ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯ ಎಲ್ಲ ಚರಣಗಳನ್ನೂ ಹಾಡುವುದಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ಈ ಸಂಬಂಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧವೂ ದೂರು ದಾಖಲಾಗಿದೆ. ಈ ಘಟನೆ ಸಂಬಂಧ ದೆಹಲಿ ಪೊಲೀಸರು ಸೋಮವಾರ ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಆಗಸ್ಟ್ 16ರಂದು ಐ.ಪಿ.ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ವಕೀಲರೊಬ್ಬರು ದೂರು ನೀಡಿದ್ದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದಾರೆ.
ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಅವರು ಮೊದಲೆರಡು ಚರಣಗಳ ಬಳಿಕ, ಗಾಯನ ಮುಂದುವರಿಸದಂತೆ ಸನ್ನೆ ಮಾಡಿ ಅಸಮಾಧಾನ ಹೊರಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ
ರಾಷ್ಟ್ರೀಯ ಗೀತೆಗೆ ಸಂಪೂರ್ಣ ಅಗೌರವ ತೋರಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
























