• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐಸಿಸಿ ಟಿ20 ವಿಶ್ವಕಪ್​; 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಐಸಿಸಿ ಟಿ20 ವಿಶ್ವಕಪ್​; 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

June 28, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಐಸಿಸಿ ಟಿ20 ವಿಶ್ವಕಪ್​; 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

by ಪ್ರಜಾಧ್ವನಿ ನ್ಯೂಸ್
June 28, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೀಡೆ, ರಾಷ್ಟ್ರೀಯ
0
ಐಸಿಸಿ ಟಿ20 ವಿಶ್ವಕಪ್​; 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ
22
SHARES
64
VIEWS
ShareShareShare

ಪ್ರೊವಿಡೆನ್ಸ್‌: ಅಕ್ಷರ್​ ಪಟೇಲ್​(23ಕ್ಕೆ 3), ಕುಲ್​ದೀಪ್​ ಯಾದವ್​(19ಕ್ಕೆ 3) ಜೋಡಿಯ ಸ್ಪಿನ್​ ದಾಳಿ ಹಾಗೂ ರೋಹಿತ್​ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಯ  ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 68 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಸಾಧನೆ ಮಾಡಿದೆ. ಜತೆಗೆ 2022ರ ಸೆಮಿಫೈನಲ್​ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು. ಈ ಸೋಲಿನಿಂದಿಗೆ ಹಾಲಿ ಚಾಂಪಿಯನ್​ ಆಗಿದ್ದ ಇಂಗ್ಲೆಂಡ್​ ಈಗ ಮಾಜಿ ಆಯಿತು.

Poorna squash

ಜಾಹೀರಾತು

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ಗೆ ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ಒಂದು ಹಂತದಲ್ಲಿ ಅವರ ಬ್ಯಾಟಿಂಗ್ ನೋಡುವಾಗ 2022ರ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯವೊಮ್ಮೆ ಕಣ್ಣ ಮುಂದೆ ಬಂದಿತು. ಅಬ್ಬರದ ಬ್ಯಾಟಿಂಗ್​ ಮೂಲಕ ಮುನ್ನುಗ್ಗುತ್ತಿದ್ದ ಇವರನ್ನು ಕೊನೆಗೂ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್​ ಕಟ್ಟಿಹಾಕಿದರು. ತಾನೆಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಎಗರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ರಿವರ್ಸ್​ ಸ್ವೀಪ್​ ಮಾಡುವ ಯತ್ನದಲ್ಲಿ ಕೀಪರ್​ ರಿಷಭ್​ ಪಂತ್​ಗೆ ಕ್ಯಾಚ್​ ನೀಡಿ ವಿಕೆಟ್​ ಒಪ್ಪಿಸಿದರು. ಬಟ್ಲರ್​ 4 ಬೌಂಡರಿ ನೆರವಿನಿಂದ 23 ರನ್​ ಬಾರಿಸಿದರು.

2ನೇ ಓವರ್​ನಲ್ಲಿ ಅಕ್ಷರ್ ಮತ್ತೊಂದು ದೊಡ್ಡ ವಿಕೆಟ್​ ಬೇಟೆಯಾಡಿದರು.​ ಅಪಾಯಕಾರಿ ಬ್ಯಾಟರ್​ ಜಾನಿ ಬೇರ್​ಸ್ಟೋ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್​ಗೆ ಅಟ್ಟಿದರು. ಈ ವಿಕೆಟ್​ ಪತನಕ್ಕೂ ಮುನ್ನ ಜಸ್​ಪ್ರೀತ್​ ಬುಮ್ರಾ ತಮ್ಮ ಯಾರ್ಕರ್​ ದಾಳಿಯಿಂದ ಫಿಲ್​ ಸಾಲ್ಟ್ ಅವರನ್ನು ಕ್ಲೀನ್​ ಬೌಲ್ಟ್​ ಮಾಡಿದ್ದರು.​

35 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್​ಗೆ ಆ ಬಳಿಕ ಬಂದ ಬ್ಯಾಟರ್​ಗಳು ಕೂಡ ಆಸರೆಯಾಗುವಲ್ಲಿ ವಿಫಲರಾದರು. ಮೊಯಿನ್​ ಅಲಿ(8) ಕ್ರೀಸ್​ ಬಿಟ್ಟು ಸಿಕ್ಸರ್​ ಬಾರಿಸುವ ಯತ್ನದಲ್ಲಿ ರಿಷಭ್​ ಪಂತ್​ ಅವರ ಮಿಂಚಿನ ವೇಗದ ಸ್ಟಂಪ್​ ಬಲೆಗೆ ಬಿದ್ದರು. ಈ ವಿಕೆಟ್​ ಕೂಡ ಅಕ್ಷರ್​ ಪಾಲಾಯಿತು. ಆ ಬಳಿಕ ಆಡಲಿಳಿದ ಆಲ್​ರೌಂಡರ್​ ಸ್ಯಾಮ್​ ಕರನ್(2)​ ಅವರನ್ನು ಕುಲ್​ದೀಪ್​ ಯಾದವ್​ ತಮ್ಮ ಮೊದಲ ಓವರ್​ನಲ್ಲಿಯೇ ಎಲ್​ಬಿಡಬ್ಲ್ಯು ಬಲೆಗೆ ಬೀಳಿಸಿದರು. 5ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಹ್ಯಾರಿ ಬ್ರೂಕ್​ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟವನ್ನು ಸಂಘಟಿಸಿದರೂ ಕೂಡ 25 ರನ್​ಗೆ ಇವರ ವಿಕೆಟ್​ ಕೂಡ ಪತನಗೊಂಡಿತು. ಇಲ್ಲಿಗೆ ಇಂಗ್ಲೆಂಡ್​ ಸೋಲು ಕೂಡ ಖಚಿತಗೊಂಡಿತು. ಅಂತಿಮ ಹಂತದಲ್ಲಿ ವೇಗಿ ಜೋಫ್ರಾ ಆರ್ಚರ್​ 1 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಸಿ 21 ರನ್​ ಗಳಿಸುವ ಮೂಲಕ ತಂಡದ ಮೊತ್ತವನ್ನು 100 ಗಡಿ ದಾಟಿಸಿದರು. ಭಾರತ ಪರ ಕುಲ್​ದೀಪ್​ ಯಾದವ್​ ಮತ್ತು ಅಕ್ಷರ್​ ಪಟೇಲ್ ತಲಾ ಮೂರು ವಿಕೆಟ್​ ಕಿತ್ತರೆ, ಜಸ್​ಪ್ರೀತ್​ ಬುಮ್ರಾ 2 ವಿಕೆಟ್​ ಉರುಳಿಸಿದರು.

ಮಳೆ ನಿಂತ ಬಳಿಕ ರೋಹಿತ್ ಶರ್ಮ ಜತೆ ಸೂರ್ಯಕುಮಾರ್​ ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟರು. ಉಭಯ ಆಟಗಾರರು ಸೇರಿಕೊಂಡು ಮೂರನೇ ವಿಕೆಟ್ 73​ ಜತೆಯಾಟ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. 5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ವಿಕೆಟ್​ ಪತನಗೊಂಡು 11 ರನ್​ ಅಂತರದಲ್ಲಿ ಸೂರ್ಯಕುಮಾರ್​ ವಿಕೆಟ್​ ಕೂಡ ಬಿತ್ತು. ಸೂರ್ಯಕುಮಾರ್​ 47(4 ಬೌಂಡರಿ, 2ಸಿಕ್ಸರ್​) ರನ್​ ಬಾರಿಸಿದರು.

vishnu studio

ಜಾಹೀರಾತು

ಉತ್ತಮ ಸ್ಥಿತಿಯಲ್ಲಿದ್ದ ಭಾರತ, ಸೂರ್ಯಕುಮಾರ್​ ಮತ್ತು ರೋಹಿತ್​ ವಿಕೆಟ್​ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಶಿವಂ ದುಬೆ(0) ಗೋಲ್ಡನ್​ ಡಕ್​ ಸಂಕಷ್ಟಕ್ಕೆ ಸಿಲುಕಿದರೆ, ಅಕ್ಷರ್​ ಪಟೇಲ್​ 10 ರನ್​ಗೆ ಆಟ ಮುಗಿಸಿದರು. ಅಂತಿಮವಾಗಿ ಜಡೇಜಾ ಅಜೇಯ 17(9 ಎಸೆತ, 2 ಬೌಂಡರಿ) ಮತ್ತು ಹಾರ್ದಿಕ್​ ಪಾಂಡ್ಯ 23(13 ಎಸೆತ, 2 ಸಿಕ್ಸರ್​, 1 ಬೌಂಡರಿ) ರನ್ ಬಾರಿಸಿದ ಪರಿಣಾಮ ತಂಡ 150ರ ಗಡಿ ದಾಟಿತು. ಇಂಗ್ಲೆಂಡ್​ ಪರ ಕ್ರಿಸ್​ ಜೋರ್ಡನ್​ 37 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಉರುಳಿಸಿದರು.

camera center ad

ಜಾಹೀರಾತು

ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

Keshari Durga

ಜಾಹೀರಾತು

SendShare9Share
Previous Post

ಕಲಬುರ್ಗಿ: ಭೀಕರ ರಸ್ತೆ ಅಪಘಾತ 13 ಮಂದಿ ಸ್ಥಳದಲ್ಲೇ ಸಾವು. ದೇವರ ದರುಶನ ‌ಮಾಡಿ ಬಂದವರ ಮನೆಯಲ್ಲಿ ‌ಸೂತಕದ ಛಾಯೆ

Next Post

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..