ಮಾಡಿ ರಸ್ತೆಗೆ ಎಳೆದುಕೊಂಡು ಹೋದವು. ಆಕೆಯ ಕೂಗು ಕೇಳಿ, ಸ್ಥಳೀಯರು ಕೋಲುಳಿಂದ ಹೊಡೆದು ನಾಯಿಗಳನ್ನು ಓಡಿಸಿದರು.
ಸುಪ್ರೀಂ ಕೋರ್ಟ್ ಇತ್ತೀಚೆಗೆ ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆ ನಡೆಸಬೇಕು ಮತ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಕುರಿತು ನೀಡಿದ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.