ಪುತ್ತೂರು ತಾಲೂಕಿನ ತೆಂಕಿಲ ಬೈಪಾಸ್ ಬಳಿ ಇಂದು ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.
ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದವರು ರಸ್ತೆ ದಾಟುವ ವೇಳೆ ಪಡೆಯುವ ಸಂದರ್ಭ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಸ್ಕೂಟಿ ಮತ್ತು ಕಾರು ಹಾನಿಗೊಳಗಾಗಿದ್ದು, ಸವಾರರಿಗೆ ಗಾಯಗಳಾಗಿದೆ. ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಆಸ್ಪತ್ರೆಗೆ ಸಾಗಿಸಿರುವ ಮಾಹಿತಿ ಲಭ್ಯವಾಗಿದೆ.

























