• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

January 3, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
January 3, 2026
in ಮಂಗಳೂರು
0
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ
17
SHARES
48
VIEWS
ShareShareShare

ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ವಿದುದ್ದೀಕರಣ ಕಾಮಗಾರಿ ಯೋಜನೆ ಪೂರ್ಣಗೊಂಡ ಬಗ್ಗೆ ಪ್ರಕ್ರಿಯಿಸಿರುವ ಅವರು, ಈ ರೈಲು ಮಾರ್ಗದ ವಿದುದ್ದೀಕರಣ ಕಾರ್ಯ ಪೂರ್ಣಗೊಂಡಿರುವುದರಿಂದ ಬೆಂಗಳೂರು ಹಾಗೂ ಮಂಗಳೂರು ನಡುವಿನ ರೈಲು ಸಂಪರ್ಕ ಜಾಲ ಮಟ್ಟಷ್ಟು ಸುಧಾರಣೆಯಾಗಲಿದ್ದು, ಪ್ರಯಾಣಿಕರ ಸಂಚಾರದ ಜತೆಗೆ ಮಂಗಳೂರಿಗೆ ಸರಕು ಸಾಗಣೆ ಜತೆಗೆ ಬಂದರು ಹಾಗೂ ವ್ಯಾಪಾರ ಚಟುವಟಿಕೆಗಳ ವೃದ್ಧಿಗೂ ಮತ್ತಷ್ಟು ಅನುಕೂಲ ಕಲ್ಪಿಸಲಿದೆ. ಆ ಮೂಲಕ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಅತ್ಯಂತ ಪ್ರಮುಖ ರೈಲ್ವೆ ಮೂಲಸೌಕರ್ಯ ಸುಧಾರಿಸುವ ಬೇಡಿಕೆ ಈಡೇರಿದೆ ಎಂದು ಸಂಸತ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ , ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಹಾಗೂ ಈ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ವಿಶೇಷ ಆಸಕ್ತಿ ವಹಿಸಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮತ್ತು ತಾಂತ್ರಿಕ ಸವಾಲುಗಳ ನಡುವೆಯೂ ಈ ಐತಿಹಾಸಿಕ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಶ್ರಮಿಸಿದ ಎಲ್ಲ ರೈಲ್ವೆ ಅಧಿಕಾರಿ ವರ್ಗಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಲ್ಲಿಸುವುದಾಗಿ ಸಂಸದ ಕ್ಯಾ . ಚೌಟ ಅವರು ತಿಳಿಸಿದ್ದಾರೆ.

ಸಂಸದ ಕ್ಯಾ. ಚೌಟರ ಸತತ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸು

ಅಧಿಕಾರ ವಹಿಸಿಕೊಂಡ ದಿನದಿಂದಲೂ ಮಂಗಳೂರು-ಬೆಂಗಳೂರು ರೈಲ್ವೆ ಸಂಪರ್ಕ ಜಾಲ ಸುಧಾರಣೆ ಮಾಡುವುದು ಸಂಸದ ಕ್ಯಾ. ಚೌಟರ ಪ್ರಮುಖ ಆದ್ಯತೆಯಾಗಿತ್ತು. ಅದರಂತೆ ಅವರು ಸಚಿವಾಲಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅಂದರೆ, 2024ರ ಜುಲೈ 10ರಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚೌಟ ಅವರು ಪಡೀಲ್-ಸುಬ್ರಹ್ಮಣ್ಯ-ಸಕಲೇಶಪುರ ಮಾರ್ಗದ ದ್ವಿಪಥ ಹಾಗೂ ವಿದ್ಯುದ್ದೀಕರಣಗೊಳಿಸುವ ಬೇಡಿಕೆಗಳ ಬಗ್ಗೆ ವಿವರವಾದ ಮನವಿ ಸಲ್ಲಿಸಿದ್ದರು. 2024ರ ಡಿಸೆಂಬರ್ 11ರಂದು ಲೋಕಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಡಿ ಅವರು, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಪರ್ಕದ ಸಾಮರ್ಥ್ಯ, ವೇಗ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿದ್ದರು.

Muliya

ಜಾಹೀರಾತು

Rosemac1823788744

ಜಾಹೀರಾತು

ಇದಕ್ಕೆ ಉತ್ತರಿಸಿದ್ದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಮಂಗಳೂರು-ಬೆಂಗಳೂರು ಮಾರ್ಗವು ಪ್ರಯಾಣಿಕರ ಮತ್ತು ಸರಕು ಸಾಗಣೆಯ ದೃಷ್ಟಿಯಿಂದ ವ್ಯೂಹಾತ್ಮಕವಾಗಿ ಅತ್ಯಂತ ಪ್ರಮುಖ ರೈಲ್ವೆ ಜಾಲ. ಭಾರತೀಯ ರೈಲ್ವೆಯ ರಾಷ್ಟ್ರವ್ಯಾಪಿ ವಿದ್ಯುದ್ದೀಕರಣ ಯೋಜನೆಯಡಿ ಈ ಮಾರ್ಗದಲ್ಲಿ ವಿದ್ಯುದ್ದೀಕರಣ, ಸಾಮರ್ಥ್ಯ ವೃದ್ಧಿ ಮತ್ತು ಮೂಲಸೌಕರ್ಯ ಮೇಲ್ದರ್ಜೆಗೇರಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಘಾಟ್ ವಿಭಾಗವೂ ಸೇರಿದಂತೆ ಸಮಗ್ರ ಮಾರ್ಗದ ಆಧುನೀಕರಣದ ಪ್ರಯತ್ನಗಳ ಬಗ್ಗೆ ಸಚಿವರು ತಿಳಿಸಿದ್ದರು.

ಇದಾದ ಬಳಿಕ 2024ರ ಡಿ.18ರಂದು ಲೋಕಸಭೆಯಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಯಯಡಿ ಸಂಸದರು, ನವ ಮಂಗಳೂರು ಬಂದರಿನಿಂದ ಒಳನಾಡಿಗೆ ಸರಕು ಸಾಗಣೆ ಸಂಪರ್ಕ ಸುಧಾರಿಸಲು ಕೈಗೊಂಡ ಕ್ರಮ ಮತ್ತು ಸರಕು ಸಾಗಣೆಗೆ ಅಡ್ಡಿಯಾಗುತ್ತಿರುವ ಮೂಲಸೌಕರ್ಯದ ಕೊರತೆಗಳ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಉತ್ತರಿಸಿದ್ದ ಸಚಿವರು, ವಿದ್ಯುದ್ದೀಕರಣ, ಹಳಿಗಳ ಸಾಮರ್ಥ್ಯ ವೃದ್ಧಿ ಮತ್ತು ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸುವ ಮೂಲಕ ಬಂದರು ಸಂಪರ್ಕ ಬಲಪಡಿಸಲು ಭಾರತೀಯ ರೈಲ್ವೆ ಮುಂದಾಗಿದೆ ಹಾಗೂ ಮಂಗಳೂರು ಭಾಗದ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು.

8722552464 Astrloger

ಜಾಹೀರಾತು

ಬಳಿಕ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ರೈಲ್ವೆ ಅನುದಾನ ಬೇಡಿಕೆಗಳ ಚರ್ಚೆ ಸಂದರ್ಭದಲ್ಲಿ ಕ್ಯಾ. ಚೌಟ ಅವರು ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಾಮರ್ಥ್ಯ ಹೆಚ್ಚಿಸುವಂತೆ ಆಗ್ರಹಿಸಿದ್ದರು. ವಿಶೇಷವಾಗಿ ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಆಧುನೀಕರಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವುದರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದ ಕ್ಯಾ. ಚೌಟ ಅವರು ಕರಾವಳಿಯ ಆರ್ಥಿಕ ಅಭಿವೃದ್ಧಿಗೂ ಪೂರಕ ಎಂದು ಗಮನಸೆಳೆದಿದ್ದರು. ಇದಾದ ಬಳಿಕ 2025ರ ಮಾರ್ಚ್ 18ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಸಂಸದರು, ಮಂಗಳೂರು ಭಾಗದ ರೈಲ್ವೆ ಯೋಜನೆಗಳ ಆಡಳಿತಾತ್ಮಕ ದಕ್ಷತೆ ಮತ್ತು ಸಮನ್ವಯತೆಯ ಅಗತ್ಯತೆಯನ್ನು ಮನವರಿಕೆ ಮಾಡಿದ್ದರು.

2025ರ ಆಗಸ್ಟ್‌ನಲ್ಲಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಕರಾವಳಿ ಭಾಗದ ರೈಲು ಬೇಡಿಕೆಗಳ ಬಗ್ಗೆ ಪುನರುಚ್ಚರಿಸಿದ್ದರು. ಮಂಗಳೂರು-ಬೆಂಗಳೂರು ಕಾರಿಡಾರ್‌ನ ವ್ಯೂಹಾತ್ಮಕ ಮಹತ್ವವನ್ನು ಒತ್ತಿಹೇಳಿದ ಅವರು, ಪ್ರಯಾಣಿಕರ ಸೇವೆ ಮತ್ತು ಸರಕು ಸಾಗಣೆ ಎರಡನ್ನೂ ಸುಧಾರಿಸಲು ಘಾಟ್ ವಿಭಾಗದ ವಿದ್ಯುದ್ದೀಕರಣ ಸೇರಿದಂತೆ ಬಾಕಿ ಇರುವ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವ ಅನಿವಾರ್ಯತೆಯನ್ನು ಗಮನಕ್ಕೆ ತಂದಿದ್ದರು. ಇದೀಗ ಸಂಸದ ಕ್ಯಾ.ಚೌಟರ ಅವಿರತ ಪರಿಶ್ರಮದ ಫಲ ಹಾಗೂ ನಿರಂತರ ಫಾಲೋಅಪ್‌ನಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆವರೆಗಿನ 55 ಕಿಮೀ. ರೈಲು ಮಾರ್ಗ ವಿದ್ಯುದ್ದೀಕರಣಗೊಂಡಿದೆ.

SendShare7Share
Previous Post

ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

Next Post

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..