ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸೆಪ್ಟಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಈ ಬಗ್ಗೆ ಇಂದು ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಪುತ್ತೂರಿನಲ್ಲಿ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಈ ಉದ್ಯೋಗ ಮೇಳದಲ್ಲಿ ಸುಮಾರು 150 ವಿವಿಧ ಕಂಪೆನಿಗಳು ಭಾಗವಹಿಸಲಿದೆ. ಹತ್ತನೇ ತರಗತಿಯಿಂದ ವಿವಿಧ ಕೋರ್ಸುಗಳಲ್ಲಿ ಪದವಿ ಹೊಂದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಎಲ್ಲಾ ವರ್ಗದ ಉದ್ಯೋಗಾರ್ಥಿಗಳನ್ನು ಈ ಮೇಳದಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಅರುಣ್ಕುಮಾರ್, ಜಿಲ್ಲಾ ಕೌಶಲಾಭಿವೃಧ್ದಿ ಅಧಿಕಾರಿ ಪ್ರದೀಪ್ ಡಿಸೋಜಾ, ಜಿಲ್ಲಾ ಉದ್ಯೋಗಾಭಿವೃಧ್ದಿ ಅಧಿಕಾರಿ ಶ್ರದ್ದಾ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉದ್ಯಮಿ ಕೃಷ್ಣಪ್ರಸಾದ್ ಆಳ್ವ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು,ನ್ಯಾಯವಾದಿ ಪದ್ಮನಾಭ ಪೂಜಾರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮನಾಥ ಶೆಟ್ಟಿ ಪೆರ್ನೆ,ಟ್ರಸ್ಟ್ ಸದಸ್ಯರಾದ ಯೋಗೀಶ್ ಸಾಮಾನಿ, ಪೂರ್ಣೇಶ್ ಭಂಡಾರಿ, ಜಯಪ್ರಕಾಶ್ ಬದಿನಾರ್, ವಿಜಯ್ ಕೋಡಿಂಬಾಡಿ, ಶಿವಪ್ರಸಾದ್ ಕೋಡಿಂಬಾಡಿ, ರಾಮಣ್ಣ ಪಿಲಿಂಜ ಉಪಸ್ಥಿತರಿದ್ದರು. ಸಿಬಂದಿ ಲಿಂಗಪ್ಪ ಸ್ವಾಗತಿಸಿ ವಂದಿಸಿದರು.
ಸೆ.26 ಮತ್ತು 27 ರಂದು ಪುತ್ತೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ. ಶಾಸಕರ ನೇತೃತ್ವದಲ್ಲಿ ಈ ಮೇಳ ನಡೆಯಲಿದೆ. ನಮ್ಮ ವಿಧಾನಸಭಾ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗವನ್ನು ದೊರಕಿಸಿ ಕೊಡುವ ಉದ್ದೇಶದಿಂದ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಸುದೇಶ್ ಶೆಟ್ಟಿ, ಟ್ರಸ್ಟ್ ಕಾರ್ಯಾಧ್ಯಕ್ಷರು
























