• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

September 3, 2024
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

October 13, 2025
ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

October 11, 2025
ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

October 14, 2025
ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

October 11, 2025
ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

October 11, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

by ಪ್ರಜಾಧ್ವನಿ ನ್ಯೂಸ್
September 3, 2024
in ಈಶ್ವಮಂಗಲ, ಉಡುಪಿ, ಉಪ್ಪಿನಂಗಡಿ, ಉಳ್ಳಾಲ, ಕಡಬ, ಕಾಸರಗೋಡು, ಕುಂದಾಪುರ, ಕುಂಬ್ರ, ಜಿಲ್ಲೆ, ಜ್ಯೋತಿಷ್ಯ, ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಡಿಕೇರಿ, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ
41
SHARES
118
VIEWS
ShareShareShare

ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಅವರು ಮಾತನಾಡಿ ದೈವಾರಾಧನೆ ಎಂದು ನಂಬಿಕೆಯಾಗಿ ಉಳಿದಿಲ್ಲ ದಂಧೆಯಾಗಿದೆ. ತುಳುನಾಡಿನ ದೈವಗಳ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ಯಾವ ಸಮಾಜ ನಂಬಿಕೆ, ಕೌಟುಂಬಿಕ ಪದ್ಧತಿ, ಧಾರ್ಮಿಕ ಸಂಸ್ಕೃತಿ ಯ ಹಿರಿಮೆಯನ್ನು ದೈವರಾಧನೆಯ ಮೂಲಕ ಎತ್ತಿ ಹಿಡಿದಿತ್ತೋ ಇಂದು ಅದೇ ಸಮಾಜದಲ್ಲಿ ದೈವರಾಧನೆಯ ವ್ಯಾಪಾರಿಕರಣದಿಂದ ಹಲವಾರು ಕುಟುಂಬಗಳು ನಾಶವಾಗಿದೆ.

ದೈವಾರಾಧನೆ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ಹಿಂದೂ ಸಮಾಜ ಯೋಚಿಸಬೇಕು ಎಂದರು. ದೈವ ನಂಬಿಕೆಗಳು ಇಂದು ದುಡ್ಡು ಮಾಡುವ ಸಾಧನವಾಗಿದೆ. ದೈವಾರಾಧನೆ ಹೆಸರಿನಲ್ಲಿ ನಡೆಯುತ್ತಿರುವ ದಂಧೆ ನಿಲ್ಲದೆ ಹೋದಲ್ಲಿ ತುಳುನಾಡಿನ ಮೂಲ ನಂಬಿಕೆಗಳು ನಾಶವಾಗಲಿದೆ. ಪೊಸತ್ ತೋಡಡ, ಪರತ್ ನಿಗಿಪಡ ಎಂಬ ದೈವ ನುಡಿಯಂತೆ ನಾವು ಸಾಗಬೇಕಾಗಿದೆ. ದೈವಾರಾಧನೆಯ ಸಾಂಸ್ಕೃತೀಕರಣವನ್ನು ತಡೆಯಬೇಕು. ದೈವಗಳು ನಮ್ಮ ನಂಬಿಕೆಯ ಭಾಗವೇ ಹೊರತು ಮನೋರಂಜನಾ ಚಟುವಟಿಕೆಯಲ್ಲ. ಯಾವುದೇ ಒಂದು ವಸ್ತು ಅತಿಯಾದಲ್ಲಿ ವಿಷವಾಗುತ್ತದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ದೈವದ ಕೊಡಿಯಡಿಯಲ್ಲಿ ಫೋಟೋಗ್ರಫಿ, ವಿಡಿಯೋಗ್ರಫಿ ನಿಷೇಧಿಸಬೇಕು. ಪಡುಬಿದ್ರೆಯ ಬ್ರಹ್ಮ ಸ್ಥಾನದಲ್ಲಿ ಇಂದಿಗೂ ಫೋಟೋ, ವಿಡಿಯೋಗೆ ಅವಕಾಶ ಮಾಡಿಕೊಟ್ಟಿಲ್ಲ, ಏಕೆಂದರೆ ಇದು ಪೂರ್ವಕಾಲದ ಪದ್ಧತಿ. ಇದೇ ರೀತಿಯ ಕಟ್ಟುಕಟ್ಟಲೆ ತುಳುನಾಡಿನ ಎಲ್ಲಾ ದೈವಸ್ಥಾನಗಳಲ್ಲಿ ಬರಬೇಕು ಎಂದು ವಿನಂತಿಸಿದರು.

ನಾವು ಸಂಘಟನಾತ್ಮಕವಾಗಿ ಮುಂದುವರೆದು, ತುಳುನಾಡಿನ ಎಲ್ಲಾ ದೈವಸ್ಥಾನಗಳಿಗೆ ಭೇಟಿ ನೀಡಿ ಫೋಟೋ ವಿಡಿಯೋಗಳನ್ನು ತೆಗೆದರೆ ಯಾವ ರೀತಿಯ ಅಪಾಯ, ಅವಮಾನ, ದೈವ ನಿಂದನೆ ಆಗುತ್ತದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಬೇಕು ಎಂದು ಸಂಘಟನೆಗೆ ಸಲಹೆ ನೀಡಿದರು.

ಹಿರಿಯ ದೈವ ನರ್ತಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲೋಕಯ್ಯ ಸೇರಾ ಅವರು ಮಾತನಾಡಿ ದೈವಾರಾಧನೆ ಈಗ ಹಿಂದಿನಂತಿಲ್ಲ.‌ ಕಾಲ ಬದಲಾಗುತ್ತಿದ್ದಂತೆ ಈಗ ದೈವಾರಾಧನೆಯೂ ಬದಲಾಗುತ್ತಿದೆ. ಜನರಲ್ಲಿ ಈ ಹಿಂದೆ ಇದ್ದ ಭಯ ಭಕ್ತಿ ಈಗ ಮಾಯವಾಗಿದೆ. ಹಿರಿಯ ದೈವ ನರ್ತಕರಿಗೆ ಈ ಕಾಲದಲ್ಲಿ ಬೆಲೆಯಿಲ್ಲದಂತಾಗುತ್ತಿದೆ.

ನೇಮ ನಡೆಸುವವರು ನಿಯಮ ಬದ್ಧವಾದ ನೇಮಕ್ಕಿಂತ ಅಬ್ಬರದ ನೇಮ ಅಪೇಕ್ಷಿಸುತ್ತಿದ್ದಾರೆ, ಇದರಿಂದಾಗಿ ಯುವ ದೈವ ನರ್ತಕರು ಅನಿವಾರ್ಯವಾಗಿ ಬಣ್ಣಗಾರಿಕೆ, ಕುಣಿತ, ವೇಷಭೂಷಣ ಇಲ್ಲೆಲ್ಲಾ ಬದಲಾವಣೆ ತರುವಂತಾಗಿದೆ.

ನೇಮ ಒಪ್ಪಿಸುವ ಮನೆಯವರು, ಗುತ್ತಿನವರು ತಮ್ಮ ಮನೆಯ, ಊರಿನ ದೈವಗಳಿಗೆ ಹೀಗೆಯೇ ನೇಮ ನಡೆಯಬೇಕು ಎಂದು ಹೇಳಿದ್ದಲ್ಲಿ ದೈವ ಚಾಕಿರಿಯವರು ಅದೇ ರೀತಿ ಮಾಡುವ ಅನಿವಾರ್ಯತೆಗೆ ಸಿಲುಕುತ್ತಾರೆ, ಆಗ ಖಂಡಿತಾ ಬದಲಾವಣೆ ಸಾಧ್ಯವಿದೆ. ದೈವಗಳು ಕೊಡಿಯಡಿ ಬಿಟ್ಟು ಬೀದಿಬದಿ, ನಾಟಕ, ಸಿನೇಮಾದಲ್ಲಿ ಬರುತ್ತಿರುವುದು ಆತಂಕಕಾರಿ ಬೆಳವಣಿಗೆ.‌ ಇದನ್ನು ತಡೆಯಲು ದೈವ ನರ್ತಕ ಸಮುದಾಯ ನಿಮ್ಮ ಸಂಘಟನೆಗೆ ಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದರು.

ಮಧ್ಯಸ್ಥರಾದ ಮನ್ಮಥ ಶೆಟ್ಟಿ ಅವರು ಮಾತನಾಡಿ, ದೈವಾರಾಧನೆಯಲ್ಲಿ ಮಧ್ಯಸ್ಥನ ಪಾತ್ರ ಭಾರೀ ಪ್ರಮುಖವಾಗಿದೆ. ಇತ್ತೀಚೆಗೆ ಕೆಲವರು ದೈವಾರಾಧನೆಯಲ್ಲಿ ಮಧ್ಯಸ್ಥರು ಇತ್ತೀಚೆಗೆ ಸೇರ್ಪಡೆಗೊಂಡಿದ್ದಾರೆ ಎಂದು ವಾದಿಸುತ್ತಾರೆ. ಅದು ತಪ್ಪು ಮದಿಪು ಎನ್ನುವುದು ಆರಂಭದಿಂದಲೂ ಇತ್ತು. ಇಂದು ಮದಿಪುವವ ಎನ್ನುವ ಬದಲು ಮಧ್ಯಸ್ಥ ಎನ್ನುತ್ತಾರೆ.

ದೈವ ಕಲದಲ್ಲಿ ಮದಿಪು ಎನ್ನುವ ಪದಕ್ಕೆ ಭಾರೀ ಶಕ್ತಿಯಿದೆ. ಆದರೆ ಇಂದಿನ ಯುವ ಪೀಳಿಗೆ ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಯೂಟ್ಯೂಬ್ ನೋಡಿ ಬಾಯಿಪಾಠ ಮಾಡಿಯೋ, ಪುಸ್ತಕದಿಂದ ಕಂಠಪಾಠ ಮಾಡಿಕೊಂಡು ಬಂದು ದೈವ ಕಲದಲ್ಲಿ ಮ್ಯಾಚಿಂಗ್ ವಸ್ತ್ರ ಧರಿಸಿ ನಿರರ್ಗಳವಾಗಿ ಏಳೆಂಟು ನಿಮಿಷ ಕಥೆ ಹೇಳುತ್ತಾರೆ.

ಇದು ತಪ್ಪು, ದೈವದ ಕಟ್ಟುಕಟ್ಟಳೆ, ಹಿನ್ನಲೆ, ವಿವಿಧ ಹಂತಗಳನ್ನು ತಿಳಿದುಕೊಳ್ಳದೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಲು ಪ್ರಯತ್ನಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂದು ಮಧ್ಯಸ್ಥರೊಂದಿಗೆ ರೀಲ್ಸ್ ವಿಡಿಯೋ ಮಾಡಲು, ಫೋಟೋ ತೆಗೆದು ವೈರಲ್‌ ಮಾಡಲೆಂದೇ ತಮ್ಮೊಂದಿಗೆ ಸಹಾಯಕರನ್ನು ಕರೆದುಕೊಂಡು ಬರುವ ಸ್ಥಿತಿಗೆ ನಾವು ತಲುಪಿರುವುದು ವಿಷಾದನೀಯ. ದೈವ ನಂಬಿಕೆ ಉಳಿಸುವತ್ತ ನಾವು ಚಿಂತಿಸಬೇಕಿದೆ ಎಂದರು.

ದೈವ ನಂಬಿಕೆಗಳ ವಿರುದ್ಧ ಆಗುತ್ತಿರುವ ಅವಮಾನ, ನಿಂದನೆಗಳನ್ನು ಕಾನೂನಾತ್ಮಕವಾಗಿ ಹೇಗೆ ಎದುರಿಸಬಹುದು ಎಂಬ ವಿಚಾರದಲ್ಲಿ ಮಾತನಾಡಿದ ಖ್ಯಾತ ವಾಗ್ಮಿ ಹಾಗೂ ವಕೀಲರಾದ ಸಹನಾ ಕುಂದರ್ ಸೂಡಾ ಅವರು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದಾಗ ಕಾನೂನಿನಲ್ಲಿ ಶಿಕ್ಷಿಸುವ ಅವಕಾಶವಿದೆ.‌

ಸಂಘರ್ಷ ಬಿಟ್ಟು ಕಾನೂನು ಮಾರ್ಗದಲ್ಲಿ ಹೋದರೆ ದೈವ ನಂಬಿಕೆಯ ಪರವಾಗಿ ಪರಿಣಾಮಕಾರಿಯಾದ ಬದಲಾವಣೆಗಳು ಸಾಧ್ಯ ಎಂದರು. ಈಗ ದೈವದ ಕಲಗಳಿಗೆ ಹೋಗುವ ತಾಯಂದಿರು, ಹೆಣ್ಣು ಮಕ್ಕಳು ಜಾಗೃತರಾಗಿರಬೇಕು. ದೈವದ ಕಾರಣಿಕದ ಬಗ್ಗೆ ಮಕ್ಕಳಿಗೆ ತಿಳಿಹೇಳಬೇಕು, ನಾವೇ ಮುಂದೆ ನಿಂತು ಫೋಟೋ, ವಿಡಿಯೋ ತೆಗೆದರೆ ಯಾವ ಸಂದೇಶ ತಲುಪುತ್ತದೆ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದ ಕೊನೆಯ ಅವಧಿಯಲ್ಲಿ ತಮ್ಮಣ್ಣ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.‌ ಸಂವಾದದಲ್ಲಿ ದೈವಾರಾಧನೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬದಲಾವಣೆ ಮತ್ತು ಅದಕ್ಕೆ ಪರಿಹಾರ, ದೈವರಾಧನೆಯ ಕಟ್ಟುಪಾಡು, ಸಿನೇಮಾ ನಾಟಕಗಳಲ್ಲಿ ದೈವಗಳನ್ನು ತೋರಿಸದಂತೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನಾದರೂ ಸಿನೇಮಾ, ಯಕ್ಷಗಾನ, ನಾಟಕಗಳಲ್ಲಿ ದೈವಗಳನ್ನು ಥೇಟ್ ಕೊಡಿಯಡಿಯ ವೇಷಭೂಷಣಗಳ ಬದಲು ಕೇವಲ ಸಿಂಬಾಲಿಕ್ ಆಗಿ ತೋರಿಸಲು ಪ್ರಯತ್ನಿಸಿ ಮತ್ತು ಟ್ಯಾಬ್ಲೋ, ಶಾಲಾ‌ ಕಾರ್ಯಕ್ರಮಗಳಲ್ಲಿ ದೈವಗಳನ್ನು ಪ್ರದರ್ಶನದ ವಸ್ತು, ಸಾಂಸ್ಕೃತಿಕ ಕಾರ್ಯಕ್ರಮವಾಗಿ ತೋರಿಸುವುದನ್ನು ನಿಲ್ಲಿಸಿ ಎಂಬುದು ಕಾರ್ಯಕ್ರಮಕ್ಕೆ ಆಗಮಿಸಿದವರ ಒತ್ತಾಯವಾಗಿತ್ತು.

ಪೊಸತ್ ತೋಡಡೆ, ಪರತ್ ನಿಗಿಪಡೆ ಎಂಬ ದೈವ ನುಡಿಯಂತೆ ಕಾರ್ಯಕ್ರಮಕ್ಕೆ ಬಂದವರಿಂದ ಪೊಸತೆನ್ ತೋಡುಜಾ, ಪರತೆನ್ ನಿಗಿಪುಜಾ ಎಂಬ ವಾಗ್ದಾನದ ರೂಪದಲ್ಲಿ ಸಹಿ ಸಂಗ್ರಹ ಮಾಡಲಾಗಿದ್ದು, ಇದಕ್ಕೂ ಆಗಮಿಸಿದವರು ಮೆಚ್ಚುಗೆ ಸೂಚಿಸಿದರು.

ಜೀವಿತಾ ಕುತ್ತಾರ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ ಸಂಘಟನೆಯ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ವೆಲ್, ಹಿರಿಯ ದೈವ ನರ್ತಕರಾದ ಲೋಕಯ್ಯ ಸೇರಾ, ಚಂದು ನಲಿಕೆ, ಎನ್‌ಕೆ ಸಾಲಿಯಾನ್, ಮಧ್ಯಸ್ಥರಾದ ಮನ್ಮಥ ಶೆಟ್ಟಿ ಪುತ್ತೂರು, ಶಾಸಕರಾದ ವೇದವ್ಯಾಸ್ ಕಾಮತ್, ಮುಂಬೈಯ ಚಂದ್ರಕಾಂತ್ ಶೆಟ್ಟಿ ಬೆರ್ಮೊಟ್ಟು, ಖ್ಯಾತ ವಕೀಲರಾದ ಸಹನಾ ಕುಂದರ್ ಸೂಡಾ, ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಯಾನಂದ್ ಕತ್ತಲ್ಸಾರ್, ಸಾಂಸ್ಕೃತಿಕ ವಿಮರ್ಶಕರಾದ ತಮ್ಮಣ್ಣ ಶೆಟ್ಟಿ, ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ ಇದರ ಗೌರವಾಧ್ಯಕ್ಷರಾದ ದಿಲ್‌ರಾಜ್ ಆಳ್ವ, ಅಧ್ಯಕ್ಷರಾದ ಭರತ್ ಬಳ್ಳಾಲ್‌ಭಾಗ್, ಕಾರ್ಯಕ್ರಮದ ಸಂಯೋಜಕರಾದ ಧನುಷ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

SendShare16Share
Previous Post

ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

Next Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..