• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

July 28, 2024

ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

July 14, 2025

ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ಕೆ. ಆಯ್ಕೆ

July 14, 2025
ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

July 14, 2025
KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

July 14, 2025
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

July 13, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

July 12, 2025
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

July 11, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

July 11, 2025
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

July 11, 2025
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

July 11, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

by ಪ್ರಜಾಧ್ವನಿ ನ್ಯೂಸ್
July 28, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ
22
SHARES
63
VIEWS
ShareShareShare

ಪುತ್ತೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ. ಸುಳ್ಳು ಸುದ್ದಿಗಳನ್ನು ಹಾಕಿದಾಗ ಸಮಾಜದ ಹಾಗೂ ಕುಟುಂಬದ ಮೇಲೆ ಬಹಳ ಪ್ರಭಾವ ಬೀರುತ್ತದೆ. ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಜು.27ರಂದು ನಡೆದ ಪತ್ರಿಕಾ ದಿನಾಚರಣೆ-ಉಪನ್ಯಾಸ-ಸನ್ಮಾನ ಸಮಾರಂಭವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಎಂಬ ಮೂರು ಅಂಗಗಳಿದ್ದು ಇವು ಮೂರು ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಅವುಗಳನ್ನು ಎಚ್ಚರಿಸುವ ನಾಲ್ಕನೇ ಅಂಗವಾಗಿ ಪತ್ರಿಕಾಂಗ ಕಾರ್ಯ ನಿರ್ವಹಿಸುತ್ತದೆ. ಪೆನ್ನು ಕತ್ತಿಗಿಂತ ಶಕ್ತಿಶಾಲಿಯಾಗಿದೆ. ಆದರೆ ಅದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸಬಾರದು. ಪತ್ರಕರ್ತರು ಎಥಿಕ್ಸ್‌ನೊಂದಿಗೆ ಜವಾಬ್ದಾರಿ ವಹಿಸಿಕೊಂಡು ಕರ್ತವ್ಯ ನಿರ್ವಹಿಸುವವರಾಗಬೇಕು ಎಂದು ಹೇಳಿದ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಾಲಗಂಗಾಧರ್ ತಿಲಕ್, ಭಗತ್ ಸಿಂಗ್‌ರವರೂ ಆ ಕಾಲದಲ್ಲಿ ಸ್ವಾತಂತ್ರ್ಯದ ಹೋರಾಟದೊಂದಿಗೆ ಪತ್ರಕರ್ತರಾಗಿ ದುಡಿದವರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮಾತನಾಡಿ, ವರದಿಗಾರಿಕೆಗೆ ಸಂಬಂಧಪಟ್ಟಂತೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನೆರವು ನೀಡಲು ಸುದ್ದಿ ಬಿಡುಗಡ, ಕಹಳೆ, ವಿಟಿವಿ ಸಂಸ್ಥೆ ಸದಾ ಸಿದ್ಧವಿದೆ ಎಂದು ತಿಳಿಸಿದರು. ನಮ್ಮ ಯೂನಿಯನ್‌ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ ಅವರು ನಮ್ಮ ಸಂಘದಲ್ಲಿ ವಿವಿಧ ಪತ್ರಿಕೆ, ಟಿ.ವಿ. ಮತ್ತು ವೆಬ್ ಮಾಧ್ಯಮದ ವರದಿಗಾರರು ಸದಸ್ಯರಾಗಿದ್ದಾರೆ. ಈ ಸದಸ್ಯರಿಗೆ ಕಾರ್ಯ ನಿರ್ವಹಿಸಲು ಸ್ಥಳದ ಅವಶ್ಯಕತೆ ಇದೆ. ಹಾಗಾಗಿ ಪತ್ರಿಕಾ ಭವನದಲ್ಲಿ ನಮ್ಮ ಯೂನಿಯನ್ ಸದಸ್ಯರಿಗೆ ಮಾತ್ರವಲ್ಲದೆ ಎಲ್ಲಾ ಪತ್ರಕರ್ತರ ಸಂಘದವರಿಗೂ ಸಮಾನ ಅವಕಾಶ ಸಿಗುವಂತಾಗಬೇಕಿದೆ ಎಂದರು. ನಮ್ಮ ಸದಸ್ಯರಿಗೆ ಸರಕಾರದ ಸವಲತ್ತು ಮತ್ತು ಇನ್ಸೂರೆನ್ಸ್ ವ್ಯವಸ್ಥೆ ಸಿಗುವಂತೆ ಮಾಡಲು ಪ್ರಯತ್ನ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸಲಿದ್ದೇವೆ ಎಂದು ಅವರು ತಿಳಿಸಿದರು.

ದ.ಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡು ಮಾತನಾಡಿ ನಕಾರಾತ್ಮಕ ಲೇಖನಗಳನ್ನು ಓದುಗರು ಓದುವುದು ಕಡಿಮೆ ಮಾಡಿದಾಗ ಮತ್ತು ಸಕರಾತ್ಮಕ ಲೇಖನಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಸಮಾಜದ ಸ್ವಾಸ್ಥ್ಯ ಉಳಿಯುತ್ತದೆ ಎಂದರು. ಪುತ್ತೂರು ವ್ಯಾಪ್ತಿಗೆ ಸಂಬಂಧಪಟ್ಟ ಹಾಗೆ ತುಳುವಿನಲ್ಲಿ ಒಳ್ಳೆಯ ಡಾಕ್ಯುಮೆಂಟರಿ ಮಾಡುವವರಿಗೆ, ಪುಸ್ತಕ ಪ್ರಕಟಿಸುವವರಿಗೆ ತುಳು ಸಾಹಿತ್ಯ ಅಕಾಡೆಮಿ ಫೆಲೋಶಿಪ್ ನಗದು ನೀಡುತ್ತದೆ ಎಂದು ಹೇಳಿದ ಅವರು ಪತ್ರಿಕೋದ್ಯಮದ ಉಗಮ, ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಗೌರವ ಸಲಹೆಗಾರರಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಮಾತನಾಡಿ ಇತಿಹಾಸ ಪ್ರಾಧ್ಯಾಪಕನಾಗಿರುವ ನಾನು ಪತ್ರಿಕೋದ್ಯಮದಲ್ಲಿ ಕಳೆದ 40 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. ಪತ್ರಕರ್ತನಾಗಿ ವೃತ್ತಿಯಿಂದ ರಿಟೈರ್ಡ್ ಆದರೂ ಪ್ರವೃತ್ತಿಯಿಂದ ರಿಟೈರ್ಡ್ ಆಗದ ಹಾಗೆ ಸೇವೆ ನೀಡುತ್ತಿದ್ದೇನೆ ಎಂದರು. ಪುತ್ತೂರಿನ ಪತ್ರಕರ್ತರ ಸಂಘಕ್ಕೆ ನಿಜಕ್ಕೂ ಜೀವ ಕೊಟ್ಟವರು ಸುದ್ದಿ ಬಿಡುಗಡೆ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದರು. ದಶಕಗಳ ಹಿಂದೆಯೇ ಶಿವಾನಂದರು ಪುತ್ತೂರಿನ ಪತ್ರಕರ್ತರ ಸಂಘದ ಒಡಬಾಡಿ ಆಗಿದ್ದರು ಎಂದು ಹೇಳಿದ ಅರ್ತಿಕಜೆ ಅವರು ವರದಿಗಾರರು ಮಾಡುವ ಲೇಖನ, ವರದಿಗಳು ಓದುಗರ ಮನ ಮುಟ್ಟಬೇಕಾಗಿದೆ ಎಂದು ಹೇಳಿ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದರವರು ಪ್ರೊ.ವಿ.ಬಿ ಆರ್ತಿಕಜೆರವರನ್ನು ಸನ್ಮಾನಿಸಿ ಮಾತನಾಡಿ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿಯ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 40 ವರ್ಷಗಳಿಂದ ಬರೆಯುತ್ತಿದ್ದೇನೆ. ಸನ್ಮಾನಿತ ಪ್ರೊ.ಅರ್ತಿಕಜೆರವರು ಕೂಡ ಪತ್ರಿಕಾ ಜೀವನದಲ್ಲಿ 40 ವರ್ಷದ ಅನುಭವವನ್ನು ಹೊಂದಿರುವುದು ಕಾಕತಾಳೀಯ. ಓರ್ವ ವೈದ್ಯನಾಗಿದ್ದ ನಾನು ಭ್ರಷ್ಟಾಚಾರದ ವಿರುದ್ಧ 40 ವರ್ಷದ ಹಿಂದೆಯೇ ಹೋರಾಟ ನಡೆಸಿ ಪತ್ರಿಕೆ ಆರಂಭಿಸಿ ಈಗಲೂ ಹೋರಾಟ ಮಾಡುತ್ತಿದ್ದೇನೆ ಎಂದರು. ಸಮಾಜದಲ್ಲಿ ಎಲ್ಲರಿಗೂ ಒಂದು ದಿನಾಚರಣೆ ಇದ್ದ ಹಾಗೆ ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನದಂದು ಲಂಚ, ಭ್ರಷ್ಟಾಚಾರ ಮುಕ್ತ ದಿನವನ್ನಾಗಿ ಆಚರಣೆ ಮಾಡಬೇಕು ಎನ್ನುವ ಘೋಷಣೆ ಹೊರಡಿಸಬೇಕು ಎಂದು ಹೇಳಿದ ಡಾ. ಶಿವಾನಂದ ಅವರು ವೇದಿಕೆಯಲ್ಲಿದ್ದ ಅತಿಥಿಗಳಿಗೆ ಲಂಚ, ಭ್ರಷ್ಟಾಚಾರದ ವಿರುದ್ಧದ ಜನಜಾಗೃತಿಯ ಫಲಕವನ್ನು ನೀಡಿದರು‌. ಮಳೆ ಕೊಯ್ಲು ಕುರಿತು ಜನಜಾಗೃತಿ ಮೂಡಿಸುತ್ತಿರುವ ಕುರಿತು ಮಾಹಿತಿ ನೀಡಿದ ಅವರು ಅಗ್ನಿ ಅನಾಹುತ ತಪ್ಪಿಸುವ ಬಗ್ಗೆ ನಡೆಸಲಾಗುತ್ತಿರುವ ಜನಜಾಗೃತಿ ಕುರಿತೂ ಮಾಹಿತಿ ನೀಡಿದರು.

ಉಪನ್ಯಾಸ ನೀಡಿದ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಆಶಾಲತಾ ಪಿ.ರವರು ಭಾರತೀಯ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೆ ತನ್ನ ಹಕ್ಕನ್ನು ಮಂಡಿಸುವ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಕ ಜನರ ಧ್ವನಿಯನ್ನು ಸಮಾಜಕ್ಕೆ ತಿಳಿಸುವ ಉದ್ಧೇಶವಿರಬೇಕು. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಪತ್ರಗಾರಿಕೆ ಇರಬಾರದು. ಪತ್ರಿಕಾಂಗ ಸಂವಿಧಾನದ ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿದ್ದು ಶೋಷಣೆಮುಕ್ತ, ದೌರ್ಜನ್ಯಮುಕ್ತ ಸಮಾಜ ನಿರ್ಮಿಸಲು ಸೌಹಾರ್ದಯುತವಾಗಿ, ಭ್ರಾತೃತ್ವದ ಜವಾಬ್ದಾರಿಯನ್ನು ಪತ್ರಕರ್ತರು ವಹಿಸಿಕೊಳ್ಳಬೇಕು. ಜನಧ್ವನಿಯಾಗಿ ದಿನದ ಇಪ್ಪತ್ನಾಲ್ಕು ಗಂಟೆಯೂ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದು ಅವರ ಕಾರ್ಯವೈಖರಿ ಶ್ಲಾಘನೀಯ ಎಂದರು.

ಪುತ್ತೂರು ಕಹಳೆ ನ್ಯೂಸ್ ಚಾನೆಲ್ ಮುಖ್ಯಸ್ಥ ಶ್ಯಾಮ್ ಸುದರ್ಶನ್ ಭಟ್ ಹೊಸಮೂಲೆ ಮಾತನಾಡಿ, ಪತ್ರಿಕೋದ್ಯಮದಲ್ಲಿ ಸಕರಾತ್ಮಕ ಹಾಗೂ ನಕಾರಾತ್ಮಕ ಹೀಗೆ ಎರಡು ಆಯಾಮಗಳಿದ್ದು ಇದು ಓದುಗನ ಮಾನಸಿಕತ್ವದ ಮೇಲೆ ನಿಂತಿದೆ. ಸಕರಾತ್ಮಕ ವರದಿಗಳಿಗೆ ಓದುಗರ ಸಂಖ್ಯೆ ಕಡಿಮೆ, ಆದರೆ ನಕಾರಾತ್ಮಕ ವರದಿಗಳಿಗೆ ಓದುಗರ ಸಂಖ್ಯೆ ಅಧಿಕವಾಗಿರುವುದು ಇತ್ತೀಚೆಗಿನ ವಿದ್ಯಮಾನದಲ್ಲಿ ಕಾಣ ಸಿಗುತ್ತದೆ. ಕೆಲವೊಮ್ಮೆ ನಿಷ್ಠುರ, ಪ್ರಖರ, ನಿಖರವಾದ ವರದಿಗಳನ್ನು ಹಾಕಿ ಸ್ಟೇಷನ್ ಮೆಟ್ಟಿಲು ಹತ್ತಿದ್ದೂ ಇದೆ. ಉದಯೋನ್ಮುಖ ಪತ್ರಕರ್ತರು ವರದಿಗೆ ತೆರಳಿದಾಗ ಅಲ್ಲಿನ ಪ್ರತಿಯೋರ್ವರ ಭಾಷಣಗಳನ್ನು ಇಷ್ಟಪಟ್ಟು ಕೇಳುವಂತರಾಗಬೇಕು. ಪುತ್ತೂರಿನಲ್ಲಿ ಪತ್ರಕರ್ತರ ನಡುವೆ ಭಿನ್ನಾಭಿಪ್ರಾಯಗಳಿದ್ದು ಇದನ್ನು ದೂರ ಮಾಡಲು ಈ ಯೂನಿಯನ್ ಪ್ರಯತ್ನಿಸಬೇಕು ಎಂದರು.

ನೆಹರೂನಗರ ವಿವೇಕಾನಂದ ಕಾಲೇಜಿನ ಸಂಚಾಲಕರಾದ ನ್ಯಾಯವಾದಿ ಮುರಳೀಕೃಷ್ಣ ಕೆ.ಎನ್. ಮಾತನಾಡಿ ಪತ್ರಿಕಾ ದಿನಾಚರಣೆ ಸಂದರ್ಭ ಆದರ್ಶ ವ್ಯಕ್ತಿಗೆ ಸನ್ಮಾನ ಮಾಡಿರುವುದು ಶ್ಲಾಘನೀಯ. ಯಾವುದೇ ವರದಿಯನ್ನು ಮಾಡುವಾಗ ಅದು ನಿಖರವಾಗಿರಬೇಕು, ಸತ್ಯವಾಗಿರಬೇಕು, ಪರಾಮರ್ಶೆ ಮಾಡುವಂತಿರಬೇಕು. ಸತ್ಯಶೋಧಕರಾಗಿ ಪತ್ರಕರ್ತರು ಕೆಲಸ ಮಾಡಬೇಕು. ಯುವ ಪತ್ರಕರ್ತರು ಸಾಹಿತ್ಯವನ್ನು ಓದುವ ಪರಿಪಾಠ ಬೆಳೆಸಬೇಕು. ಯಾವುದೇ ಬರಹ, ಲೇಖನ ಓದುಗರಿಗೆ ತಲುಪಬೇಕಾದರೆ ಅಲ್ಲಿ ಉತ್ತಮ ಸಾಹಿತ್ಯದ ಅಗತ್ಯವಿದೆ. ಮಾಧ್ಯಮಗಳು ಸಮಾಜಕ್ಕೆ ದೃಷ್ಠಿ ಕೊಡುವ ಮಾಧ್ಯಮಗಳಾಗಬೇಕು ಎಂದರು.

DHKSHIN 8792898692

ಜಾಹೀರಾತು

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ವೇದವ್ಯಾಸ ರಾಮಕುಂಜ ಹಾಗೂ ಕಾರ್ಯಾಗಾರಕ್ಕೆ ಸಹಕಾರ ನೀಡಿದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ನಿಡ್ಪಳ್ಳಿರವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ತಾಲೂಕು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕಾರಿಣಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಪೆರುವಾಯಿ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ ಸ್ವಾಗತಿಸಿ ಉಪಾಧ್ಯಕ್ಷೆ ಕವಿತಾ ಮಾಣಿ ವಂದಿಸಿದರು. ಉಪಾಧ್ಯಕ್ಷೆ ಚೈತ್ರಾ ಭೂಷಣ್ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷೆ ಹೇಮಾ ಜಯರಾಂ ಕಾರ್ಯಕ್ರಮ ನಿರೂಪಿಸಿದರು. ಯೂನಿಯನ್ ಜತೆ ಕಾರ್ಯದರ್ಶಿ ಚಿನ್ಮಯಕೃಷ್ಣ, ಕೋಶಾಧಿಕಾರಿ ಪ್ರಜ್ವಲ್ ಕೋಟ್ಯಾನ್, ಕಾರ್ಯಕಾರಿಣಿ ಸದಸ್ಯರಾದ ಜ್ಯೋತಿಪ್ರಕಾಶ್ ಪುಣಚ, ಆದಿತ್ಯ ಈಶ್ವರಮಂಗಲ, ಚಂದ್ರಕಾಂತ್ ಉರ್ಲಾಂಡಿ, ದೀಪಕ್ ಹೊಸ್ಮಠ, ಪ್ರಶಾಂತ್ ಸಿ.ಎಚ್., ಜಯಪ್ರಕಾಶ್ ಬದಿನಾರು, ಜಗದೀಶ್ ಕಜೆ, ಶಶಿಧರ ನೆಕ್ಕಿಲಾಡಿ, ಸುಭಾಶ್ಚಂದ್ರ S, ಗುಣಕರ ಏಕ, ಮನ್ಮಥ ಶೆಟ್ಟಿ, ಪ್ರಭಾಕರ ವಿಟ್ಲ, ರಾಜೇಶ್ ವಿಟ್ಲ, ರಕ್ಷಿತಾ ಮತ್ತಿತರರು ಸಹಕರಿಸಿದರು.

SendShare9Share
Previous Post

ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..