ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಸರ್ಕಾರದ ವತಿಯಿಂದ ಲಭ್ಯವಿರುವ 3% ಹಾಗೂ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯವನ್ನು ನೀಡುವ ಸಂದರ್ಭದಲ್ಲಿ, ರೈತರು ಇತರ ಬ್ಯಾಂಕುಗಳಲ್ಲಿ ಸಾಲ ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಸಹಕಾರಿ ಬ್ಯಾಂಕುಗಳು NCS ಪಡೆಯುವ ಸಂದರ್ಭದಲ್ಲಿ ಅರ್ಜಿಗಳನ್ನು ನಿರಾಕರಿಸುತ್ತಿರುವ ಬಗ್ಗೆ ಚರ್ಚಿಸಲು SCDCC Bank ನ ಕೇಂದ್ರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯವರನ್ನು ಬೇಟಿ ಮಾಡಲಾಯಿತು. ಈ ಬಗ್ಗೆ ರೈತರಿಗೆ ಅನುಕೂಲವಾಗುವಂತೆ ಶೀಘ್ರದಲ್ಲೇ ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಲಾಗುವುದೆಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷರಾದ ರೂಪೇಶ್ ರೈ ಅಲಿಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು, ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಪುಚ್ಚೆತಡ್ಕ, ಸುಳ್ಯ ತಾಲೂಕು ಅಧ್ಯಕ್ಷರಾದ ಲೋಲಜಾಕ್ಷ, ಕೋಡಿಂಬಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಯೋಗೀಶ್.ಯಸ್.ಸಾಮಾನಿ, ಸಂಪಿಗೆದಡಿ-ಮಠಂತಬೆಟ್ಟು, ಸದಸ್ಯರಾದ ಶಿವಪ್ರಸಾದ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

























