ಬೆಂಗಳೂರು: ವೈದ್ಯಕೀಯ ನೈತಿಕತೆ ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್ ದಾಖಲಿಸುವಂತೆ ಹೈಕೋರ್ಟ್ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದು ಮಾಡುವಂತೆ ಆರೋಪಿ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿದ ಕೋರ್ಟ್, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ. ಇದು ವೈದ್ಯಕೀಯ ನೈತಿಕತೆಯನ್ನು ಮರೆಯುವ ವೃತ್ತಿಪರರಿಗೆ ತಕ್ಕ ಪಾಠ ಎಂಬುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ.
ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು. ಈ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಅರ್ಜಿ ವಜಾ ಮಾಡುವ ಮೂಲಕ ಆರೋಪಿಯ ಬಂಧನವಾಗಲಿದೆ.ವೈದ್ಯರು ತನ್ನ ವೃತ್ತಿ ನೈತಿಕತೆ ಹಾಗೂ ಜನರ ನಂಬಿಕೆ ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧಕ್ಕೆ ಅಪಚಾರವಾಗುತ್ತದೆ. ರೋಗಿಯ ದೇಹ ವೈದ್ಯಕೀಯ ತಪಾಸಣೆಗೆ ಸೀಮಿತ. ದುರುಪಯೋಗ ಸಲ್ಲ. ಪ್ರಕರಣದಲ್ಲಿ ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ. ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಾರೆ. ಪರೀಕ್ಷೆ ಮಾಡುವುದನ್ನು ಬಿಟ್ಟು ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ. ವೈದ್ಯರ ಈ ನಡತೆ ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೇಳಿದ್ದಾರೆ.