ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಪಕ್ಷದ ಹಿರಿಯ ನಾಯಕ ಆರ್.ಎಸ್.ಭಾರತಿ ವಿರುದ್ಧ 01 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ’ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಿಳಿಸಿದ್ದಾರೆ.
ವಿಷಯುಕ್ತ ಮದ್ಯ ಸೇವಿಸಿ 60ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಡಿಎಂಕೆಯು ತನ್ನ ದುರಾಡಳಿತದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.
ನನ್ನ ಮೇಲೆ ನಿಂದನಾತ್ಮಕ, ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಅವರಿಗೆ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಲಾಗಿದೆ’. 01 ಕೋಟಿ ಪರಿಹಾರ ನೀಡಲು ತಿಳಿಸಲಾಗಿದೆ. ಈ ಹಣವನ್ನು ಕರುಣಾಪುರಂ, ಕಲ್ಲಕುರಿಚ್ಚಿಯಲ್ಲಿ ಮದ್ಯ ವರ್ಜನ ಶಿಬಿರಗಳನ್ನು ನಿರ್ಮಿಸಲು ಬಳಸಲಾಗುವುದು’ ಎಂದು ಅಣ್ಣಾಮಲೈ ಹೇಳಿದ್ದಾರೆ.