ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಮೋದಿ ಹಿಂದೂ ರಾಷ್ಟ್ರ ಮಾಡುತ್ತೇವೆ ಅಂತಾರೆ ಇದು ಕನಸಿನ ಮಾತು. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಅನ್ನೋದು ಮೋದಿಗೆ ಖಾತ್ರಿಯಾಗಿದೆ.ಅವರ ವರ್ಚಸ್ಸು ಕಡಿಮೆಯಾಗಿದೆ.ಅವರು ಸಮಾವೇಶದಲ್ಲಿ ಜನ ಸೇರಿತ್ತಿಲ್ಲ. ಮೋದಿ ವಿಕಸಿತ ಭಾರತ ಮಾಡಲು ದೇವರೇ ಕಳಿಸಿದ್ದಾನೆ ಎಂದು ಹೇಳುತ್ತಾರೆ ಅದಕ್ಕಾಗಿ ಹಿಂದೂ ಮುಸ್ಲಿಮರನ್ನು ಡಿವೈಡ್ ಮಾಡಿ ಮಾತನಾಡುತ್ತಾರೆ. ಚುನಾವಣಾ ಭಾಷಣಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ.ನರೇಂದ್ರ ಮೋದಿ ಏನು ದೇವರ ಅವತಾರನ.? ಎಂದು ತೀವ್ರವಾಗಿ ಮಾತಾನಾಡಿದ ಸಿದ್ದರಾಮಯ್ಯ ಸೋಲುವ ಭಯದಲ್ಲಿ ನರೇಂದ್ರ ಮೋದಿ ದಿನ ಬಂದಂತೆ ಏನೇನೋ ಮಾತನಾಡುತ್ತಿದ್ದಾರೆ.2047 ರ ತನಕ ಸೇವೆ ಮಾಡಲು ದೇವರು ಕಳುಹಿಸಿದ್ದಾನೆ ಅಂತಾರೆ ಹಾಗಾದರೆ ಅವರ ದೇವರ ಪ್ರತಿರೂಪನಾ..?ಬಿಜೆಪಿಯವರು ಪದೇ ಪದೇ ವಿಕಸಿತ ಭಾರತ ಎಂದು ಹೇಳುತ್ತಾರೆ. ಆದರೆ ವಿಕಸಿತ ಭಾರತ ಬಿಜೆಪಿಯವರ ನೈಜ ವಿಚಾರ ಅಲ್ಲ ಅದು ಕೇವಲ ನಾಟಕ ಮಾತ್ರ. ವಿಕಸಿತ ಭಾರತ ಆಗೋದು ಬಿಜೆಪಿಯವರಿಗೆ ಬೇಕಾಗಿಲ್ಲ ಬಿಜೆಪಿ ಹಿಡನ್ ಅಜೆಂಡ ದೇಶವನ್ನು ಹಿಂದೂ ರಾಷ್ಟ್ರ ಮಾಡುವುದು ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಆಗಲ್ಲ ಈ ದೇಶ ಬಹುತ್ವ ರಾಷ್ಟ್ರ.ಎಲ್ಲಾ ವರ್ಗದ ಜನರು ಇಲ್ಲಿ ಇದ್ದಾರೆ ಜಾತಿ ಧರ್ಮಗಳ ಮಧ್ಯೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.