• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

June 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

by ಪ್ರಜಾಧ್ವನಿ ನ್ಯೂಸ್
June 15, 2026
in ಅಂತರರಾಜ್ಯ, ಅಂತರಾಷ್ಟ್ರೀಯ
0
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ
48
SHARES
137
VIEWS
ShareShareShare

ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ವೈಯಕ್ತಿಕವಾಗಿ ಭಾಗವಹಿಸಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಈ ಐತಿಹಾಸಿಕ ಒಪ್ಪಂದವು ಒಟ್ಟು 14 ಪ್ರಮುಖ ಷರತ್ತುಗಳನ್ನು ಒಳಗೊಂಡಿದ್ದು, ಎರಡೂ ದೇಶಗಳ ಹಿತಾಸಕ್ತಿಗಳನ್ನು ಸಮತೋಲನಗೊಳಿಸಲು ಪ್ರಯತ್ನಿಸಲಾಗಿದೆ. ಅಮೆರಿಕದ ಪ್ರಮುಖ ಷರತ್ತುಗಳಲ್ಲಿ ಇರಾನ್ ತನ್ನ ಸಂವರ್ಧಿತ ಯುರೇನಿಯಂ ಅನ್ನು ಮುಂದಿನ ಎರಡು ತಿಂಗಳೊಳಗೆ ಸಂಪೂರ್ಣವಾಗಿ ನಾಶಪಡಿಸಬೇಕು ಎಂಬುದು ಪ್ರಮುಖವಾಗಿದೆ. ಪರಮಾಣು ವಸ್ತ್ರಗಳನ್ನು ಅಭಿವೃದ್ಧಿಪಡಿಸುವ ಇರಾನ್‌ನ ಸಾಮರ್ಥ್ಯವನ್ನು ತಡೆಯುವುದು ಅಮೆರಿಕದ ದೀರ್ಘಕಾಲದ ಉದ್ದೇಶವಾಗಿದೆ.

ಯುರೇನಿಯಂ ನಾಶಪಡಿಸಿದ ನಂತರವೇ ಇರಾನ್ ಮೇಲಿನ ಎಲ್ಲಾ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಜಪ್ತಿ ಮಾಡಲಾದ ಇರಾನ್‌ನ ಸಂಪತ್ತನ್ನು ಕೂಡ ಬಿಡುಗಡೆ ಮಾಡುವುದಾಗಿ ಅಮೆರಿಕ ಭರವಸೆ ನೀಡಿದೆ.

ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್-ಫ್ರೀ ಆಗಿ ತೆರೆಯಲು ನಾನು ಈ ಮೂಲಕ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ. ಅದೇ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ಬರೆದಿದ್ದಾರೆ.

Muliya

ಜಾಹೀರಾತು

ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್‌ ನಡುವಿನ ಶಾಂತಿ ಒಪ್ಪಂದವನ್ನು ತಲುಪಲಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಲೆಬನಾನ್‌ ಸೇರಿದಂತೆ ಎಲ್ಲಾ ಕಡೆ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣ ಮತ್ತು ಶಾಶ್ವತವಾಗಿ ಕೊನೆಗೊಳಿಸುವುದಾಗಿ ಎರಡೂ ರಾಷ್ಟ್ರಗಳು ಘೋಷಿಸಿವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ X ನಲ್ಲಿ ಬರೆದಿದ್ದಾರೆ.

ashwinistudioputtur

ಜಾಹೀರಾತು

ಹಾರ್ಮುಜ್‌ ಜಲಸಂಧಿಯು ವಿಶ್ವದ ಅತ್ಯಂತ ಜನನಿಬಿಡ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಸುಮಾರು ಐದನೇ ಒಂದು ಭಾಗದಷ್ಟು ಕೇಂದ್ರಬಿಂದುವಾಗಿದೆ. ಫೆ.28 ರಂದು ಯುದ್ಧ ಪ್ರಾರಂಭವಾದಾಗ ಇರಾನ್ ಈ ಪ್ರಮುಖ ಜಲಮಾರ್ಗವನ್ನು ಇರಾನ್ ಮುಚ್ಚಿತು.‌ ಇದರಿಂದ ಭಾರತದ ತೈಲ ಮತ್ತು ಅನಿಲ ಪೂರೈಕೆಯಲ್ಲೂ ಬಿಕ್ಕಟ್ಟು ಉಂಟಾಗಿತ್ತು. ಏಪ್ರಿಲ್‌ನಲ್ಲಿ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆಗಳು ಪ್ರಗತಿ ಸಾಧಿಸಲು ವಿಫಲವಾದ ನಂತರ ಅಮೆರಿಕವು ಇರಾನಿನ ಬಂದರುಗಳ ಮೇಲೆ ತನ್ನ ದಿಗ್ಬಂಧನವನ್ನು ಘೋಷಿಸಿತ್ತು. ಸಹಿ ಹಾಕಿದ ತಕ್ಷಣ ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಶಾಂತಿ ಒಪ್ಪಂದದ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಜಾಗತಿಕ ತೈಲ ದರದಲ್ಲಿ ದಿಢೀರನೆ ಶೇಕಡಾ 4 ಕ್ಕಿಂತಲೂ ಹೆಚ್ಚು ಇಳಿಕೆಯಾಗಿದ್ದು, ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಿಸುಮಾರು 80 ಡಾಲರ್ ಆಸುಪಾಸಿಗೆ ಬಂದು ತಲುಪಿದೆ. ಯುದ್ಧದ ಹಿನ್ನೆಲೆಯಲ್ಲಿ ಗಗನಕ್ಕೇರಿದ್ದ ತೈಲ ದರವು ಈಗ ಶಾಂತಿಯ ಮುನ್ಸೂಚನೆ ಸಿಗುತ್ತಿದ್ದಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದು, ಗ್ರಾಹಕರಿಗೆ ದೊಡ್ಡ ಮಟ್ಟದ ನಿರಾಳತೆ ನೀಡುವ ಮುನ್ಸೂಚನೆ ನೀಡಿದೆ.
ಅಂಕಿ-ಅಂಶಗಳ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್ಸ್ ದರವು ಪ್ರತಿ ಬ್ಯಾರೆಲ್‌ಗೆ 3.58 ಡಾಲರ್ ಅಥವಾ ಶೇಕಡಾ 4.1 ರಷ್ಟು ಇಳಿಕೆಯಾಗುವ ಮೂಲಕ 83.75 ಡಾಲರ್‌ಗೆ ತಲುಪಿದೆ. ಅದೇ ರೀತಿ, ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲದ ದರದಲ್ಲೂ ಭಾರಿ ಕುಸಿತ ಕಂಡುಬಂದಿದ್ದು, ಪ್ರತಿ ಬ್ಯಾರೆಲ್‌ಗೆ 4.01 ಡಾಲರ್ ಅಥವಾ ಶೇಕಡಾ 4.72 ರಷ್ಟು ಇಳಿದು 80.87 ಡಾಲರ್ ತಲುಪಿದೆ. ಯುದ್ಧದ ತೀವ್ರತೆಯ ಸಂದರ್ಭದಲ್ಲಿ ಇದೇ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ 120 ಡಾಲರ್ ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಸಂಘರ್ಷ ಆರಂಭಕ್ಕೂ ಮುನ್ನ ಈ ದರವು ಕೇವಲ 70 ಡಾಲರ್ ಆಸುಪಾಸಿನಲ್ಲಿತ್ತು.
ಜಲಸಂಧಿಯ ಮೂಲಕವೇ ಸಾಗುತ್ತದೆ. ಯುದ್ಧದ ಸಂದರ್ಭದಲ್ಲಿ ಇರಾನ್ ಈ ಜಲಸಂಧಿಯ ಮೇಲೆ ಕಠಿಣ ನಿರ್ಬಂಧಗಳನ್ನು ವಿಧಿಸಿದ್ದರಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಇದು ಜಾಗತಿಕವಾಗಿ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದ್ದಲ್ಲದೆ, ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ನಿತ್ಯಬಳಕೆಯ ಇಂಧನಗಳ ಬೆಲೆ ಗಗನಕ್ಕೇರಲು ಪ್ರಮುಖ ಕಾರಣವಾಗಿತ್ತು. ಈಗ ಈ ಮಾರ್ಗ ಮುಕ್ತವಾಗುತ್ತಿರುವುದರಿಂದ ಪೂರೈಕೆ ವ್ಯವಸ್ಥೆ ಹಳಿಗೆ ಮರಳುವ ವಿಶ್ವಾಸ ವ್ಯಕ್ತವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರಿದ್ದನ್ನು ಹಿಡಿದಿಟ್ಟುಕೊಳ್ಳಲು ಭಾರತದಲ್ಲಿ ಇತ್ತೀಚೆಗಷ್ಟೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಿತ್ತು. ಇದು ದೇಶೀಯವಾಗಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿತ್ತು. ಆದರೆ ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಕೇಂದ್ರ ಸರ್ಕಾರವು ಈ ಇಳಿಕೆಯ ನೇರ ಲಾಭವನ್ನು ದೇಶದ ಸಾಮಾನ್ಯ ಗ್ರಾಹಕರಿಗೆ ವರ್ಗಾಯಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ದೇಶದ ಜನತೆ ಕಾದು ನೋಡಬೇಕಿದೆ.

 

SendShare19Share
Previous Post

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

Next Post

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..