ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ವತಿಯಿಂದ ವಿಟ್ಲ ಕಸಬಾ ಗ್ರಾಮದ ಬೊಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಮಾಮೇಶ್ವರ ನಡುವಡ್ಕ ಗುಳಿಗ ಧೂಮಾವತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಪ್ರಮುಖರಾದ ಅನಂತ ಪ್ರಸಾದ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಮಾರ್ತಾ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿ, ಪರಿವಾರ ಟ್ರಸ್ಟ್ ನ ಸೇವಾ ಚಟುವಟಿಕೆಗಳನ್ನು ವಿವರಿಸಿ, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಪ್ರಶಂಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಕೀಲರಾದ ಶ್ರೀಕೃಷ್ಣ ಕೇಪು, ವಿದ್ಯಾರ್ಥಿಗಳು ಮುಂದೆ ಕಲಿಯಬಹುದಾದ ಉನ್ನತ ಶಿಕ್ಷಣದ ಬಗ್ಗೆ, ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಪುತ್ತಿಲ ಪರಿವಾರ ವಿಟ್ಲ ಘಟಕದ ಅಧ್ಯಕ್ಷ ಮೋಹನ ಸೇರಾಜೆ, ವಿಟ್ಲ ಮುಡ್ನೂರು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಮರುವಾಳ, ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ಇದರ ಅಧ್ಯಕ್ಷರಾದ ನವೀನಚಂದ್ರ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರದ ವಿಟ್ಲ ನಗರ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾಡ ಸ್ವಾಗತಿಸಿದರು, ನಿತಿನ್ ಬೊಡ್ಡೋಣಿ ವಂದಿಸಿದರು. ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಕೃಷ್ಣ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ರವಿ ಅಂಚನ್, ಹರೀಶ್ ಕಟ್ಟೆ, ಕುಶನ್ ಕುಮಾರ್, ತಿಲಕ್ ಮಾಡ್ತೇಲು ಸಹಕರಿಸಿದರು.
ಈ ಸಂದರ್ಭದಲ್ಲಿ ವಿಟ್ಲ ನಗರ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ ನಾಯ್ತೊಟ್ಟು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪುರಂದರ ಅಂಚನ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ನ ಪ್ರಮುಖರಾದ ರವಿಶಂಕರ್ ವಿಟ್ಲ, ರಾಜೇಶ್ ಭಟ್ ಕುಂಡಡ್ಕ, ಲಕ್ಷ್ಮಣ ಗೌಡ ಮಂಜಲಾಡಿ, ಶನ್ಮಿತ್ ರೈ, ಪ್ರತೀಕ್ ಪುತ್ತಿಲ ಉಪಸ್ಥಿತರಿದ್ದರು.