• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

June 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

by ಪ್ರಜಾಧ್ವನಿ ನ್ಯೂಸ್
June 15, 2026
in ಅಂತರರಾಜ್ಯ, ಅಂತರಾಷ್ಟ್ರೀಯ
0
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ
48
SHARES
138
VIEWS
ShareShareShare

ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ವೈಯಕ್ತಿಕವಾಗಿ ಭಾಗವಹಿಸಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

8722552464 Astrloger

ಜಾಹೀರಾತು

ಈ ಐತಿಹಾಸಿಕ ಒಪ್ಪಂದವು ಒಟ್ಟು 14 ಪ್ರಮುಖ ಷರತ್ತುಗಳನ್ನು ಒಳಗೊಂಡಿದ್ದು, ಎರಡೂ ದೇಶಗಳ ಹಿತಾಸಕ್ತಿಗಳನ್ನು ಸಮತೋಲನಗೊಳಿಸಲು ಪ್ರಯತ್ನಿಸಲಾಗಿದೆ. ಅಮೆರಿಕದ ಪ್ರಮುಖ ಷರತ್ತುಗಳಲ್ಲಿ ಇರಾನ್ ತನ್ನ ಸಂವರ್ಧಿತ ಯುರೇನಿಯಂ ಅನ್ನು ಮುಂದಿನ ಎರಡು ತಿಂಗಳೊಳಗೆ ಸಂಪೂರ್ಣವಾಗಿ ನಾಶಪಡಿಸಬೇಕು ಎಂಬುದು ಪ್ರಮುಖವಾಗಿದೆ. ಪರಮಾಣು ವಸ್ತ್ರಗಳನ್ನು ಅಭಿವೃದ್ಧಿಪಡಿಸುವ ಇರಾನ್‌ನ ಸಾಮರ್ಥ್ಯವನ್ನು ತಡೆಯುವುದು ಅಮೆರಿಕದ ದೀರ್ಘಕಾಲದ ಉದ್ದೇಶವಾಗಿದೆ.

ಯುರೇನಿಯಂ ನಾಶಪಡಿಸಿದ ನಂತರವೇ ಇರಾನ್ ಮೇಲಿನ ಎಲ್ಲಾ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಜಪ್ತಿ ಮಾಡಲಾದ ಇರಾನ್‌ನ ಸಂಪತ್ತನ್ನು ಕೂಡ ಬಿಡುಗಡೆ ಮಾಡುವುದಾಗಿ ಅಮೆರಿಕ ಭರವಸೆ ನೀಡಿದೆ.

ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್-ಫ್ರೀ ಆಗಿ ತೆರೆಯಲು ನಾನು ಈ ಮೂಲಕ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ. ಅದೇ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ಬರೆದಿದ್ದಾರೆ.

ಜಾಹೀರಾತು

ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್‌ ನಡುವಿನ ಶಾಂತಿ ಒಪ್ಪಂದವನ್ನು ತಲುಪಲಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಲೆಬನಾನ್‌ ಸೇರಿದಂತೆ ಎಲ್ಲಾ ಕಡೆ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣ ಮತ್ತು ಶಾಶ್ವತವಾಗಿ ಕೊನೆಗೊಳಿಸುವುದಾಗಿ ಎರಡೂ ರಾಷ್ಟ್ರಗಳು ಘೋಷಿಸಿವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ X ನಲ್ಲಿ ಬರೆದಿದ್ದಾರೆ.

ಹಾರ್ಮುಜ್‌ ಜಲಸಂಧಿಯು ವಿಶ್ವದ ಅತ್ಯಂತ ಜನನಿಬಿಡ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಸುಮಾರು ಐದನೇ ಒಂದು ಭಾಗದಷ್ಟು ಕೇಂದ್ರಬಿಂದುವಾಗಿದೆ. ಫೆ.28 ರಂದು ಯುದ್ಧ ಪ್ರಾರಂಭವಾದಾಗ ಇರಾನ್ ಈ ಪ್ರಮುಖ ಜಲಮಾರ್ಗವನ್ನು ಇರಾನ್ ಮುಚ್ಚಿತು.‌ ಇದರಿಂದ ಭಾರತದ ತೈಲ ಮತ್ತು ಅನಿಲ ಪೂರೈಕೆಯಲ್ಲೂ ಬಿಕ್ಕಟ್ಟು ಉಂಟಾಗಿತ್ತು. ಏಪ್ರಿಲ್‌ನಲ್ಲಿ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆಗಳು ಪ್ರಗತಿ ಸಾಧಿಸಲು ವಿಫಲವಾದ ನಂತರ ಅಮೆರಿಕವು ಇರಾನಿನ ಬಂದರುಗಳ ಮೇಲೆ ತನ್ನ ದಿಗ್ಬಂಧನವನ್ನು ಘೋಷಿಸಿತ್ತು. ಸಹಿ ಹಾಕಿದ ತಕ್ಷಣ ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಶಾಂತಿ ಒಪ್ಪಂದದ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಜಾಗತಿಕ ತೈಲ ದರದಲ್ಲಿ ದಿಢೀರನೆ ಶೇಕಡಾ 4 ಕ್ಕಿಂತಲೂ ಹೆಚ್ಚು ಇಳಿಕೆಯಾಗಿದ್ದು, ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಿಸುಮಾರು 80 ಡಾಲರ್ ಆಸುಪಾಸಿಗೆ ಬಂದು ತಲುಪಿದೆ. ಯುದ್ಧದ ಹಿನ್ನೆಲೆಯಲ್ಲಿ ಗಗನಕ್ಕೇರಿದ್ದ ತೈಲ ದರವು ಈಗ ಶಾಂತಿಯ ಮುನ್ಸೂಚನೆ ಸಿಗುತ್ತಿದ್ದಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದು, ಗ್ರಾಹಕರಿಗೆ ದೊಡ್ಡ ಮಟ್ಟದ ನಿರಾಳತೆ ನೀಡುವ ಮುನ್ಸೂಚನೆ ನೀಡಿದೆ.
ಅಂಕಿ-ಅಂಶಗಳ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್ಸ್ ದರವು ಪ್ರತಿ ಬ್ಯಾರೆಲ್‌ಗೆ 3.58 ಡಾಲರ್ ಅಥವಾ ಶೇಕಡಾ 4.1 ರಷ್ಟು ಇಳಿಕೆಯಾಗುವ ಮೂಲಕ 83.75 ಡಾಲರ್‌ಗೆ ತಲುಪಿದೆ. ಅದೇ ರೀತಿ, ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲದ ದರದಲ್ಲೂ ಭಾರಿ ಕುಸಿತ ಕಂಡುಬಂದಿದ್ದು, ಪ್ರತಿ ಬ್ಯಾರೆಲ್‌ಗೆ 4.01 ಡಾಲರ್ ಅಥವಾ ಶೇಕಡಾ 4.72 ರಷ್ಟು ಇಳಿದು 80.87 ಡಾಲರ್ ತಲುಪಿದೆ. ಯುದ್ಧದ ತೀವ್ರತೆಯ ಸಂದರ್ಭದಲ್ಲಿ ಇದೇ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ 120 ಡಾಲರ್ ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಸಂಘರ್ಷ ಆರಂಭಕ್ಕೂ ಮುನ್ನ ಈ ದರವು ಕೇವಲ 70 ಡಾಲರ್ ಆಸುಪಾಸಿನಲ್ಲಿತ್ತು.
ಜಲಸಂಧಿಯ ಮೂಲಕವೇ ಸಾಗುತ್ತದೆ. ಯುದ್ಧದ ಸಂದರ್ಭದಲ್ಲಿ ಇರಾನ್ ಈ ಜಲಸಂಧಿಯ ಮೇಲೆ ಕಠಿಣ ನಿರ್ಬಂಧಗಳನ್ನು ವಿಧಿಸಿದ್ದರಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಇದು ಜಾಗತಿಕವಾಗಿ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದ್ದಲ್ಲದೆ, ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ನಿತ್ಯಬಳಕೆಯ ಇಂಧನಗಳ ಬೆಲೆ ಗಗನಕ್ಕೇರಲು ಪ್ರಮುಖ ಕಾರಣವಾಗಿತ್ತು. ಈಗ ಈ ಮಾರ್ಗ ಮುಕ್ತವಾಗುತ್ತಿರುವುದರಿಂದ ಪೂರೈಕೆ ವ್ಯವಸ್ಥೆ ಹಳಿಗೆ ಮರಳುವ ವಿಶ್ವಾಸ ವ್ಯಕ್ತವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರಿದ್ದನ್ನು ಹಿಡಿದಿಟ್ಟುಕೊಳ್ಳಲು ಭಾರತದಲ್ಲಿ ಇತ್ತೀಚೆಗಷ್ಟೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಿತ್ತು. ಇದು ದೇಶೀಯವಾಗಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿತ್ತು. ಆದರೆ ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಕೇಂದ್ರ ಸರ್ಕಾರವು ಈ ಇಳಿಕೆಯ ನೇರ ಲಾಭವನ್ನು ದೇಶದ ಸಾಮಾನ್ಯ ಗ್ರಾಹಕರಿಗೆ ವರ್ಗಾಯಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ದೇಶದ ಜನತೆ ಕಾದು ನೋಡಬೇಕಿದೆ.

 

SendShare19Share
Previous Post

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

Next Post

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..