• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ, ಮತೀಯ ಶಕ್ತಿಗಳನ್ನು ಹತ್ತಿಕ್ಕಲು ಕಚೇರಿ ನಿರ್ಮಾಣ ಮಾಡಲಾಗ್ತಿದೆ ಎನ್ನಲಾಗಿದೆ.

by ಪ್ರಜಾಧ್ವನಿ ನ್ಯೂಸ್
March 7, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ
94
SHARES
268
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸ್‌ (ಕೇಂದ್ರ ಗುಪ್ತಚರ) ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಕ್ಷತೆ ಮತ್ತು ಗುಪ್ತಚರ ಮಾಹಿತಿ ಸಂಗ್ರಹಣೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ.

ಕೇಂದ್ರದ Intelligence Bureau (ಐಬಿ) ಇಲಾಖೆಯ ಇನ್‌ಸ್ಪೆಕ್ಟರ್ ಮಟ್ಟದ ಕಚೇರಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರ ಮೂಲಕ ದಕ್ಷಿಣ ಕನ್ನಡ ಹಾಗೂ ಕೇರಳ ಗಡಿಭಾಗದ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದು ಮುಖ್ಯ ಉದ್ದೇಶವಾಗಿದೆ.

ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘಟನೆಗಳ ಚಟುವಟಿಕೆ ಬೇರೂರುತ್ತಿರುವ ಹಿನ್ನೆಲೆಯಲ್ಲಿ ದೀರ್ಘಕಾಲಿಕ ಕ್ರಮಗಳತ್ತ ಚಿತ್ತ ಹರಿಸಿರುವ ಕೇಂದ್ರ ಸರಕಾರ, ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪಿಸಿ ಗುಪ್ತಚರ ಇಲಾಖೆಯ ಕಾರ್ಯಕ್ಷಮತೆ ಬಲಪಡಿಸಲು ಮುಂದಾಗಿದೆ.

2022ರ ಜುಲೈ 26ರಂದು ಪ್ರವೀಣ್‌ ನೆಟ್ಟಾರ್‌ ಕೊಲೆ ನಡೆದ ಬಳಿಕ ಕೇಂದ್ರ ಸರಕಾರದ ಅಧೀನದಲ್ಲಿರುವ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ದಕ್ಷಿಣ ಕನ್ನಡ ಮತ್ತು ಪಕ್ಕದ ಕೇರಳದಲ್ಲಿ ಬಿರುಸಿನ ತನಿಖೆ ಕೈಗೊಂಡಿತ್ತು. ಈ ಸಂದರ್ಭ ಕೇಂದ್ರ ಗುಪ್ತಚರ ಇಲಾಖೆ ದಕ್ಷಿಣ ಕನ್ನಡದತ್ತ ಗಮನ ಕೇಂದ್ರೀಕರಿಸಿತ್ತು. ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣದ ಬಳಿಕ ಪಿಎಫ್‌ಐ ಸಂಘಟನೆ ನಿಷೇಧಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿತ್ತು.

ಮತೀಯವಾದಿ ಸಂಘಟನೆಗಳು ಬಲಗೊಳ್ಳುವ ಸೂಕ್ಷ್ಮತೆ ಅರ್ಥ ಮಾಡಿಕೊಂಡು ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕಚೇರಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪುತ್ತೂರು ಹೊರವಲಯದ ಪಡ್ನೂರಿನಲ್ಲಿ 0.44 ಎಕರೆ ಜಮೀನನ್ನು ಸೆಂಟ್ರಲ್‌ ಇಂಟೆಲಿಜೆನ್ಸಿ ಕಚೇರಿ ಸ್ಥಾಪನೆಗೆಂದೇ ಶಾಸಕ ಅಶೋಕ್‌ ರೈ ನೇತೃತ್ವದಲ್ಲಿ ತಾಲೂಕು ಕಂದಾಯ ಇಲಾಖೆ ಮಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಸೆಂಟ್ರಲ್‌ ಇಂಟೆಲಿಜೆನ್ಸಿ ಇನ್‌ಸ್ಪೆಕ್ಟರ್‌ ಕಚೇರಿ ನಿರ್ಮಾಣವಾಗಲಿದ್ದು, ಅಗತ್ಯ ಸಿಬ್ಬಂದಿ ನೇಮಕವಾಗಲಿದೆ.

ashwinistudioputtur

ಜಾಹೀರಾತು

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವ್ಯಾಪ್ತಿಗೆ ಸೆಂಟ್ರಲ್‌ ಇಂಟೆಲಿಜೆನ್ಸಿಯಲ್ಲಿ ಪಶ್ಚಿಮ ವಲಯವಿದೆ. ಇದರಡಿಯಲ್ಲಿ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ಡಿವಿಶನ್‌ ಕಚೇರಿಗಳಿವೆ. ಇವುಗಳನ್ನು ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿಇನ್‌ಸ್ಪೆಕ್ಟರ್‌ ಕಚೇರಿ ಇರುವುದು ಬಿಟ್ಟರೆ ಬೇರಾವುದೇ ತಾಲೂಕು ಕೇಂದ್ರಗಳಲ್ಲಿ ಕಚೇರಿಯಿಲ್ಲ.

Muliya

ಜಾಹೀರಾತು

ಇದೇ ಮೊದಲ ಬಾರಿ ಪುತ್ತೂರನ್ನು ಆರಿಸಿಕೊಂಡು ಇನ್‌ಸ್ಪೆಕ್ಟರ್‌ ಮಟ್ಟದ ಕಚೇರಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೋಮುಸೂಕ್ಷ್ಮ ಎಂಬ ಕಾರಣಕ್ಕೆ ಭಟ್ಕಳವನ್ನು ಆರಿಸಿಕೊಂಡಿದ್ದರೆ, ಇದೇ ಕಾರಣಕ್ಕೆ ದಕ್ಷಿಣ ಕನ್ನಡ ಗ್ರಾಮಾಂತರ ಭಾಗವನ್ನು ಗಮನದಲ್ಲಿಟ್ಟುಕೊಂಡು ಪುತ್ತೂರನ್ನು ಆರಿಸಲಾಗಿದೆ. ಪ್ರವೀಣ್‌ ನೆಟ್ಟಾರ್‌ ಕೊಲೆಯ ನಂತರ ದಕ್ಷಿಣ ಕನ್ನಡಕ್ಕೆ ನೆರೆಯ ಕೇರಳದಿಂದ ಮತೀಯವಾದಿ ಶಕ್ತಿಗಳು ಪ್ರವೇಶಿಸುತ್ತಿರುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.

ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸ್‌ ಕಚೇರಿ ಆರಂಭವಾದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಹಾಗೂ ಸಂವೇದನಾಶೀಲ ಪ್ರದೇಶಗಳ ಮೇಲೆ ನಿಗಾ ವಹಿಸಲು ಇದು ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಹತ್ಯೆ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಅತಿರೇಕಿ ಚಟುವಟಿಕೆಗಳ ಮೇಲೆ ಕಣ್ಣಿಟ್ಟುಕೊಳ್ಳುವ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಘಟಕವನ್ನು ಪುತ್ತೂರಿನಲ್ಲಿ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸೆಂಟ್ರಲ್‌ ಇಂಟೆಲಿಜೆನ್ಸಿಯ ಮಂಗಳೂರು ಡಿವಿಶನ್‌ನ ಎಸ್‌ಪಿ ಕಚೇರಿ ಮಂಗಳೂರಿನಲ್ಲಿಯೇ ಇರಲಿದ್ದು, ಜಿಲ್ಲೆ ಮತ್ತು ಕಮಿಷನರೇಟ್‌ ವ್ಯಾಪ್ತಿಯ ಅಧಿಕಾರ ಯಥಾಪ್ರಕಾರ ಇರಲಿದೆ. ಕಮಿಷನರೇಟ್‌ ಹೊರತುಪಡಿಸಿದ ದ.ಕ. ಜಿಲ್ಲಾ ವ್ಯಾಪ್ತಿಗೆ ಪುತ್ತೂರಿನಲ್ಲಿ ಇನ್‌ಸ್ಪೆಕ್ಟರ್‌ ಕಚೇರಿ ರಚನೆಯಾಗಿ, ಇಲ್ಲಿ ಅಗತ್ಯ ಸಿಬ್ಬಂದಿ ನೇಮಕವಾಗಲಿದೆ.

(ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟೆಲಿಜೆನ್ಸಿ ಕಚೇರಿ ಸ್ಥಾಪನೆಗೆ ಅಗತ್ಯ ಜಮೀನು ಮಂಜೂರು ಮಾಡುವಂತೆ ಇಲಾಖೆಯ ಎಸ್‌ಪಿ ಕಚೇರಿಯಿಂದ 2 ತಿಂಗಳ ಹಿಂದೆ ಮನವಿ ಮಾಡಲಾಗಿತ್ತು. ಇದರಂತೆ ಪಡ್ನೂರಿನಲ್ಲಿ 0.44 ಎಕರೆ ಜಮೀನು ಮಂಜೂರು ಮಾಡಿ ಪಹಣಿ ಮಾಡಲಾಗಿದೆ. ಅದನ್ನು ಇಲಾಖೆಗೆ ಹಸ್ತಾಂತರಿಸಿದ್ದೇವೆ. ಒಂದು ವರ್ಷದೊಳಗೆ ಕಟ್ಟಡ ನಿರ್ಮಾಣವಾಗಿ ಕಚೇರಿ ಕಾರ್ಯಾರಂಭ ಮಾಡಲಿದೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ದೃಷ್ಟಿಯಲ್ಲಿ ಇದು ಮಹತ್ವದ ಬೆಳವಣಿಗೆ ಎಂದಿದ್ದಾರೆ ಅಶೋಕ್‌ ರೈ, ಶಾಸಕ, ಪುತ್ತೂರು.)

8722552464 Astrloger

ಜಾಹೀರಾತು

SendShare38Share
Previous Post

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

Next Post

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ - ಶ್ರೀ ಶಿವಕುಮಾರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..