ಉಪ್ಪಿನಂಗಡಿ ಸೇತುವೆ ಬಳಿ ಶಾಲಾ ಮಕ್ಕಳು ಇದ್ದ ಆಟೋ ರಿಕ್ಷಾ ಮತ್ತು nexon ಕಾರ್ ನಾನು ನಡುವೆ ಅಪಘಾತ. ಆಟೋ ರಿಕ್ಷಾದಲ್ಲಿದ್ದ ಒಂದು ಮಗು ಗಂಭೀರ ಗಾಯ ಗೊಂಡು ಮಂಗಳೂರು ಆಸ್ಪತ್ರೆ ಗೆ ಕಳಿಸಲಾಗಿದೆ. ಬಾಕಿ ಉಳಿದ ಸಣ್ಣ ಪುಟ್ಟ ಗಾಯ ಗೊಂಡ ಮಕ್ಕಳನ್ನು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಳಿಸಲಾಗಿದೆ.
ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಚಾಲಕರಾಗಿದ್ದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.9ರಂದು ಸಂಜೆ ನಡೆದಿದೆ.
ಅಟೋ ರಿಕ್ಷಾ ಚಾಲಕ ಕಲಂದರ್ ಶಾಫಿ, ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5), ಸಝ್ಮಾ (4) ಗಾಯಗೊಂಡವರು. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಹಾಗೂ ಮಹಮ್ಮದ್ ಜಾಝೀರ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿದ್ದು, ಅಲ್ಲಲ್ಲಿ ಕಾಮಗಾರಿಗಾಗಿ ಹೆದ್ದಾರಿ ಹಾಗೂ ಸವೀಸ್ ರಸ್ತೆಗಳನ್ನು ಬಂದ್ ಮಾಡಿರುವುದು, ಏಕ ಪಥದಲ್ಲಿ ಹೋಗಲು ಬರಲು ಅನುವು ಮಾಡಿಕೊಟ್ಟಿರುವುದು, ಕಾಮಗಾರಿ ಸಂದರ್ಭ ಹೆದ್ದಾರಿಯಲ್ಲೆಲ್ಲಾ ಧೂಳು ಆವರಿಸಿರುವುದು ಕಂಡು ಬರುತ್ತಿದೆ. ಚತುಷ್ಪಥ ಹೆದ್ದಾರಿಯೆಂದು ವಾಹನ ಸವಾರರು ಅತೀ ವೇಗದಲ್ಲಿ ಸಾಗುತ್ತಿದ್ದು, ಅಲ್ಲಲ್ಲಿ ಕಾಮಗಾರಿಗಾಗಿ ಗುತ್ತಿಗೆದಾರರು ಹೆದ್ದಾರಿಯಲ್ಲಿ ತಡೆ ನೀಡಿರುವುದರಿಂದ ಹಾಗೂ ಅವೈಜ್ಞಾನಿಕ ಕ್ರಾಸಿಂಗ್ ನೀಡಿದ್ದರಿಂದ ಈ ಹೆದ್ದಾರಿಯು ಹಲವು ಅಪಘಾತಗಳಿಗೆ ಕಾರಣವಾಗಿದ್ದು, ಮರಣ ಮೃದಂಗ ಬಾರಿಸುತ್ತಿದೆ ಎನ್ನುವ ದೂರುಗಳು ಕೇಳಿ ಬರುತ್ತಿದೆ.






























