• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

June 19, 2024
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
June 19, 2024
in ಪುತ್ತೂರು
0
ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ
19
SHARES
54
VIEWS
ShareShareShare

ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವವರಿಗೆ ಸ್ಪಂಧನೆ ಸಿಗಬೇಕು. ಆಸ್ಪತ್ರೆಯ ಸಮಸ್ಯೆಯೂ ನನಗೆ ಗೊತ್ತಿದೆ. ಆದರೂ ನೊಂದು ಬಂದವರಿಗೆ ಮೊದಲ ಸ್ಪಂಧನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಅವರು ಆಸ್ಪತ್ರೆಯ ವೈದ್ಯರುಗಳಿಗೆ ತಿಳಿಸಿದರು.
ಸರಕಾರಿ ಆಸ್ಪತ್ರೆಯಲ್ಲಿ ಜೂ.18 ರಂದು ಸಂಜೆ ನಡೆದ ನೂತನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅಸ್ಪತ್ರೆಯ ಕಂದುಕೊರತೆಯ ಸಭೆ ನಡೆಸಿ ಮಾತನಾಡಿದರು. ಆಸ್ಪತ್ರೆಯ ವೈದ್ಯರನ್ನು ದೂರುವುದಿಲ್ಲ. ಅವರು ನಾಲ್ಕು ಜನ ವೈದ್ಯರ ಕೊರತೆ ಇದ್ದರೂ ಉತ್ತಮ ಸೇವೆ ನೀಡುತ್ತಿದ್ದಾರೆ. ಆದರೂ ಕೆಲವೊಂದು ಪರಿಸ್ಥಿಯಲ್ಲಿ ಜನರಿಗೆ ಅರ್ಥ ಆಗದೆ ನಿಮ್ಮ ಮೇಲೆಯೇ ಕೋಪಗೊಳ್ಳುತ್ತಾರೆ. ಅಂತಹ ಸಂದರ್ಭದಲ್ಲಿ ನೀವು ಅವರೊಂದಿಗೆ ಉತ್ತಮ ಸ್ಪಂಧನೆ ಕೊಡಿ. ಸಮಾಜದಲ್ಲಿ ಅರ್ಧ ವೈದ್ಯರ ಸಮಾಧಾನ ಮತ್ತು ಅರ್ಧ ವೈದ್ಯರು ನೀಡುವ ಔಷಧಿಯಿಂದ ರೋಗಿಯ ಖಾಯಿಲೆ ಗುಣಮುಖವಾಗುತ್ತದೆ. ಇದನ್ನು ಅರಿತು ನೀವು ಕೆಲಸ ಮಾಡಿ ಎಂದ ಅವರು ಪುತ್ತೂರು ಸರಕಾರಿ ಆಸ್ಪತ್ರೆ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಿರುವುದು ಉತ್ತಮ ವಿಚಾರ. ಇದು ಗುಡ್ ಜಾಬ್ ಎಂದರು.

ಪುತ್ತೂರು ಸರಕಾರಿ ಆಸ್ಪತ್ರೆಗೆ ಒಟ್ಟು ರೂ. 2 ಕೋಟಿ ಅನುದಾನ:
ಪುತ್ತೂರು ಸರಕಾರಿ ಆಸ್ಪತ್ರೆಗೆ ಒಟ್ಟು ರೂ. 2 ಕೋಟಿ ಅನುದಾನ ಬಂದಿದೆ. ಅನುದಾನ ಬೇರೆ ಬೇರೆ ರೀತಿಯಲ್ಲಿ ಬಂದಿರಬಹುದು. ಆದರೆ ನಮಗೆ ಅದು ಒಟ್ಟಾಗಿ ಕಾಣುತ್ತದೆ. ಈಗಾಗಲೇ ರೂ. 1.40 ಕೋಟಿ ಆಸ್ಪತ್ರೆಯ ಕಾಮಗಾರಿಗಳಿಗೆ ಬಂದಿದೆ. ಅದರಲ್ಲಿ ಆಸ್ಪತ್ರೆಯ ಎಲ್ಲಾ ದುರಸ್ಥಿ ಕಾರ್ಯಗಳು ನಡೆಯಬೇಕಾಗಿದೆ. ರೂ. 50 ಲಕ್ಷ ಲ್ಯಾಬ್ಗೆ ಬಂದಿದೆ. ಇದರಲ್ಲಿ ಲ್ಯಾಬ್ ಪರಿಪೂರ್ಣ ಆಗಬೇಕು. ಸ್ಕ್ಯಾನಿಂಗ್ ಮೆಷಿನ್ ಖರೀದಿಸಲು ರೂ. 27 ಲಕ್ಷ ಇದೆ. ರೆಡಿಯೋಲಿಜಿಸ್ಟ್ ರಾಧಿಕಾ ಅವರು ಕಂಪೆನಿಯಿಂದ ಈ ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಶಾಸಕರು ಹೇಳಿದರಲ್ಲೆ ಆಸ್ಪತ್ರೆಯ ಬೇಡಿಕೆಯಂತೆ ತುರ್ತು ೫೦ ಬೆಡ್ ಹೆಚ್ಚುವರಿ ಮಾಡಲು ಪ್ರಸ್ತಾವನೆ ಕಳುಹಿಸಲು ತಿಳಿಸಿದರು.

ಪುತ್ತೂರಿಗೆ ಆಯುಷ್ ಆಸ್ಪತ್ರೆಗೆ ರೂ. 15 ಕೋಟಿ:
ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆಗಾಗಿ ಈಗಾಗಲೇ ಎರಡು ಕಡೆ ಜಾಗ ನೋಡಿ ಅಗಿದೆ. ನಾಳೆಯೇ ಅದರ ಮುಖ್ಯ ಅಧಿಕಾರಿ ಬರುತ್ತಾರೆ. ಅದಕ್ಕೆ ಪ್ರಸ್ತಾವನೆ ತಕ್ಷಣ ಸಲ್ಲಿಸುವಕೆಲಸ ಆಗಬೇಕು. ರೂ. 15 ಕೋಟಿ ಅದಕ್ಕೆ ಮಂಜೂರು ಆಗುತ್ತದೆ. ಇದರಲ್ಲಿ 50 ಬೆಡ್ನ ಆಸ್ಪತ್ರೆಯೂ ಬರುತ್ತದೆ. ಮ್ಯಾನ್ ಪವರ್ ಬರುತ್ತದೆ ಎಂದು ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದರು.

Sathyasayi Hospital

ಜಾಹೀರಾತು

ಸಮಸ್ಯೆ ಇದ್ದರೆ ಗಮನಕ್ಕೆ ತನ್ನಿ:
ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಮಾತನಾಡಿ ಅಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಯಲ್ಲಿ ತೊಂದರೆ ಆದಾಗ ಸಾರ್ವಜನಿಕರಿಗೆ ಸೌಮ್ಯದಿಂದ ಉತ್ತರ ಕೊಡಬೇಕಾಗುತ್ತದೆ. ಎನಾದರೂ ಸಮಸ್ಯೆ ಬಂದಾಗ ಗಮನಕ್ಕೆ ತನ್ನಿ. ವೈದ್ಯರು ಮತ್ತು ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.

ತುರ್ತು ಸಂದರ್ಭವೂ ಲ್ಯಾಬ್ ಚಾಲಿತ:
ಆಸ್ಪತ್ರೆಯ ಲ್ಯಾಬ್ ಸಂಜೆ ಗಂಟೆ 4.30 ಕ್ಕೆ ಬಂದ್ ಆಗುತ್ತದೆ. ರಾತ್ರಿ ಬಂದ ರೋಗಿಗಳಿಗೆ ಲ್ಯಾಬ್ ಸೌಲಭ್ಯ ಹೇಗೆ ಎಂದು ಶಾಸಕರು ಪ್ರಶ್ನಿಸಿದರು. ಉತ್ತರಿಸಿದ ಆಸ್ಪತ್ರೆಯ ವೈದ್ಯಾಧಿಕಾರಿ ಲ್ಯಾಬ್ನಲ್ಲಿ ಮೂವರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಲ್ಯಾಬ್ ಟೆಕ್ನೀಷಿಯನ್ ಕೊರತೆ ಇದೆ. ಹಾಗಾಗಿ ಸಂಜೆ ತುರ್ತು ಸಂದರ್ಭ ಅವರು ಬಂದು ಸಹಕಾರ ನೀಡುತ್ತಿದ್ದಾರೆ ಎಂದರು.

Keshari Durga

ಜಾಹೀರಾತು

ಶವಗಾರ ಕೊಠಡಿ ಬಳಿ ದಾರಿ ದೀಪ:
ಶವಗಾರಕ್ಕೆ ಹೋಗುವ ದಾರಿಯಲ್ಲಿ ದಾರಿ ದೀಪದ ಸಮಸ್ಯೆ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಶಾಸಕರ ಗಮನಕ್ಕೆ ತಂದರು. ತಕ್ಷಣ ಶಾಸಕರು ಪೌರಾಯುಕ್ತರಿಗೆ ಸೂಚನೆ ನೀಡಿದರು. ಪೌರಾಯುಕ್ತ ಮಧು ಎಸ್ ಮನೋಹರ್ ಅವರು ನಾಳೆಯೇ ದಾರಿ ದೀಪ ಅಳವಡಿಸಿ ಕೊಡುವುದಾಗಿ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು ಒಬ್ಬರೆ ಇದ್ದು ಅವರಿಗೆ ತುಂಬಾ ಒತ್ತಡವಿದೆ ಎಂದು ಶಾಸಕರ ಗಮನಕ್ಕೆ ತರಲಾಯಿತು.

ಅನುಮತಿ ಪಡೆದು ಪ್ರವೇಶ:
ಆಸ್ಪತ್ರೆಗೆ ಅನೇಕ ಮಂದಿ ಹೊರಗಿನಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯ ಸಹಿತ ಮಾತನಾಡಿಸಲು ಬರುತ್ತಾರೆ. ಆದರೆ ಅವರು ಗುಂಪು ಗುಂಪಾಗಿ ಬರುವಾಗ ರೋಗಿಳಿಗೆ ತೊಂದರೆ ಆಗುತ್ತದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯಿಂದ ಅನುಮತಿ ಪಡೆದು ಒಳಪ್ರವೇಶಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಈ ಕುರಿತು ನಾಮಫಲಕ ಅಳವಡಿಸುವ ಕಾರ್ಯಕ್ಕೂ ಅನುಮೋದನೆ ನೀಡಲಾಯಿತು.

ಗಲಾಟೆ ಮಾಡಿದರೆ ಪೊಲೀಸರಿಗೆ ದೂರು ನೀಡಿ:
ಆಸ್ಪತ್ರೆಗೆ ಬಂದು ವೈದ್ಯರ ಸಿಬ್ಬಂದಿಗಳ ಮತ್ತು ಇತರ ವಿಚಾರದಲ್ಲಿ ಸುಮ್ಮನೆ ಗಲಾಟೆ ಮಾಡಿದರೆ ಹಿಂದು ಮುಂದೆ ನೋಡದೆ ಪೊಲೀಸರಿಗೆ ದೂರು ನೀಡಿ. ಪೊಲೀಸರು ಕೂಡಾ ತಕ್ಷಣ ಆಸ್ಪತ್ರೆಯ ಸಮಸ್ಯೆ ವಿಚಾದಲ್ಲಿ ಸ್ಪಂಧನೆ ನೀಡಿ ಪರಿಹಾರ ಮಾಡಿ ಎಂದು ಇನ್ಸ್ಪಕ್ಟರ್ ಸತೀಶ್ ಜಿ.ಜೆ ಅವರಿಗೆ ಸೂಚಿಸಿದರು.

ಕನಿಷ್ಠ 50 ಬೆಡ್ ಆದರೂ ಬೇಕಾಗಿದೆ:
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾ ಜ್ಯೋತಿ ಅವರು ಆಸ್ಪತ್ರೆಯ ಕುಂದುಕೊರತೆಯ ಕುರಿತು ಮಾಹಿತಿ ನೀಡಿದರು. ತಾಲೂಕು ಮಟ್ಟದ ಆಸ್ಪತ್ರೆಯಾಗಿದ್ದು 15 ಮಂದಿ ವೈದ್ಯರು ಇಲ್ಲಿ ಬೇಕಿತ್ತು. ಆದರೆ ಈಗ 11 ಮಂದಿ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ನಾಲ್ಕು ಹುದ್ದೆ ಖಾಲಿ ಇದೆ. ಶಸ್ತ್ರಚಿಕಿತ್ಸೆ, ಕ್ಯಾಶುವಲಿಟಿ ವೈದ್ಯರು ಬೇಕಾಗಿದ್ದಾರೆ. ದಿನಕ್ಕೆ 600 ರಷ್ಟುಹೊರ ರೋಗಿಗಳು, 40 ರಿಂದ 70 ಒಳರೋಗಿಗಳು ಬರುತ್ತಾರೆ. ತಿಂಗಳಿಗೆ ಸುಮಾರು 80 ರಿಂದ ನೂರರಷ್ಟು ಹೆರಿಗೆ ಆಗುತ್ತಿದೆ. ನಮ್ಮಲ್ಲಿ ಒಳ್ಳೆಯ ಫಿಸಿಯೋಥೆರಪಿ ಇದೆ. ಅಲ್ಲಿಗೂ ಸುಮಾರು ದಿನಕ್ಕೆ 40 ಮಂದಿ ಬರುತ್ತಾರೆ. ಡಯಾಲಿಸಿಸ್ 13 ಮೆಷಿನ್ ವರ್ಕಿಂಗ್ ಇದೆ. ದಿನಕ್ಕೆ ೪೫ ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ಆಗುತ್ತಿದೆ. ವೈಟಿಂಗ್ ಲೀಸ್ಟ್ನಲ್ಲಿ ಯಾರು ಇಲ್ಲ. ಪ್ರತಿ 2 ನೇ ಮತ್ತು 4ನೇ ಶುಕ್ರವಾರ ವಿಕಲಚೇತನರ ಆರೋಗ್ಯ ತಪಾಸಣೆ, ಪ್ರತಿ ತಿಂಗಳ 2ನೇ ಮಂಗಳವಾರ ಮಾನಸಿಕ ರೋಗಿಗಳ ತಪಾಸಣೆ ನಡೆಯುತ್ತದೆ. ಆಸ್ಪತ್ರೆಯಲ್ಲಿ ಕ್ಯೂ ಕಡಿಮೆ ಮಾಡಲು ಟೋಕನ್ ವ್ಯವಸ್ಥೆ ಮಾಡಿದ್ದೇವೆ.

ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ ನಮಗೆ ಕನಿಷ್ಟ 50 ಬೆಡ್ ಆದರೂ ಹೆಚ್ಚುವರಿ ಬೇಕಾಗಿದೆ ಎಂದು ಹೇಳಿದರು. ಡಾ ಜಯದೀಪ್ ಅವರು 2023-24 ನೇ ವರ್ಷದ ಆದಾಯ ವೆಚ್ಚವನ್ನು ಸಭೆಗೆ ಮಂಡಿಸಿದರು. ಅಸ್ಪತ್ರೆಯ ಒಳರೋಗಿ ಹೊರ ರೋಗಿ, ಇತರ ಮೂಲದಿಂದ ಬರುವ ಹಣ ಕುರಿತು ಮಾಹಿತಿ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯ ಮುಕೇಶ್ ಕೆಮ್ಮಿಂಜೆ ಅವರು ಮಾತನಾಡಿ ಜನನ ಪ್ರಮಾಣ ಪತ್ರ ತಿದ್ದುಪಡಿಯಲ್ಲಿ ತೊಂದರೆ ಆಗುತ್ತಿರುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು. ಅದನ್ನು ಸರಿ ಪಡಿಸುವ ಕುರಿತು ಶಾಸಕರು ಆಸ್ಪತ್ರೆಗೆ ಸೂಚಿಸಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಟಿ, ಅಸ್ಕರ್ ಆನಂದ್, ಸಿದ್ಸಿಕ್ ಸುಲ್ತಾನ್, ವಿಕ್ಟರ್ ಪಾಯಸ್, ಅನ್ವರ್ ಕಬಕ ವಿವಿಧ ಸಲಹೆ ನೀಡಿದರು. ತಹಸೀಲ್ದಾರ್ ಪುರಂದರ ಹೆಗ್ಡೆ, ಪೌರಾಯುಕ್ತ ಮಧು ಎಸ್ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹೆಚ್ಐವಿ ತಾರಾನಾಥ ಕಾರ್ಯಕ್ರಮ ನಿರೂಪಿಸಿದರು. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ, ಆರೋಗ್ಯ ರಕ್ಷಾ ಸಮಿತಿ ಜಿಲ್ಲಾ ಸಮಿತಿ ಸದಸ್ಯ ದಾಮೋದರ್ ಮುರ, ಸರಕಾರಿ ಆಸ್ಪತ್ರೆಯ ಜಿಲ್ಲಾ ಮಟ್ಟದ ಅಧಿಕಾರಿಗಳಾದ ರಾಜೇಶ್, ಗುರುಪ್ರಸಾದ್, ಪುಡಾ ಸದಸ್ಯ ನಿಹಾಲ್ ಶೆಟ್ಟಿ, ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು. ರಕ್ಷಾ ಸಮಿತಿ ಸದಸ್ಯೆ ಅರುಣಾ ಡಿ ಗೈರಾಗಿದ್ದಾರು.

ಮೆಡಿಕಲ್ ಕಾಲೇಜಿಗೆ ಪ್ರಥಮ, ಆಸ್ಪತ್ರೆಗೆ ಅಪ್ಗ್ರೇಡ್ಗೆ ದ್ವೀತಿಯ ಆದ್ಯತೆ
ಪುತ್ತೂರು ಸರಕಾರಿ ಆಸ್ಪತ್ರೆಯನ್ನು 300 ಬೆಡ್ ನ ಮೇಲ್ದದರ್ಜೆಗೆ ಏರಿಸಲು ಈ ಹಿಂದೆಯೇ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ನಮಗೆ ಮೆಡಿಕಲ್ ಕಾಲೇಜು ಆದರೆ ಬೆಡ್ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಮೇಲ್ದರ್ಜೆಗೆ ಏರಿಸಲು ಸ್ವಲ್ಪ ಗೊಂದಲವಿದೆ ಎಂದು ಶಾಸಕರು ಸೇಡಿಯಾಪು ಸಮೀಪ 40 ಎಕ್ರೆ ಜಾಗೆ ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ಮೀಸಲು ಇರಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ರೂ. 250 ಕೋಟಿ ಅನುದಾನ ಕೇಳಿದ್ದೇವೆ. ಮುಖ್ಯಮತ್ರಿಗಳಿಗೆ ಕಳೆದ ಬಜೆಟ್ನಲ್ಲಿ ಹೊಂದಾಣಿಕೆ ಮಾಡಲು ಆಗಿಲ್ಲ. ಈ ವರ್ಷದ ಬಜೆಟ್ನಲ್ಲಿ ಕೊಡುತ್ತೆವೆ ಎಂದು ಹೇಳಿದ್ದಾರೆ. ಹಾಗಾಗಿ 300 ಬೆಡ್ ಆಸ್ಪತ್ರೆಗೆ ಪ್ರಸ್ತಾವನೆ ಮಾಡುದಾ ಅಥವಾ ಮೆಡಿಕಲ್ ಕಾಲೇಜಿನ ಪ್ರಸ್ತಾವನೆ ಮಾಡುದೋ ಎಂಬುದು ಇಲ್ಲಿ ಮುಖ್ಯ. ನನ್ನ ಪ್ರಕಾರ ಮುಂದಿನ ಆರ್ಥಿಕ ವರ್ಷದಲ್ಲಿ ಮೆಡಿಕಲ್ ಕಾಲೇಜು ಸಿಕ್ಕಿಲ್ಲ ಎಂದರೆ ಆಸ್ಪತ್ರೆಯನ್ನು ಮೇಲ್ದದರ್ಜೆಗೆ ಏರಿಸುವ 2ನೇ ಅಪ್ಷನ್ ಇಡೋಣ.

 

ಸಾಂತ್ವನ ಕೇಂದ್ರ ದುರಸ್ಥಿಗೆ ಶಾಸಕರ ಸೂಚನೆ
ಇದೇ ವೇಳೆ ಮಾತನಾಡಿದ ಶಾಸಕರು ಸಾಂತ್ವನ ಕೇಂದ್ರ ನಾದುರಸ್ಥಿಯಲ್ಲಿದೆ ಅದನ್ನು ಶೀಘ್ರವೇ ದುರಸ್ಥಿ ಮಾಡಬೇಕು. ಮಹಿಳಾ ಸಾಂತ್ವನ ಕೇಂದ್ರಕ್ಕೆ ಏನೆಲ್ಲಾ ವ್ಯವಸ್ಥೆಗಳು ಬೇಕೋ ಅದೆಲ್ಲವನ್ನೂ ಮಾಡಬೇಕು. ಆ ಕೇಂದ್ರದಲ್ಲಿ ಸಾಂತ್ವನ ನೀಡುವ ಮೂಲಕ ಯಾರಿಗಾದ್ರು ಒಬ್ಬರಿಗೆ ಒಳ್ಳೆಯದಾದರೂ ಅದು ನಮಗೆ ಅತ್ಯಂತ ಸಂತೋಷದ ವಿಚಾರವಾಗಿದೆ. ಇಲ್ಲಿ ಜನರಿಗೆ ಏನು ಬೇಕೋ ಅದೆಲ್ಲವನ್ನೂ ಅಗತ್ಯವಾಗಿ ವ್ಯವಸ್ಥೆ ಮಾಡಬೇಕು. ವ್ಯವಸ್ಥೆ ಇಲ್ಲದೆ ಬಡವರು ತೊಂದರೆಗೊಳಗಾಗಬಾರದು ಎಂಬುದೇ ನನ್ನ ಉದ್ದೇಶವಾಗಿದೆ ಎಂದು ಶಾಸಕರು ಸೂಚಿಸಿದರು. ನಗರಸಭಾ ಕಮಿಷನರ್ ರವರು ಸಾಂತ್ವನ ಕೆಂದ್ರ ದುರಸ್ತಿ ಮಾಡಿಸುವುದಾಗಿ ಸಭೆಗೆ ತಿಳಿಸಿದರು.

Muliya

ಜಾಹೀರಾತು

SendShare8Share
Previous Post

ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

Next Post

ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..