ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ.
ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ ಘಟನೆಗಳು ನಡೆಯುವುದು ಆತಂಕಕಾರಿ ಒಂದು ಕೋಮುಮಿನ ಜನ ಗುಂಪು ಸೇರಿ ಗಲಭೆ ಎಬ್ಬಿಸಿ ಸಮಾಜದಲ್ಲಿ ಗೊಂದಲ ನಿರ್ಮಾಣ ಮಾಡೋದು ಉದ್ದೇಶವಾಗಿದೆ. ಮಹಿಳೆ ಹಾಗೂ ವೃದ್ಧರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಘಟನೆಯಲ್ಲಿರುವ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಗಿದೆ.
ಈ ಕುರಿತು ಮಾತನಾಡಿರುವ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಜಿಲ್ಲಾ ಸಂಯೋಜಕ ಮೋಹನ್ ದಾಸ್, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಪುತ್ತೂರಿನಲ್ಲಿ ಮುಂದೆ ಉಂಟಾಗಬಹುದಾದ ಯಾವುದೇ ಅಹಿತಕರ ಘಟನೆಗಳಿಗೆ ಪೊಲೀಸ್ ಇಲಾಖೆಯೇ ನೇರ ಹೊಣೆಗಾರವಾಗಲಿದೆ ಎಂದು ಎಚ್ಚರಿಸಿದ್ದಾರೆ.
























