• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

July 28, 2024

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

December 15, 2025
ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

December 14, 2025
ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ  ಪೊಲೀಸ್ ಠಾಣೆಯಲ್ಲಿ  ದೂರು

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

December 13, 2025
ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

December 12, 2025
ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

December 13, 2025
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

December 12, 2025
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

by ಪ್ರಜಾಧ್ವನಿ ನ್ಯೂಸ್
July 28, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ
22
SHARES
64
VIEWS
ShareShareShare

ಪುತ್ತೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ. ಸುಳ್ಳು ಸುದ್ದಿಗಳನ್ನು ಹಾಕಿದಾಗ ಸಮಾಜದ ಹಾಗೂ ಕುಟುಂಬದ ಮೇಲೆ ಬಹಳ ಪ್ರಭಾವ ಬೀರುತ್ತದೆ. ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಜು.27ರಂದು ನಡೆದ ಪತ್ರಿಕಾ ದಿನಾಚರಣೆ-ಉಪನ್ಯಾಸ-ಸನ್ಮಾನ ಸಮಾರಂಭವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಎಂಬ ಮೂರು ಅಂಗಗಳಿದ್ದು ಇವು ಮೂರು ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಅವುಗಳನ್ನು ಎಚ್ಚರಿಸುವ ನಾಲ್ಕನೇ ಅಂಗವಾಗಿ ಪತ್ರಿಕಾಂಗ ಕಾರ್ಯ ನಿರ್ವಹಿಸುತ್ತದೆ. ಪೆನ್ನು ಕತ್ತಿಗಿಂತ ಶಕ್ತಿಶಾಲಿಯಾಗಿದೆ. ಆದರೆ ಅದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸಬಾರದು. ಪತ್ರಕರ್ತರು ಎಥಿಕ್ಸ್‌ನೊಂದಿಗೆ ಜವಾಬ್ದಾರಿ ವಹಿಸಿಕೊಂಡು ಕರ್ತವ್ಯ ನಿರ್ವಹಿಸುವವರಾಗಬೇಕು ಎಂದು ಹೇಳಿದ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಾಲಗಂಗಾಧರ್ ತಿಲಕ್, ಭಗತ್ ಸಿಂಗ್‌ರವರೂ ಆ ಕಾಲದಲ್ಲಿ ಸ್ವಾತಂತ್ರ್ಯದ ಹೋರಾಟದೊಂದಿಗೆ ಪತ್ರಕರ್ತರಾಗಿ ದುಡಿದವರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮಾತನಾಡಿ, ವರದಿಗಾರಿಕೆಗೆ ಸಂಬಂಧಪಟ್ಟಂತೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನೆರವು ನೀಡಲು ಸುದ್ದಿ ಬಿಡುಗಡ, ಕಹಳೆ, ವಿಟಿವಿ ಸಂಸ್ಥೆ ಸದಾ ಸಿದ್ಧವಿದೆ ಎಂದು ತಿಳಿಸಿದರು. ನಮ್ಮ ಯೂನಿಯನ್‌ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ ಅವರು ನಮ್ಮ ಸಂಘದಲ್ಲಿ ವಿವಿಧ ಪತ್ರಿಕೆ, ಟಿ.ವಿ. ಮತ್ತು ವೆಬ್ ಮಾಧ್ಯಮದ ವರದಿಗಾರರು ಸದಸ್ಯರಾಗಿದ್ದಾರೆ. ಈ ಸದಸ್ಯರಿಗೆ ಕಾರ್ಯ ನಿರ್ವಹಿಸಲು ಸ್ಥಳದ ಅವಶ್ಯಕತೆ ಇದೆ. ಹಾಗಾಗಿ ಪತ್ರಿಕಾ ಭವನದಲ್ಲಿ ನಮ್ಮ ಯೂನಿಯನ್ ಸದಸ್ಯರಿಗೆ ಮಾತ್ರವಲ್ಲದೆ ಎಲ್ಲಾ ಪತ್ರಕರ್ತರ ಸಂಘದವರಿಗೂ ಸಮಾನ ಅವಕಾಶ ಸಿಗುವಂತಾಗಬೇಕಿದೆ ಎಂದರು. ನಮ್ಮ ಸದಸ್ಯರಿಗೆ ಸರಕಾರದ ಸವಲತ್ತು ಮತ್ತು ಇನ್ಸೂರೆನ್ಸ್ ವ್ಯವಸ್ಥೆ ಸಿಗುವಂತೆ ಮಾಡಲು ಪ್ರಯತ್ನ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸಲಿದ್ದೇವೆ ಎಂದು ಅವರು ತಿಳಿಸಿದರು.

ದ.ಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡು ಮಾತನಾಡಿ ನಕಾರಾತ್ಮಕ ಲೇಖನಗಳನ್ನು ಓದುಗರು ಓದುವುದು ಕಡಿಮೆ ಮಾಡಿದಾಗ ಮತ್ತು ಸಕರಾತ್ಮಕ ಲೇಖನಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಸಮಾಜದ ಸ್ವಾಸ್ಥ್ಯ ಉಳಿಯುತ್ತದೆ ಎಂದರು. ಪುತ್ತೂರು ವ್ಯಾಪ್ತಿಗೆ ಸಂಬಂಧಪಟ್ಟ ಹಾಗೆ ತುಳುವಿನಲ್ಲಿ ಒಳ್ಳೆಯ ಡಾಕ್ಯುಮೆಂಟರಿ ಮಾಡುವವರಿಗೆ, ಪುಸ್ತಕ ಪ್ರಕಟಿಸುವವರಿಗೆ ತುಳು ಸಾಹಿತ್ಯ ಅಕಾಡೆಮಿ ಫೆಲೋಶಿಪ್ ನಗದು ನೀಡುತ್ತದೆ ಎಂದು ಹೇಳಿದ ಅವರು ಪತ್ರಿಕೋದ್ಯಮದ ಉಗಮ, ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಗೌರವ ಸಲಹೆಗಾರರಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಮಾತನಾಡಿ ಇತಿಹಾಸ ಪ್ರಾಧ್ಯಾಪಕನಾಗಿರುವ ನಾನು ಪತ್ರಿಕೋದ್ಯಮದಲ್ಲಿ ಕಳೆದ 40 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. ಪತ್ರಕರ್ತನಾಗಿ ವೃತ್ತಿಯಿಂದ ರಿಟೈರ್ಡ್ ಆದರೂ ಪ್ರವೃತ್ತಿಯಿಂದ ರಿಟೈರ್ಡ್ ಆಗದ ಹಾಗೆ ಸೇವೆ ನೀಡುತ್ತಿದ್ದೇನೆ ಎಂದರು. ಪುತ್ತೂರಿನ ಪತ್ರಕರ್ತರ ಸಂಘಕ್ಕೆ ನಿಜಕ್ಕೂ ಜೀವ ಕೊಟ್ಟವರು ಸುದ್ದಿ ಬಿಡುಗಡೆ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದರು. ದಶಕಗಳ ಹಿಂದೆಯೇ ಶಿವಾನಂದರು ಪುತ್ತೂರಿನ ಪತ್ರಕರ್ತರ ಸಂಘದ ಒಡಬಾಡಿ ಆಗಿದ್ದರು ಎಂದು ಹೇಳಿದ ಅರ್ತಿಕಜೆ ಅವರು ವರದಿಗಾರರು ಮಾಡುವ ಲೇಖನ, ವರದಿಗಳು ಓದುಗರ ಮನ ಮುಟ್ಟಬೇಕಾಗಿದೆ ಎಂದು ಹೇಳಿ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದರವರು ಪ್ರೊ.ವಿ.ಬಿ ಆರ್ತಿಕಜೆರವರನ್ನು ಸನ್ಮಾನಿಸಿ ಮಾತನಾಡಿ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿಯ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 40 ವರ್ಷಗಳಿಂದ ಬರೆಯುತ್ತಿದ್ದೇನೆ. ಸನ್ಮಾನಿತ ಪ್ರೊ.ಅರ್ತಿಕಜೆರವರು ಕೂಡ ಪತ್ರಿಕಾ ಜೀವನದಲ್ಲಿ 40 ವರ್ಷದ ಅನುಭವವನ್ನು ಹೊಂದಿರುವುದು ಕಾಕತಾಳೀಯ. ಓರ್ವ ವೈದ್ಯನಾಗಿದ್ದ ನಾನು ಭ್ರಷ್ಟಾಚಾರದ ವಿರುದ್ಧ 40 ವರ್ಷದ ಹಿಂದೆಯೇ ಹೋರಾಟ ನಡೆಸಿ ಪತ್ರಿಕೆ ಆರಂಭಿಸಿ ಈಗಲೂ ಹೋರಾಟ ಮಾಡುತ್ತಿದ್ದೇನೆ ಎಂದರು. ಸಮಾಜದಲ್ಲಿ ಎಲ್ಲರಿಗೂ ಒಂದು ದಿನಾಚರಣೆ ಇದ್ದ ಹಾಗೆ ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನದಂದು ಲಂಚ, ಭ್ರಷ್ಟಾಚಾರ ಮುಕ್ತ ದಿನವನ್ನಾಗಿ ಆಚರಣೆ ಮಾಡಬೇಕು ಎನ್ನುವ ಘೋಷಣೆ ಹೊರಡಿಸಬೇಕು ಎಂದು ಹೇಳಿದ ಡಾ. ಶಿವಾನಂದ ಅವರು ವೇದಿಕೆಯಲ್ಲಿದ್ದ ಅತಿಥಿಗಳಿಗೆ ಲಂಚ, ಭ್ರಷ್ಟಾಚಾರದ ವಿರುದ್ಧದ ಜನಜಾಗೃತಿಯ ಫಲಕವನ್ನು ನೀಡಿದರು‌. ಮಳೆ ಕೊಯ್ಲು ಕುರಿತು ಜನಜಾಗೃತಿ ಮೂಡಿಸುತ್ತಿರುವ ಕುರಿತು ಮಾಹಿತಿ ನೀಡಿದ ಅವರು ಅಗ್ನಿ ಅನಾಹುತ ತಪ್ಪಿಸುವ ಬಗ್ಗೆ ನಡೆಸಲಾಗುತ್ತಿರುವ ಜನಜಾಗೃತಿ ಕುರಿತೂ ಮಾಹಿತಿ ನೀಡಿದರು.

ಉಪನ್ಯಾಸ ನೀಡಿದ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಆಶಾಲತಾ ಪಿ.ರವರು ಭಾರತೀಯ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೆ ತನ್ನ ಹಕ್ಕನ್ನು ಮಂಡಿಸುವ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಕ ಜನರ ಧ್ವನಿಯನ್ನು ಸಮಾಜಕ್ಕೆ ತಿಳಿಸುವ ಉದ್ಧೇಶವಿರಬೇಕು. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಪತ್ರಗಾರಿಕೆ ಇರಬಾರದು. ಪತ್ರಿಕಾಂಗ ಸಂವಿಧಾನದ ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿದ್ದು ಶೋಷಣೆಮುಕ್ತ, ದೌರ್ಜನ್ಯಮುಕ್ತ ಸಮಾಜ ನಿರ್ಮಿಸಲು ಸೌಹಾರ್ದಯುತವಾಗಿ, ಭ್ರಾತೃತ್ವದ ಜವಾಬ್ದಾರಿಯನ್ನು ಪತ್ರಕರ್ತರು ವಹಿಸಿಕೊಳ್ಳಬೇಕು. ಜನಧ್ವನಿಯಾಗಿ ದಿನದ ಇಪ್ಪತ್ನಾಲ್ಕು ಗಂಟೆಯೂ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದು ಅವರ ಕಾರ್ಯವೈಖರಿ ಶ್ಲಾಘನೀಯ ಎಂದರು.

ಪುತ್ತೂರು ಕಹಳೆ ನ್ಯೂಸ್ ಚಾನೆಲ್ ಮುಖ್ಯಸ್ಥ ಶ್ಯಾಮ್ ಸುದರ್ಶನ್ ಭಟ್ ಹೊಸಮೂಲೆ ಮಾತನಾಡಿ, ಪತ್ರಿಕೋದ್ಯಮದಲ್ಲಿ ಸಕರಾತ್ಮಕ ಹಾಗೂ ನಕಾರಾತ್ಮಕ ಹೀಗೆ ಎರಡು ಆಯಾಮಗಳಿದ್ದು ಇದು ಓದುಗನ ಮಾನಸಿಕತ್ವದ ಮೇಲೆ ನಿಂತಿದೆ. ಸಕರಾತ್ಮಕ ವರದಿಗಳಿಗೆ ಓದುಗರ ಸಂಖ್ಯೆ ಕಡಿಮೆ, ಆದರೆ ನಕಾರಾತ್ಮಕ ವರದಿಗಳಿಗೆ ಓದುಗರ ಸಂಖ್ಯೆ ಅಧಿಕವಾಗಿರುವುದು ಇತ್ತೀಚೆಗಿನ ವಿದ್ಯಮಾನದಲ್ಲಿ ಕಾಣ ಸಿಗುತ್ತದೆ. ಕೆಲವೊಮ್ಮೆ ನಿಷ್ಠುರ, ಪ್ರಖರ, ನಿಖರವಾದ ವರದಿಗಳನ್ನು ಹಾಕಿ ಸ್ಟೇಷನ್ ಮೆಟ್ಟಿಲು ಹತ್ತಿದ್ದೂ ಇದೆ. ಉದಯೋನ್ಮುಖ ಪತ್ರಕರ್ತರು ವರದಿಗೆ ತೆರಳಿದಾಗ ಅಲ್ಲಿನ ಪ್ರತಿಯೋರ್ವರ ಭಾಷಣಗಳನ್ನು ಇಷ್ಟಪಟ್ಟು ಕೇಳುವಂತರಾಗಬೇಕು. ಪುತ್ತೂರಿನಲ್ಲಿ ಪತ್ರಕರ್ತರ ನಡುವೆ ಭಿನ್ನಾಭಿಪ್ರಾಯಗಳಿದ್ದು ಇದನ್ನು ದೂರ ಮಾಡಲು ಈ ಯೂನಿಯನ್ ಪ್ರಯತ್ನಿಸಬೇಕು ಎಂದರು.

ನೆಹರೂನಗರ ವಿವೇಕಾನಂದ ಕಾಲೇಜಿನ ಸಂಚಾಲಕರಾದ ನ್ಯಾಯವಾದಿ ಮುರಳೀಕೃಷ್ಣ ಕೆ.ಎನ್. ಮಾತನಾಡಿ ಪತ್ರಿಕಾ ದಿನಾಚರಣೆ ಸಂದರ್ಭ ಆದರ್ಶ ವ್ಯಕ್ತಿಗೆ ಸನ್ಮಾನ ಮಾಡಿರುವುದು ಶ್ಲಾಘನೀಯ. ಯಾವುದೇ ವರದಿಯನ್ನು ಮಾಡುವಾಗ ಅದು ನಿಖರವಾಗಿರಬೇಕು, ಸತ್ಯವಾಗಿರಬೇಕು, ಪರಾಮರ್ಶೆ ಮಾಡುವಂತಿರಬೇಕು. ಸತ್ಯಶೋಧಕರಾಗಿ ಪತ್ರಕರ್ತರು ಕೆಲಸ ಮಾಡಬೇಕು. ಯುವ ಪತ್ರಕರ್ತರು ಸಾಹಿತ್ಯವನ್ನು ಓದುವ ಪರಿಪಾಠ ಬೆಳೆಸಬೇಕು. ಯಾವುದೇ ಬರಹ, ಲೇಖನ ಓದುಗರಿಗೆ ತಲುಪಬೇಕಾದರೆ ಅಲ್ಲಿ ಉತ್ತಮ ಸಾಹಿತ್ಯದ ಅಗತ್ಯವಿದೆ. ಮಾಧ್ಯಮಗಳು ಸಮಾಜಕ್ಕೆ ದೃಷ್ಠಿ ಕೊಡುವ ಮಾಧ್ಯಮಗಳಾಗಬೇಕು ಎಂದರು.

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ವೇದವ್ಯಾಸ ರಾಮಕುಂಜ ಹಾಗೂ ಕಾರ್ಯಾಗಾರಕ್ಕೆ ಸಹಕಾರ ನೀಡಿದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ನಿಡ್ಪಳ್ಳಿರವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ತಾಲೂಕು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕಾರಿಣಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಪೆರುವಾಯಿ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ ಸ್ವಾಗತಿಸಿ ಉಪಾಧ್ಯಕ್ಷೆ ಕವಿತಾ ಮಾಣಿ ವಂದಿಸಿದರು. ಉಪಾಧ್ಯಕ್ಷೆ ಚೈತ್ರಾ ಭೂಷಣ್ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷೆ ಹೇಮಾ ಜಯರಾಂ ಕಾರ್ಯಕ್ರಮ ನಿರೂಪಿಸಿದರು. ಯೂನಿಯನ್ ಜತೆ ಕಾರ್ಯದರ್ಶಿ ಚಿನ್ಮಯಕೃಷ್ಣ, ಕೋಶಾಧಿಕಾರಿ ಪ್ರಜ್ವಲ್ ಕೋಟ್ಯಾನ್, ಕಾರ್ಯಕಾರಿಣಿ ಸದಸ್ಯರಾದ ಜ್ಯೋತಿಪ್ರಕಾಶ್ ಪುಣಚ, ಆದಿತ್ಯ ಈಶ್ವರಮಂಗಲ, ಚಂದ್ರಕಾಂತ್ ಉರ್ಲಾಂಡಿ, ದೀಪಕ್ ಹೊಸ್ಮಠ, ಪ್ರಶಾಂತ್ ಸಿ.ಎಚ್., ಜಯಪ್ರಕಾಶ್ ಬದಿನಾರು, ಜಗದೀಶ್ ಕಜೆ, ಶಶಿಧರ ನೆಕ್ಕಿಲಾಡಿ, ಸುಭಾಶ್ಚಂದ್ರ S, ಗುಣಕರ ಏಕ, ಮನ್ಮಥ ಶೆಟ್ಟಿ, ಪ್ರಭಾಕರ ವಿಟ್ಲ, ರಾಜೇಶ್ ವಿಟ್ಲ, ರಕ್ಷಿತಾ ಮತ್ತಿತರರು ಸಹಕರಿಸಿದರು.

SendShare9Share
Previous Post

ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..