ಪುತ್ತೂರು : ಹಿರಿಯ ಬಿಜೆಪಿ ನಾಯಕರೂ, ಮಾಜಿ ಸಚಿವರಾದ ಎಸ್ ಎ ರಾಮದಾಸ್ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಿಗೆ ಭೇಟಿ ನೀಡಿದರು.
ನವರಾತ್ರಿಯ ಈ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರದ ಭೇಟಿಯ ಹಿನ್ನೆಲೆಯಲ್ಲಿ ಪುತ್ತೂರಿಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಎಸ್ ಭಟ್ ರವರು ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಆಗಸ್ತ್ಯ ಆಯುರ್ವೇದಿಕ್ ಆಸ್ಪತ್ರೆಯ MD ಡಾ. ಸುಧಾ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ. ಯುವರಾಜ್, ದೇವಸ್ಥಾನದ ಸಿಬ್ಬಂದಿಗಳು,
ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು.