ಚಾರ್ಮಾಡಿ :ಸೆ 29 ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ರಾವ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು