• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು ವಿವೇಕಾನಂದ ಶಿಶು ಮಂದಿರದಲ್ಲಿ 26ನೇ ವರ್ಷದ ‘ಶ್ರೀಕೃಷ್ಣಲೋಕ’ದ ಸಂಭ್ರಮ : 1,500ಕ್ಕೂ ಅಧಿಕ ಮಂದಿ ರಾಧೆ-ಕೃಷ್ಣ ವೇಷದಾರಿ ಪುಟಾಣಿಗಳು ನಿರೀಕ್ಷೆ

August 23, 2024
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

November 22, 2025
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

November 22, 2025
ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

November 22, 2025
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

November 22, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

November 22, 2025
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ವಿವೇಕಾನಂದ ಶಿಶು ಮಂದಿರದಲ್ಲಿ 26ನೇ ವರ್ಷದ ‘ಶ್ರೀಕೃಷ್ಣಲೋಕ’ದ ಸಂಭ್ರಮ : 1,500ಕ್ಕೂ ಅಧಿಕ ಮಂದಿ ರಾಧೆ-ಕೃಷ್ಣ ವೇಷದಾರಿ ಪುಟಾಣಿಗಳು ನಿರೀಕ್ಷೆ

by ಪ್ರಜಾಧ್ವನಿ ನ್ಯೂಸ್
August 23, 2024
in ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
4
SHARES
11
VIEWS
ShareShareShare

ಪುತ್ತೂರು: ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯುವ 26ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮವು ಆ.26ರಂದು ನಡೆಯಲಿದೆ ಎಂದು ಕೃಷ್ಣಲೋಕ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಹೇಳಿದರು.

ಆ.23ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ವಿವೇಕಾನಂದ ಶಿಶು ಮಂದಿರದಲ್ಲಿ ಕಳೆದ 25 ವರ್ಷಗಳಿಂದ ಶ್ರೀಕೃಷ್ಣಲೋಕ ಕಾರ್ಯಕ್ರಮದ ಮೂಲಕ ಸಾವಿರಾರು ಮಂದಿ ರಾಧೆ, ಕೃಷ್ಣ, ಯಶೋಧೆ ವೇಷಧಾರಿ ಮಕ್ಕಳೊಂದಿಗೆ ವಿಶೇಷ ಶೋಭಾಯಾತ್ರೆಯ ಮೂಲಕ ಅದ್ದೂರಿಯಾಗಿ ನಡೆಯುತ್ತಾ ಬಂದಿರುತ್ತದೆ. ಈ ವರ್ಷವೂ ಅದ್ದೂರಿಯಾಗಿ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಸಂಭ್ರಮಿಸಲಿದೆ ಎಂದರು.

ಬೆಳಿಗ್ಗೆ ಶಿಶು ಮಂದಿರದ ಆವರಣದಲ್ಲಿ ಕೃಷ್ಣ, ರಾಧೆ, ಯಶೋಧೆಯರ ನೋಂದಾವಣೆಯು ಪ್ರಾರಂಭಗೊಳ್ಳಲಿದೆ. ನಂತರ ಮಕ್ಕಳಿಂದ ಪ್ರಾರ್ಥನೆ, ಭಜನೆಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಬಳಿಕ ತೊಟ್ಟಿಲ ಸಂಭ್ರಮದಲ್ಲಿ ಮಗುವಿನ ಅಮ್ಮನಿಗೆ ಆರತಿ ಬೆಳಗಿ ಬಾಗಿನ ನೀಡಲಾಗುವುದು. ನಂತರ ಆರು ತಿಂಗಳ ಮಗುವನ್ನು ತೊಟ್ಟಿಲಲ್ಲಿ ತೂಗುವ ಸಂಭ್ರಮವು ನಡೆಯಲಿದೆ. ಮಾತೆಯರು ಬಾಲಕೃಷ್ಣನಿಗೆ ಬೆಣ್ಣೆ ತಿನ್ನಿಸಿ, ಜೋಗುಳ ಹಾಡಲಿದ್ದಾರೆ.

ಪ್ರತಿ ವರ್ಷದಂತೆ ಶಿಶು ಮಂದಿರದ ಆವರಣದಿಂದ ರಾಧೆ-ಕೃಷ್ಣ ಭವ್ಯ ಶೋಭಾಯಾತ್ರೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದೆ. ಶೋಭಾಯಾತ್ರೆಯು ಪರ್ಲಡ್ಕ ಶಿವಪೇಟೆ ವಿವೇಕಾನಂದ ಶಿಶು ಮಂದಿರದ ಬಳಿಯಿಂದ ಹೊರಟು ಮಹಮ್ಮಾಯಿ ದೇವಸ್ಥಾನ ರಸ್ತೆಯಾಗಿ, ಮುಖ್ಯರಸ್ತೆಯ ಮೂಲಕ ಸಾಗಿ ಪ್ರಧಾನ ಅಂಚೆ ಕಚೇರಿ ಮುಂಭಾಗದಿಂದಾಗಿ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಮಾಪನಗೊಳ್ಳಲಿದೆ. ರಾಧೆ-ಕೃಷ್ಣರ ವೇಷಧಾರಿ ಸಾವಿರಾರು ಪುಟಾಣಿಗಳು ಶೋಭಾಯಾತ್ರೆಯಲ್ಲಿ ಮೆರುಗು ತರಲಿದೆ. ಪುಟಾಣಿಗಳ ತಾಯಂದಿರು ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸುವ ಮೂಲಕ ಸನಾತನ ಹಿಂದೂ ಧರ್ಮದ ಆಚರಣೆಯನ್ನು ಎತ್ತಿ ಹಿಡಿಯಲಿದೆ ಎಂದರು.

ಶೋಭಾಯಾತ್ರೆ ಸಂಪನ್ನಗೊಂಡ ಬಳಿಕ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಲಿದ್ದಾರೆ. ಬೆಳ್ಳಾರೆಯ ಉದ್ಯಮಿ ಜಿ.ಮಿಥುನ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ್ಲೇರಿ ಶ್ರೀ ಮಂತ್ರಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನ ಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಜಾಲ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮಣಿಪಾಲದ ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹ ಪ್ರಾಧ್ಯಾಪಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಸಂತೋಷ್ ಕುಮಾರ್ ತಿಳಿಸಿದರು.

ಈ ಬಾರಿಯ ಶ್ರೀಕೃಷ್ಣಲೋಕದಲ್ಲಿ ಸುಮಾರು 1500ಮಂದಿ ರಾಧೆ-ಕೃಷ್ಣ-ಯಶೋಧೆ ವೇಷಧಾರಿ ಮಕ್ಕಳು ಭಾಗವಹಿಸುವ ನಿರೀಕ್ಷೆಯಿದೆ. ಇದು ಸ್ಪರ್ಧೆಯಲ್ಲ. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು. 10 ವರ್ಷದ ಒಳಗಿನ ಮಕ್ಕಳು ಮುಕ್ತವಾಗಿ ಭಾಗವಹಿಸಬಹುದು. ಭಾಗವಹಿಸುವವರು ಶಿಶು ಮಂದಿರದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ದಾಮೋದರ ಪಾಟಾಳಿ ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಶ್ರೀಕೃಷ್ಣ ಲೋಕ ಸಮಿತಿಯ ಗೌರವಾಧ್ಯಕ್ಷ ರಾಜಿ ಬಲರಾಮ ಆಚಾರ್, ಶ್ರೀಕೃಷ್ಣ ಲೋಕ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ, ಹಾಗೂ ಪ್ರಧಾನ ಕಾರ್ಯದರ್ಶಿ ಮೇಘನಾ ಪಾಣಾಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

SendShare2Share
Previous Post

ಬೆಂಗಳೂರು: ಮೋದಿ ಸರಕಾರ ಮತ್ತು ಸಿದ್ದರಾಮಯ್ಯ ಸರಕಾರ ಪತನವಾಗಲಿದೆ ಅರ್ಚಕ ‌ನುಡಿದ ಆಘಾತಕಾರಿ ಭವಿಷ್ಯ

Next Post

ಕಾಂಗ್ರೆಸ್ ಪಕ್ಷದ ನೈಜ ಮುಖವಾಡವನ್ನು ಕಳಚಿದೆ ಎಸ್.ಡಿ.ಪಿ.ಐಯ ತೆರೆಮರೆ ಸಖ್ಯ ಹೊರಜಗತ್ತಿಗೆ ಸ್ಪಷ್ಟವಾಗಿದೆ – ಕಟೀಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂಗ್ರೆಸ್ ಪಕ್ಷದ ನೈಜ ಮುಖವಾಡವನ್ನು ಕಳಚಿದೆ ಎಸ್.ಡಿ.ಪಿ.ಐಯ ತೆರೆಮರೆ ಸಖ್ಯ ಹೊರಜಗತ್ತಿಗೆ ಸ್ಪಷ್ಟವಾಗಿದೆ –  ಕಟೀಲ್

ಕಾಂಗ್ರೆಸ್ ಪಕ್ಷದ ನೈಜ ಮುಖವಾಡವನ್ನು ಕಳಚಿದೆ ಎಸ್.ಡಿ.ಪಿ.ಐಯ ತೆರೆಮರೆ ಸಖ್ಯ ಹೊರಜಗತ್ತಿಗೆ ಸ್ಪಷ್ಟವಾಗಿದೆ – ಕಟೀಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..