• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ

ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ

October 27, 2025
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ

by ಪ್ರಜಾಧ್ವನಿ ನ್ಯೂಸ್
October 27, 2025
in ಈಶ್ವಮಂಗಲ, ಕುಂಬ್ರ, ಧಾರ್ಮಿಕ, ಪುತ್ತೂರು
0
ಈಶ್ವರಮಂಗಳ: ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ- ಸಮಿತಿ ರಚನೆ
14
SHARES
40
VIEWS
ShareShareShare

ಈಶ್ವರಮಂಗಳ: 2026ರ ಏ.9ರಿಂದ ಮೊದಲ್ಗೊಂಡು ಏ.12ರವರೆಗೆ ನಡೆಯಲಿರುವ ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀಕೋದಂಡರಾಮ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಮತ್ತು ವಿವಿಧ ಸಮಿತಿ ರಚನೆಯು ಅ.26ರಂದು ಬೆಳಿಗ್ಗೆ ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು.

camera center ad

ಜಾಹೀರಾತು

ಸಮಾಲೋಚನಾ ಸಭೆಯಲ್ಲಿ ಮಾರ್ಗದರ್ಶನ ನೀಡಿದ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಮಾತನಾಡಿ ಆಧ್ಯಾತ್ಮಕತೆಯ ಶಕ್ತಿಕೇಂದ್ರವಾಗಿರುವ ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದಲ್ಲಿ ನಾವು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸುವುದೇ ಇಂದಿನ ಸಭೆಯಾಗಿದೆ. ಹಿಂದೂ ಸಮಾಜದ ಒಳಿತಿಗಾಗಿ ನಮ್ಮ ಗುರಿ ಅಚಲವಾಗಿರಬೇಕು. ಎಲ್ಲಿ ಧರ್ಮ ಕಾರ್ಯ ನಡೆಯುತ್ತದೆಯೋ ಅಲ್ಲಿ ಭಕ್ತರಾದ ನಾವು ಸಮರ್ಪಣಾ ಭಾವದಿಂದ ಸೇರಿಕೊಂಡು ಜವಾಬ್ದಾರಿ ನಿರ್ವಹಿಸುವುದೇ ನಮ್ಮ ಯಶಸ್ಸಿನ ದಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಹನುಮಗಿರಿಯ ಬ್ರಹ್ಮಕಲಶೋತ್ಸವದಲ್ಲೂ ನಾವೆಲ್ಲರೂ ಸಂಘಟಿತರಾಗಿ ಜವಾಬ್ದಾರಿಯನ್ನು ದೇವರ ಕಾರ್ಯವೆಂದು ಭಾವಿಸಿ ಕೆಲಸ ಮಾಡಬೇಕು ಆ ಮೂಲಕ ನಮ್ಮ ದೇಶಕ್ಕೆ,  ಸಮಾಜಕ್ಕೆ ಇನ್ನಷ್ಟು ಶಕ್ತಿ ನೀಡುವ ಕಾರ್ಯಕ್ರಮವಾಗಿ ಮೂಡಿ ಬರಲಿ ಎಂದು ಹೇಳಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್‌ರವರು ಮಾತನಾಡಿ ಎಲ್ಲರ ಅಭಿಪ್ರಾಯ ಸಂಗ್ರಹವೇ ಇವತ್ತಿನ ಸಭೆಯಾಗಿದೆ. ಭಾರತ ಮಾತೆಯ ಮಂದಿರ ಇರುವ ದೇಶದ ಮೊದಲ ಕ್ಷೇತ್ರವೇ ಹನುಮಗಿರಿಯಾಗಿದ್ದು, ಆ ನಿಟ್ಟಿನಲ್ಲಿ ಹನುಮಗಿರಿಯ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಕೂಡ ದೇಶ ಮಟ್ಟದಲ್ಲಿ ಪ್ರಚಾರ ಆಗುವಂತೆ, ಸಮಾಜಕ್ಕೆ ಇನ್ನಷ್ಟು ಹೊಸ ಚೈತನ್ಯ, ಶಕ್ತಿಯನ್ನು ನೀಡುವಂತಹ ಕಾರ್ಯಕ್ರಮವಾಗಿ ನಡೆಯಲಿದೆ. ಅಸ್ಪ್ರಶ್ಯತೆ ಇಲ್ಲದ ಶ್ರೀರಾಮನು ಶಬರಿಯನ್ನು ಅಪ್ಪಿದ್ದಾನೆ, ವಿಭಿಷಣನನ್ನು ಒಪ್ಪಿದ್ದಾನೆ, ಹಾಗಾಗಿ ಶ್ರೀರಾಮನ ಬ್ರಹ್ಮಕಲಶೋತ್ಸವವು ಅಸ್ಪ್ರಶ್ಯತೆಯನ್ನು ಮೆಟ್ಟಿನಿಂತು ಸಾಮರಸ್ಯ, ಸಮಾನತೆಯೊಂದಿಗೆ ಹಿಂದೂ ಸಮಾಜದಲ್ಲಿ ಐಕ್ಯತೆಯನ್ನು ಕಾಣಲಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಉಪಸ್ಥಿತರಿದ್ದರು. ಸಮಾಲೋಚನಾ ಸಭೆಯಲ್ಲಿ ನೆರೆದಿದ್ದವರ ಸಲಹೆ, ಅಭಿಪ್ರಾಯಗಳಿಗೆ ಅವಕಾಶ ನೀಡಲಾಯಿತು. ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಕಾವು ಹೇಮನಾಥ ಶೆಟ್ಟಿ, ಅರುಣ್ ಕುಮಾರ್ ಪುತ್ತಿಲ, ಶ್ರೀಕಾಂತ್ ಕಾಸರಗೋಡು, ಪ್ರವೀಣ್ ಸರಳಾಯ, ಆರ್.ಸಿ ನಾರಾಯಣ, ಗಿರಿಶಂಕರ ಸುಲಾಯ, ಶ್ರೀರಾಂ ಪಕ್ಕಳ ಸೇರಿದಂತೆ ಅನೇಕರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಿದರು. ಸಭೆಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ, ರಾಧಾಕೃಷ್ಣ ಬೋರ್ಕರ್, ಅರುಣ್ ಕುಮಾರ್ ಪುತ್ತಿಲ, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಹೇಮನಾಥ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ಬೂಡಿಯಾರ್ ರಾಧಾಕೃಷ್ಣ ರೈ, ಸಹಜ್ ರೈ ಬಳಜ್ಜ, ಸಂತೋಷ್ ರೈ ಇಳಂತಾಜೆ, ಎ.ಕೆ ಜಯರಾಮ ರೈ, ಆರ್.ಸಿ ನಾರಾಯಣ, ಜೀವಂಧರ್ ಜೈನ್, ಶ್ರೀಕಾಂತ್ ಕಾಸರಗೋಡು, ಸುಧಾಮ ಕಾಸರಗೋಡು, ಪ್ರವೀಣ್ ಸರಳಾಯ, ರಂಗನಾಥ ರೈ ಗುತ್ತು, ಮುರಳಿಕೃಷ್ಣ ಹಸಂತ್ತಡ್ಕ ಹಾಗೂ ದ.ಕ ಮತ್ತು ಕಾಸರಗೋಡು ಜಿಲ್ಲೆಯ ಅನೇಕ ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಖಂಡರುಗಳು, ವಿವಿಧ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು, ಗ್ರಾಮಸ್ಥರು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಶ್ರೀಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ ಸ್ವಾಗತಿಸಿದರು. ದೇವಿಪ್ರಕಾಶ್ ಶೆಟ್ಟಿ ಕುತ್ಯಾಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ashwinistudioputtur

ಜಾಹೀರಾತು

ಶ್ರೀಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ಸಮಾಲೋಚನಾ ಸಭೆಯಲ್ಲಿ 7 ವಿವಿಧ ಸಮಿತಿಗಳನ್ನು ರಚಿಸಿ ಘೋಷಣೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲುರವರು ವಿವಿಧ ಸಮಿತಿಗಳ ಘೋಷಣೆ ಮಾಡಿದರು. ಪ್ರಮುಖವಾಗಿ ಬ್ರಹ್ಮಕಲಶೋತ್ಸವ ಸಮಿತಿ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ, ಶ್ರೀರಾಮ ಹನುಮಾ ಜ್ಯೋತಿ ರಥಯಾತ್ರೆ ಸಮಿತಿ, ಕೋಟಿ ಶ್ರೀರಾಮ ತಾರಕ ಮಂತ್ರ ಮಹಾಯಜ್ಞ ಮತ್ತು ಭಜನೆ ಸಮಿತಿ, ಲಕ್ಷೋತ್ತರ ನಾರಿಕೇಳ ಸಮರ್ಪಣಾ ಯಜ್ಞ ಸಮಿತಿ, ಕೋಟಿ ಶ್ರೀರಾಮ ತಾರಕ ಮಂತ್ರ ಮಹಾಯಜ್ಞ ಗ್ರಾಮ ಸಮಿತಿ, ಕಾಮಗಾರಿ/ನಿರ್ಮಾಣ ಸಮಿತಿಗಳ ಘೋಷಣೆ ಮಾಡಲಾಯಿತು. ಬಳಿಕ ಸಮಿತಿಯ ಎಲ್ಲಾ ಪ್ರಮುಖರಿಗೆ ಹೂ ನೀಡಿ, ಸಮಿತಿಯ ಕಡತ ನೀಡಿ ಗೌರವಿಸಲಾಯಿತು.

 

ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಎಸ್.ಎನ್ ಮನ್ಮಥ, ವಿಶ್ವೇಶ್ವರ ಭಟ್ ಬಂಗಾರಡ್ಕ, ಜಯಂತ ನಡುಬೈಲು, ಅರುಣ್ ಕುಮಾರ್ ಪುತ್ತಿಲ, ಕಾವು ಹೇಮನಾಥ ಶೆಟ್ಟಿ, ವಾಸು ಪೂಜಾರಿ ಗುಂಡ್ಯಡ್ಕ, ಡಾ. ಸುರೇಶ್ ಪುತ್ತೂರಾಯ, ಶ್ರೀಕಾಂತ್ ಕಾಸರಗೋಡು, ಚನಿಲ ತಿಮ್ಮಪ್ಪ ಶೆಟ್ಟಿ, ರವಿಕಿರಣ ಶೆಟ್ಟಿ ಬೆದ್ರಾಡಿ, ಬೂಡಿಯಾರು ರಾಧಾಕೃಷ್ಣ ರೈ, ಕೇಶವ ಮುಳಿಯ ಸುಳ್ಯ, ಜೀವಂಧರ್ ಜೈನ್, ಹರೀಶ್ ಕಂಜಿಪಿಲಿ, ಭಾಮಿ ಅಶೋಕ್ ಶೆಣೈ, ಪ್ರಧಾನ ಕಾರ್ಯದರ್ಶಿಗಳಾಗಿ ಸುಬ್ಬಪ್ಪ ಪಟ್ಟೆ, ಗಿರಿಧರ ಶೆಟ್ಟಿ, ರಾಜೇಶ್ ಬನ್ನೂರು, ಸವಿತಾ ರೈ ನೆಲ್ಲಿತ್ತಡ್ಕ, ಪೂರ್ಣಚಂದ್ರ ನೆಲ್ಲಿತ್ತಡ್ಕ, ಆರ್.ಸಿ ನಾರಾಯಣ, ಕಾರ್ಯದರ್ಶಿಗಳಾಗಿ ದೇವಿಪ್ರಕಾಶ್ ಶೆಟ್ಟಿ ಕುತ್ಯಾಳ, ದೀಪಕ್ ಮುಂಡ್ಯ, ಮಹಾಲಿಂಗ ಪಂಚೋಡಿ, ಚಿನ್ಮಯ್ ರೈ, ಪ್ರಕಾಶ್ ಕೈಕಾರ, ಚಂದ್ರಶೇಖರ ಆಳ್ವ, ಲಿಂಗಪ್ಪ ಗೌಡ, ಶಿವರಾಮ ಭಟ್ ಬೀರ್ಣಕಜೆ, ಸೌಮ್ಯ ಗಜಾನನ, ಪ್ರಶಾಂತಿ ರೈ ಕುತ್ಯಾಳ, ಶ್ರೀನಿವಾಸ ಭಟ್ ಚಂದುಕೂಡ್ಲುರವರ ಹೆಸರನ್ನು ಘೋಷಿಸಲಾಯಿತು.

Poorna squash

ಜಾಹೀರಾತು

ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಡಾ. ರವೀಶ್ ಪಡುಮಲೆ, ಉಪಾಧ್ಯಕ್ಷರಾಗಿ ಸೀತಾರಾಮ ರೈ ಗುತ್ತು, ಲೋಕಯ್ಯ ಮೂಲ್ಯ, ಸಹಜ್ ರೈ ಬಳಜ್ಜ, ಪ್ರಶಾಂತ್ ಸಿಝ್ಲರ್, ರಂಜಿತ್ ಕಾಂಚನ್, ಹರೀಶ್ ಕುತ್ತಾರ್, ಗೋಪಾಲಕೃಷ್ಣ ಭಟ್ ದ್ವಾರಕಾ, ಪ್ರಧಾನ ಕಾರ್ಯದರ್ಶಿಗಳಾಗಿ ಮುರಳಿಕೃಷ್ಣ ಹಸಂತಡ್ಕ, ಸುಮಲತಾ ಜಗದೀಶರವರ ಹೆಸರು ಘೋಷಣೆ ಮಾಡಲಾಯಿತು. ಶ್ರೀರಾಮ ಹನುಮಾ ಜ್ಯೋತಿ ರಥಯಾತ್ರೆ ಸಮಿತಿ: ಶ್ರೀರಾಮ ಹನುಮಾ ಜ್ಯೋತಿ ರಥಯಾತ್ರೆ ಸಮಿತಿಯ ಅಧ್ಯಕ್ಷರಾಗಿ ವಿಶ್ವೇಶ್ವರ ಭಟ್ ಬಂಗಾರಡ್ಕ, ಕಾರ್ಯದರ್ಶಿಯಾಗಿ ಸಹಜ್ ರೈ ಬಳಜ್ಜರವರ ಹೆಸರು ಘೋಷಣೆ ಮಾಡಲಾಯಿತು.

 

Muliya

ಜಾಹೀರಾತು

SendShare6Share
Previous Post

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ ಅಧ್ಯಕ್ಷರಾಗಿ -ಶಾಸಕ ಅಶೋಕ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ-ಈಶ್ವರ ಭಟ್ ಪಂಜಿಗುಡ್ಡೆ

Next Post

ಬೆಳ್ತಂಗಡಿ:ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ:ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ:ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..