ಪುತ್ತೂರು: ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ ಕಾಲು ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರ ಅರೋಗ್ಯ ವನ್ನು ವಿಚಾರಿಸಿದರು. ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಘಟನೆಯ ವಿವರ ಪಡೆದುಕೊಳ್ಳಲಾಯಿತು. ಬಳಿಕ ತಡರಾತ್ರಿ ಡಿವೈಎಸ್ಪಿ ಅವರನ್ನು ಭೇಟಿಯಾಗಿ ಗುಂಪು ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇಂತಹ ಘಟನೆಗಳು ಕಳೆದ ಕೆಲ ತಿಂಗಳಿನಿಂದ ಪುತ್ತೂರು ಕ್ಷೇತ್ರದಲ್ಲಿ ಪದೇಪದೇ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಪುತ್ತಿಲರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























