ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ21 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5:30 ರವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸಪ್ರೆಸ್, ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆ ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಕಾಂಚನ, ವಾಟರ್ ಸಪ್ಪೆ, ರಾಮಕುಂಜ, ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಬೆಳ್ಳಿಪ್ಪಾಡಿ, ಹಿರೇಬಂಡಾಡಿ ಮತ್ತು ಕೊಯಿಲ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

























