ಮಂಗಳೂರು: ಕೋರ್ಟ್ಗೆ ಹಾಜರಾಗದೆ ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ವಾರೆಂಟ್ ಆರೋಪಿಗಳನ್ನು ಮಂಗಳೂರು ನಗರದ ಕಂಕನಾಡಿ ಮತ್ತು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ
ಕಾರ್ಯಾಚರಣೆ 1: ಬೆಂಗಳೂರಿನಲ್ಲಿ ಅಡಗಿದ್ದ ಕಂಕನಾಡಿ ರೌಡಿ ಶೀಟರ್ ಸೆರೆ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಅಸಾಮಿಯೊಬ್ಬನನ್ನು ಪೊಲೀಸರು ಬೆಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿ: ಮಂಗಳೂರಿನ ಫೈಜಲ್ ನಗರ ಶಾಂತಿನಗರದ ಜುಲೈಕ ಹೌಸ್ ನಿವಾಸಿ ರಮ್ಮಿ – ರಮೀಜ್.
ಹಿನ್ನೆಲೆ: ಈತನ ವಿರುದ್ಧ ಕಂಕನಾಡಿ ನಗರ ಠಾಣೆಯ ಕಳವು ಪ್ರಕರಣಕ್ಕೆ (ಅ.ಕ್ರ : 136/2017) ಸಂಬಂಧಿಸಿದಂತೆ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಈತ ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಇತರ ಪ್ರಕರಣಗಳು: ಆರೋಪಿ ರಮೀಜ್ ವಿರುದ್ಧ ಮಂಗಳೂರು ಗ್ರಾಮಾಂತರ (ಕೊಲೆ ಯತ್ನ ಪ್ರಕರಣ), ಉಳ್ಳಾಲ (ದಂಗೆ, ಹಲ್ಲೆ ಪ್ರಕರಣ), ಮಂಗಳೂರು ದಕ್ಷಿಣ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಗಳು ಸೇರಿದಂತೆ ಒಟ್ಟು 5 ಗಂಭೀರ ಪ್ರಕರಣಗಳು ದಾಖಲಾಗಿವೆ.
ಬಂಧಿಸಿದ ತಂಡ: ಕಂಕನಾಡಿ ನಗರ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಹೆಚ್.ಸಿ. 944 ಬಾಲರಾಜ್, ಪಿಸಿ 3046 ರವಿಕುಮಾರ್ ಮತ್ತು ಪಿಸಿ 2365 ಯುವರಾಜ್ ಅವರ ತಂಡವು ದಿನಾಂಕ 08/06/2026ರಂದು ಬೆಂಗಳೂರಿನ ಕೊಣಪ್ಪನ ಅಗ್ರಹಾರದಲ್ಲಿ ಈತನನ್ನು ದಸ್ತಗಿರಿ ಮಾಡಿ ಮಂಗಳೂರು ಕೋರ್ಟ್ಗೆ ಹಾಜರುಪಡಿಸಿದೆ.
ಕಾರ್ಯಾಚರಣೆ 2: ಬರ್ಕೆ ಪೊಲೀಸರಿಂದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ
ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿ, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ದಸ್ತಗಿರಿಗೆ ಸಿಗದೆ ತಪ್ಪಿಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಮಾನ್ಯ ನ್ಯಾಯಾಲಯಕ್ಕೆ ಸುಮಾರು 5 ವರ್ಷಗಳಿಂದ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಬಂಟ್ವಾಳದ ನರಿಂಗಾಣ ಗ್ರಾಮದ ತೌಡುಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ನಿಪ್ – ತಂಜಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದಂಗೆ ಹಾಗೂ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ (ಅ.ಕ್ರ. 18/2021, U/s 143, 147, 148, 353, 332, 504 r/w 149 IPC) ದಾಖಲಾಗಿತ್ತು. ಈತ ದೀರ್ಘಕಾಲ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಅಬ್ದುಲ್ ಖಾದರ್ ತನ್ನಿಪ್ ವಿರುದ್ಧ ಕೊಣಾಜೆ ಹಾಗೂ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ.
ಮತ್ತೊಂದು ಪ್ರಕರಣದಲ್ಲಿ ಬಂಧಿತನಾದ ಮಂಗಳೂರಿನ ಅಡ್ಯಾರ್ ಕಣ್ಣೂರು ಕುಂಡಾಲ ಹೌಸ್ ನಿವಾಸಿ ಅಬ್ದುಲ್ಎಂಬಾತನ ಮೇಲೆಯೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ದಂಗೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಪ್ರಕರಣ (ಅ.ಕ್ರ ನಂ. 17/2021, U/s 143, 147, 148, 353, 332, 506, 307, 149 IPC) ದಾಖಲಾಗಿತ್ತು. ಈತನೂ ಸಹ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧವೂ ದಸ್ತಗಿರಿ ವಾರೆಂಟ್ ಜಾರಿಯಾಗಿತ್ತು. ಮೊಹಮ್ಮದ್ ರಾಝೀಕ್ ವಿರುದ್ಧ ಕಂಕನಾಡಿ, ಬೆಳ್ತಂಗಡಿ, ಪುತ್ತೂರು ಹಾಗೂ ಕದ್ರಿ ಪೊಲೀಸ್ ಠಾಣೆಗಳಲ್ಲೂ ಹಲವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಬರ್ಕೆ ಪೊಲೀಸರಿಂದ ಬಂಧಿಸಲ್ಪಟ್ಟ ಇಬ್ಬರೂ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬರ್ಕೆ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಈ ಇಬ್ಬರೂ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರೆಂಟ್ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದು, ತಲೆಮರೆಸಿಕೊಂಡಿರುವ ಇಂತಹ ಹಳೇ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಪ್ಪಿಸಿಕೊಂಡಿದ್ದ ರೌಡಿ ಅಸಾಮಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

























