• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

July 26, 2024
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

by ಪ್ರಜಾಧ್ವನಿ ನ್ಯೂಸ್
July 26, 2024
in ಜಿಲ್ಲೆ, ದಕ್ಷಿಣ ಕನ್ನಡ, ರಾಜ್ಯ
0
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.
9
SHARES
26
VIEWS
ShareShareShare

1974ರ ಜು. 26ರಂದು ಕರಾವಳಿಯಲ್ಲಿ ಗಂಡಾಂತರಕಾರಿ ವಿದ್ಯಮಾನವೊಂದು ಜರಗಿತ್ತು. ಮೂರು ದಿನಗಳಿಂದ ಎಡೆಬಿಡದೆ ಸುರಿದ ಕುಂಭದ್ರೋಣ ಮಳೆ ಇಡೀ ಕರಾವಳಿ ಯನ್ನು ಮುಳುಗಿಸಿತ್ತು. ನೇತ್ರಾವತಿ, ಕುಮಾರಧಾರೆ, ಗುರುಪುರ, ಸ್ವರ್ಣಾ, ಸೀತಾ ಸೇರಿ ದಂತೆ ಎಲ್ಲ ನದಿಗಳು ಉಕ್ಕೇರಿ ಹರಿದು ಸಮೀ ಪದ ಪೇಟೆ ಪಟ್ಟಣಗಳನ್ನು ಆಪೋಷನ ತೆಗೆದು ಕೊಂಡಿದ್ದವು. ಆವತ್ತು ಸಾವಿರಾರು ಮನೆಗಳು ಉರುಳಿದ್ದವು, ಜೀವಹಾನಿ ಸಂಭವಿಸಿತ್ತು. ಇವ ತ್ತಿಗೂ ಒಂದು ಪೀಳಿಗೆಯ ಜನ ಆ ಮಹಾ ಪ್ರವಾ ಹವನ್ನು ನೆನಪಿಸಿಕೊಂಡು ನಡುಗುತ್ತಾರೆ. ಅಂಥ 1974ರ ಮಾರಿ ಬೊಲ್ಲಕ್ಕೆ ಇಂದಿಗೆ (ಜು. 26) ಐವತ್ತು ವರ್ಷ. ಆ ಮಾರಿ ಬೊಲ್ಲಕ್ಕೆ ಸಾಕ್ಷಿಯಾದ ಕೆಲವರು ನೆನಪುಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ.

1923ರಲ್ಲಿ ಮೊದಲ ಮಾರಿ ಬೊಲ್ಲ.

ಒಂದು ಶತಮಾನದ ಹಿಂದೆ ಅಂದರೆ 1923ರಲ್ಲಿಯೇ ಕರಾವಳಿಯ ಅತೀ ದೊಡ್ಡ ಪ್ರವಾಹ ಸೃಷ್ಟಿಯಾಗಿತ್ತು. ಆಗಲೂ ಇದೇ ರೀತಿ
ನದಿಗಳು ಉಕ್ಕಿ ತೀರದ ಪಟ್ಟಣಗಳನ್ನು ಮುಳು ಗಿಸಿದ್ದವು. ಆ ಮಾರಿ ಬೊಲ್ಲಕ್ಕೆ ಸಂಬಂಧಿಸಿ ಕುರುಹುಗಳು, ಐತಿಹ್ಯಗಳು ಸಿಗುತ್ತವೆ. ಆದರೆ, ಕಣ್ಣಾರೆ ಕಂಡವರು ಈಗ ಸಿಗುವುದು ಕಷ್ಟ. ಆದರೆ, 1974ರ ಮಾರಿ ಬೊಲ್ಲಕ್ಕೆ ಚಿತ್ರ ಸಾಕ್ಷಿಗಳಿವೆ. ಬೊಲ್ಲದ ಭಯಾನಕತೆಯನ್ನು ಅನುಭವಿಸಿದ ಒಂದು ಪೀಳಿಗೆಯೇ ನಮ್ಮ ಜತೆ ಗಿದೆ. ಈಗಲೂ ಜೋರಾಗಿ ಮಳೆ ಬಂದಾಗ ಅವರ ನೆನಪು 1974ಕ್ಕೆ ಓಡುತ್ತದೆ.

camera center ad

ಜಾಹೀರಾತು

1974: ಎಲ್ಲೆಲ್ಲಿ ಅತೀ ಹೆಚ್ಚು ಹಾನಿ?
*ನೇತ್ರಾವತಿ-ಕುಮಾರಧಾರ ಸಂಗಮದ ಉಪ್ಪಿನಂಗಡಿ ಪಟ್ಟಣ.
*ನೇತ್ರಾವತಿ ತೀರದ ಪಾಣೆ ಮಂಗಳೂರು, ಬಂಟ್ವಾಳ
*ಗುರುಪುರ ನದಿ ತೀರದ ಜೋಕಟ್ಟೆ ಪ್ರದೇಶ
*ಸ್ವರ್ಣಾ ನದಿ ತೀರದ ಉಪ್ಪೂರು, ಕಲ್ಯಾಣಪುರ, ಹೆರ್ಗ
*ಉಡುಪಿ ನಗರದಲ್ಲೂ ಸಾಕಷ್ಟು ನಾಶ, ನಷ್ಟವಾಗಿತ್ತು
*ಉದ್ಯಾವರ, ಕಾಪು ಪ್ರದೇಶದಲ್ಲಿ ಮನೆಗಳೇ ಮುಳುಗಿದ್ದವು
*ಕುಂದಾಪುರ ತಾ|ನ 9 ಗ್ರಾಮಗಳು ನೀರಿನೊಳಗಿದ್ದವು!
ಇಡೀ ಉಪ್ಪಿನಂಗಡಿ ನೀರಲ್ಲಿ ಮುಳುಗಿತ್ತು!
ಆವತ್ತು ಬೆಳಗ್ಗೆ ನೇತ್ರಾವತಿ-ಕುಮಾರಧಾರೆ ಸಂಗಮ ಆಗಿತ್ತು. ಸಾಮಾನ್ಯವಾಗಿ ಸಂಗಮದ ಬಳಿಕ ನೀರು ಇಳಿಯುತ್ತದೆ. ಆದರೆ, ಆ ದಿನ ಏರುತ್ತಲೇ ಹೋಯಿತು. ಸಂಜೆ ಹೊತ್ತಿಗೆ ನಮ್ಮ ಮನೆಯಂಗಳಕ್ಕೆ ಬಂದ ನೀರು ರಾತ್ರಿಯಾಗುತ್ತಿ ದ್ದಂತೆಯೇ ಮನೆಯೊಳಗೇ ನುಗ್ಗಿತು. ಆಗ ದೋಣಿ ಮೂಲಕ ನಮ್ಮನ್ನು ಉಪ್ಪಿನಂಗಡಿ ಹೈಸ್ಕೂಲ್‌ ಕಟ್ಟಡಕ್ಕೆ ಸ್ಥಳಾಂತರಿಸಿದರು: ಎನ್ನುತ್ತಾರೆ ಉಪ್ಪಿನಂಗಡಿಯಲ್ಲಿ ವೈದ್ಯರಾಗಿರುವ ಡಾ.ಯತೀಶ್‌ ಶೆಟ್ಟಿ

Poorna squash

ಜಾಹೀರಾತು

Keshari Durga

ಜಾಹೀರಾತು

ನಮ್ಮದು ಹೊಸ ಮನೆ. 1972ರಲ್ಲಿ ನಿರ್ಮಾಣ ಆಗಿತ್ತು. ನಾನಾಗ ಪ್ರಥಮ ಪಿಯುಸಿ ವಿದ್ಯಾರ್ಥಿ. ಮನೆಯಲ್ಲಿ ಒಟ್ಟು ಆರು ಮಂದಿ ಇದ್ದೆವು. ನಮ್ಮೆಲ್ಲರನ್ನು ದೋಣಿ ಮೂಲಕವೇ ರಕ್ಷಿಸಿದರು. ಇಂತಹ ಪ್ರವಾಹವೊಂದು ಬಂದಿತ್ತು ಅನ್ನುವುದನ್ನು ಈಗಿನ ಪೀಳಿಗೆ ನಂಬುವುದೇ ಕಷ್ಟ. ಇಡೀ ಪೇಟೆ ನೆರೆಯಿಂದ ಮುಳುಗಿ ಹೋಗಿತ್ತು. ಸಿಂಡಿಕೇಟ್‌ ಬ್ಯಾಂಕ್‌ ಇದ್ದ ಸ್ಥಳದ ತನಕವೂ ನೆರೆ ನೀರು ಆವರಿಸಿತ್ತು. ನಮ್ಮ ಮನೆ ಅರ್ಧ ಮುಳುಗಿತ್ತು. ಉಪ್ಪಿನಂಗಡಿ ದೇವಾಲಯದ ಗರ್ಭಗುಡಿ ಒಳಗೂ ನೀರು ಪ್ರವೇಶಿಸಿತ್ತು ಎಂದು ಯತೀಶ್‌ ಶೆಟ್ಟಿ ನೆನಪಿಸಿಕೊಂಡರು.
ನನ್ನ ತಂದೆ ಶೀನಪ್ಪ ಶೆಟ್ಟಿ ಅವರು ಹಳೆ ಬಸ್‌ ನಿಲ್ದಾಣದ ಬಳಿ ಬಾಡಿಗೆ ಕಟ್ಟಡದಲ್ಲಿ ಶಾಪ್‌ ಹೊಂದಿದ್ದರು. ನೆರೆಯಿಂದ ಆ ಕಟ್ಟಡ ಪೂರ್ತಿ ಧರೆಶಾಹಿಯಾಯಿತು. ಜತೆಗೆ ಕಟ್ಟಡ ಮಾಲಕ ನರಸಿಂಹ ಪೈ ಅವರ ಮನೆಯು ಕುಸಿದಿತ್ತು ಎಂದು ಡಾ| ಯತೀಶ್‌ ಶೆಣೈ ನೆನಪಿಸಿಕೊಂಡಿದ್ದಾರೆ.
ಬಿದ್ದ ಮನೆಗಳು,ಎಳೆ ಮಕ್ಕಳ ರಕ್ಷಣೆ
ಮಳೆ ಮತ್ತು ನೆರೆಯಿಂದಾಗಿ ಮಜೂರು, ಪಾದೂರು, ಕರಂದಾಡಿ ಪರಿಸರದಲ್ಲಿ ಹತ್ತಾರು ಮನೆಗಳು ಧರಾಶಾಯಿಯಾಗಿದ್ದವು. ನೆರೆ ಹೆಚ್ಚಿ ತೀವ್ರ ಅಪಾಯಕ್ಕೆ ಸಿಲುಕಿದ್ದ ಮಂಜುನಾಥ ನಾಯ್ಕ್‌ ಮತ್ತು ಅವರ ಮನೆಯಲ್ಲಿದ್ದ ಎಳೆಯ ಮಕ್ಕಳು ಸೇರಿದಂತೆ ಹಲವರನ್ನು ರಕ್ಷಿಸಿದ್ದು ಈಗಲೂ ನೆನಪಿಗೆ ಬರುತ್ತದೆ ಎನ್ನುತ್ತಾರೆ ಪಾದೂರು ಒಡಿಪೆನಿ ನಿವಾಸಿ ರತ್ನಾಕರ ಶೆಟ್ಟಿ ಅವರು. ಆವತ್ತು ಜೀವಭಯದಿಂದ ಒದ್ದಾಡುತ್ತಿದ್ದ ನಾನು ಮತ್ತು ಸಹೋದರ, ಸಹೋದರಿ ಸೇರಿದಂತೆ 7 ಮಂದಿಯನ್ನು ಊರಿನ ಹಿರಿಯರಾದ ರತ್ನಾಕರ ಶೆಟ್ಟಿ, ಸಂಜೀವ ಗುರ್ಮೆ ಮೊದಲಾದವರು ಹೆಗಲಿನಲ್ಲಿ ಹೊತ್ತುಕೊಂಡು ಹೋಗಿ ರಕ್ಷಿಸಿದ್ದರು ಎಂದು ಚಂದ್ರನಗರದ ಪದ್ಮಾವತಿ ನಾಯ್ಕ್‌ ನೆನಪಿಸಿಕೊಂಡಿದ್ದಾರೆ. ಅಂದು ನಾಗರ ಪಂಚಮಿಯಾಗಿದ್ದು ಎದೆ ಮಟ್ಟದವರೆಗೆ ನೀರಿನಲ್ಲಿ ನಡೆದುಕೊಂಡೇ ಹೋಗಿ ನಾಗ ದೇವರಿಗೆ ತನು ಅರ್ಪಿಸಿದ್ದೆವು ಎಂದರು ಜಗದೀಶ್‌ ರಾವ್‌ ಗುರ್ಮೆ.

vishnu studio

ಜಾಹೀರಾತು

ಉಡುಪಿಯಲ್ಲಿ ಹಲವು ಮನೆ ನಾಶ
ಉಡುಪಿಯ ಶೆಟ್ಟಿಬೆಟ್ಟು ಪ್ರದೇಶದಲ್ಲಿ ಹತ್ತಾರು ಮಂದಿ ಅಂದು ಮನೆ ಕಳೆದುಕೊಂಡಿದ್ದರು. ಎಮ್ಮೆಗಳು, ಇತರ ಜಾನುವಾರುಗಳು, ಹಾರ್ಮೋನಿಯಂ ಸೇರಿದಂತೆ ನಾನಾ ವಸ್ತುಗಳು ನೆರೆಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಅಸ ಹಾಯಕವಾಗಿ ನೋಡಿದ್ದನ್ನು ಹಲವರು ನೆನ ಪಿಸಿಕೊಂಡಿದ್ದಾರೆ.
ಏನೇನು ನಾಶ? ಎಷ್ಟು ನಷ್ಟ ?
6 ಜನ ಪ್ರಾಣ ಕಳೆದುಕೊಂಡವರು
5000 ಪೂರ್ಣ ನಾಶವಾದ ಮನೆ
4000 ಭಾಗಶ: ನಾಶವಾದ ಮನೆ
11,000 ನಿರ್ವಸಿತರಾದವರು
172 ಮೃತ ಜಾನುವಾರುಗಳು
3500 ಹೆಕ್ಟೇರ್‌ ಕೃಷಿ ನಾಶ
2.72 ಕೋಟಿ ರೂ. ಒಟ್ಟು ನಷ್ಟ
ವಸ್ತುಗಳನ್ನು ಮೊದಲೇ ಸಾಗಿಸಿದ್ದೆವು
ನೇತ್ರಾವತಿ ನದಿ ರೌದ್ರ ರೂಪ ತಾಳಿದ್ದರಿಂದ ಪಾಣೆಮಂಗಳೂರು-ಬಂಟ್ವಾಳ ಪೇಟೆಯಲ್ಲಿ ಅಳೆತ್ತರಕ್ಕೆ ನೀರು ತುಂಬಿತ್ತು. ನೆರೆಯ ಸೂಚನೆ ಮೊದಲೇ ಲಭಿಸಿದ್ದ ಕಾರಣ ಅಗತ್ಯ ಸರಕುಗಳನ್ನು ಹೊತ್ತುಕೊಂಡೇ ಸುರಕ್ಷಿತ ಜಾಗಕ್ಕೆ ಹೋಗಿದ್ದೆವು ಎನ್ನುತ್ತಾರೆ 80ರ ಹರೆಯದ ಪಾಣೆಮಂಗಳೂರಿನ ಎನ್‌. ಪಾಂಡುರಂಗ ಪ್ರಭುಗಳು. ಆಗ ಪ್ರಭುಗಳು ರಿಕ್ಷಾ ಚಾಲಕರಾಗಿದ್ದರು. ನಾವು ಅಗತ್ಯ ವಸ್ತುಗಳನ್ನು ಹಿಡಿದುಕೊಂಡು ಮನೆ ಬಿಟ್ಟಿದ್ದೆವು. ಆದರೆ ನೆರೆ ಇಳಿದ ಬಳಿಕ ಹೋಗಿ ನೋಡಿದಾಗ ನದಿ ಕಿನಾರೆಯಲ್ಲಿದ್ದ ಹಲವರ ಮನೆ ಪಂಚಾಂಗ ಸಮೇತ ಸಂಪೂರ್ಣ ನಾಶವಾಗಿತ್ತು. ಪಾಣೆಮಂಗಳೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಮನೆಗಳನ್ನು ಕಳೆದುಕೊಂಡಿದ್ದರು. ಇಡೀ ಸಮಾಜ ಮುಂದೆ ನಿಂತು ಅವರಿಗೆ ಪುನ ರ್ವಸತಿ ಕಲ್ಪಿಸಿತು ಎನ್ನುತ್ತಾರೆ ಪ್ರಭುಗಳು.

ದೋಣಿಗಳು ಕೊಚ್ಚಿ ಹೋಗಿದ್ದವು
ನಾನಾಗ 10ನೇ ಕ್ಲಾಸ್‌. ಆವತ್ತು ಕಟ್ಟಿ ಹಾಕಿದ್ದ ದೋಣಿಗಳು ಕೊಚ್ಚಿಕೊಂಡು ಹೋಗಿದ್ದವು. ನೆರೆ ಒಂದೇ ಸಮನೆ ಏರುತ್ತಿತ್ತು. ಜನರನ್ನು ದೋಣಿಗಳ ಮೂಲಕ ರಕ್ಷಿಸಲಾಗಿತ್ತು. ಉದ್ಯಾವರ ಗ್ರಾಮದ ಅಂಕುದ್ರು ಭಟ್ರ ಮನೆಯ ವಿಶಾಲವಾದ ಹಟ್ಟಿಯಲ್ಲಿ ಸುಮಾರು 3-4 ಕುಟುಂಬಗಳು ಆಶ್ರಯ ಪಡೆದಿತ್ತು.
*ಪ್ರೊ|ವಿ.ಕೆ. ಉದ್ಯಾವರ
ಹೊಳೆದಂಡೆಗೆ ಮಡಲೇ ತಡೆ!
ನನಗೆ ಆಗ ಸುಮಾರು 20 ವರ್ಷ ಪ್ರಾಯ. ಕಟಪಾಡಿ ಏಣಗುಡ್ಡೆ ಗ್ರಾಮದ ವೆಸ್ಟ್‌ ಕೋಸ್ಟ್‌ ರಸ್ತೆಯ (ಹಳೆ ಎಂಬಿಸಿ ರಸ್ತೆ) ಪಶ್ಚಿಮ ಭಾಗದ ಕುದ್ರು ಭಾಗದಲ್ಲಿ ತೀವ್ರ ನೆರೆ ಬಾಧಿತವಾಗಿತ್ತು. ಆ ಭಾಗದ ಸುಮಾರು 10 ಕುಟುಂಬ ತೇಕಲ ತೋಟದಲ್ಲಿದ್ದ ಸುತ್ತು ಮಡಲಿನ ನಮ್ಮ ಮನೆ ಹಾಗೂ ವಿಶಾಲವಾದ ಹಟ್ಟಿಯಲ್ಲಿ ಆಶ್ರಯವನ್ನು ಪಡೆದಿದ್ದರು. ಒಬ್ಬಾಕೆಯ ಹೆರಿಗೆಯೂ ಅಲ್ಲೇ ನಡೆದಿತ್ತು. ಹೊಳೆಗೆ ಮಣ್ಣಿನ ದಂಡೆ ಮಡಲುಗಳೇ ತಡೆಯಾಗಿತ್ತೇ ವಿನಃ ಈಗಿನಂತೆ ನದಿ ದಂಡೆ ಇರಲಿಲ್ಲ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare4Share
Previous Post

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

Next Post

ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..