ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಒಟ್ಟು 6 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು-ಉಪ್ಪಿನಂಗಡಿ ರಸ್ತೆ: ಕೇಪುಳಿನಿಂದ ಪಡೀಲ್ ತನಕ ರಸ್ತೆ ಡಾಮರೀಕರಣಕ್ಕೆ 1 ಕೋಟಿ ರೂ, ಚೆಲ್ಯಡ್ಕ-ಬೆಟ್ಟಂಪಾಡಿ ರಸ್ತೆ: ಪಾಣಾಜೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಮರುಡಾಮರೀಕರಣಕ್ಕೆ 3 ಕೋಟಿ ರೂ, ಉಪ್ಪಿನಂಗಡಿ-ಕಡಬ ರಸ್ತೆ: ಸುಬ್ರಹ್ಮಣ್ಯ ಕ್ರಾಸ್ ನವನಗರದಿಂದ ಕೊಯಿಲ ತನಕ ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಇದರೊಂದಿಗೆ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುವ ರಸ್ತೆ ಅಭಿವೃದ್ಧಿಗೆ ಪ್ರತ್ಯೇಕವಾಗಿ 3 ಕೋಟಿ ರೂ. ಮಂಜೂರಾಗಿದೆ.
ಈ ರಸ್ತೆಯ ಅಭಿವೃದ್ಧಿ ಹಲವು ವರ್ಷಗಳ ಬೇಡಿಕೆಯಾಗಿತ್ತು. ಚೆಲ್ಯಡ್ಕದಿಂದ ಬೆಟ್ಟಂಪಾಡಿ ತನಕದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮರುಡಾಮರೀಕರಣಕ್ಕೆ 3 ಕೋಟಿ ಅನುದಾನ ಬಿಡುಗಡೆಯಾಗಿದೆ. “ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಗಳು ತುರ್ತಾಗಿ ನಡೆಯಬೇಕಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನಗಳು ಬರಲಿವೆ” ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

























