• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

October 28, 2024
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, December 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

by ಪ್ರಜಾಧ್ವನಿ ನ್ಯೂಸ್
October 28, 2024
in ಉಪ್ಪಿನಂಗಡಿ, ಪುತ್ತೂರು
0
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ
37
SHARES
106
VIEWS
ShareShareShare

ಉಪ್ಪಿನಂಗಡಿ: 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಬೇಕು ಎಂಬುದು ನನ್ನ ಕನಸಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ. ಮಂಜೂರಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಕೋಟಿ ರೂ.ಗೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ನೆಕ್ಕಿಲಾಡಿಯಿಂದ ಪುತ್ತೂರಿನ ಬೊಳುವಾರಿನವರೆಗೆ ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖಾಧಿಕಾರಿಗಳ ತಂಡದೊಂದಿಗೆ ಹೆದ್ದಾರಿಯನ್ನು ಪರಿಶೀಲಿಸಿ ಕಾಮಗಾರಿಯ ಬಗ್ಗೆ ಸೂಕ್ತ ನಿರ್ದೇಶನ ನೀಡಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ರಸ್ತೆಯಲ್ಲಿ ಈಗಾಗಲೇ ಬೇರಿಕೆಯಿಂದ ಬೊಳಂತಿಲದವರೆಗೆ 10 ಕೋ.ರೂ.ನ ಕಾಮಗಾರಿ ನಡೆಯುತ್ತಾ ಇದೆ. 2

023-24ರಲ್ಲಿ 20 ಕೋ.ರೂ. ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ಬೊಳುವಾರಿನಿಂದ ಪಡೀಲ್‌ವರೆಗೆ ಹಾಗೂ ಕೋಡಿಂಬಾಡಿಯಲ್ಲಿ ಚತುಷ್ಪಥ ರಾಜ್ಯ ಹೆದ್ದಾರಿಯ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಬೊಳಂತಿಲದಿಂದ ನೆಕ್ಕಿಲಾಡಿಯವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ 15 ಕೋ. ರೂ. ಬಿಡುಗಡೆಯಾಗಿದೆ. ಹೀಗೆ ಒಟ್ಟು ಈ ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ 45 ಕೋ.ರೂ. ಬಿಡುಗಡೆಯಾಗಿದೆ. ನೆಕ್ಕಿಲಾಡಿಯಲ್ಲಿ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಅಂಡರ್‌ಪಾಸಿಂಗ್ ಅವರ ನಕ್ಷೆ ಪ್ರಕಾರ ಮುಂದಕ್ಕೆ ಇತ್ತು.

ಆಗ ಲೋಕೋಪಯೋಗಿ ಅಧಿಕಾರಿಗಳು ರಾಜ್ಯಹೆದ್ದಾರಿಯನ್ನು ನೆಕ್ಕಿಲಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ ಯೋಜನಾ ನಕ್ಷೆಯನ್ನು ರೂಪಿಸಿದ್ದರು. ಅದು 110 ಮೀ. ಇತ್ತು. ಆದರೆ ಈಗ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್ ಹಿಂದಕ್ಕೆ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಮೊದಲಿನ ನಕ್ಷೆಯ ಪ್ರಕಾರ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಜೋಡಿಸಿದರೆ ನೆಕ್ಕಿಲಾಡಿ ಬಳಿ ಹೋಗಿ ವಾಪಸ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮೂಲಕ ಹಿಂದಕ್ಕೆ ಬಂದು ಅಂಡರ್‌ಪಾಸಿಂಗ್ ಮೂಲಕ ಸಾಗಬೇಕಾಗಿದೆ.

ಭವಿಷ್ಯತ್‌ನ ಚಿಂತನೆಯಿಟ್ಟು ನೋಡಿದಾಗ ಇದರಿಂದ ಮುಂದಕ್ಕೆ ಹಲವು ಸಮಸ್ಯೆಗಳು ಉದ್ಭವಿಸಬಹುದಾಗಿದೆ. ಆದ್ದರಿಂದ ಬೊಳಂತಿಲದ ಪೆಟ್ರೋಲ್ ಪಂಪ್‌ನಿಂದ ನೇರವಾಗಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್‌ಗೆ ರಾಜ್ಯ ಹೆದ್ದಾರಿಯನ್ನು ಜೋಡಿಸಲು ಮರು ಸರ್ವೇ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ಸರ್ವೇಯ ಪ್ರಕಾರ ಈ ನೇರವಾದ ರಸ್ತೆಯು 355 ಮೀ. ಉದ್ದ ಬರುತ್ತದೆ. ಅಲ್ಲಿ ಕೆಲವು ಜಾಗವನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 10 ಕೋ.ರೂ. ಬೇಕಾಗಬಹುದು. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಬೊಳುವಾರು- ನೆಕ್ಕಿಲಾಡಿ ಚತುಷ್ಪಥ ರಾಜ್ಯ ಹೆದ್ದಾರಿಯುದ್ದಕ್ಕೂ ವಿದ್ಯುತ್ ದೀಪ ಅಳವಡಿಸಲು 5 ಕೋ.ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೇ, ರಸ್ತೆಯ ಮಧ್ಯದ ಡಿವೈಡರ್‌ನಲ್ಲಿ ಹೈದ್ರಾಬಾದ್‌ನಿಂದ ತಂದು ಬೋಗನ್‌ವಿಲ್ಲಾ ಹೂವಿನ ಗಿಡಗಳನ್ನು ನೆಡಲಾಗುವುದು. ಹೆದ್ದಾರಿಯ ಎರಡೂ ಬದಿಗಳಲ್ಲಿ ಹಣ್ಣಿನ ಮರಗಳ ನಾಟಿ ಮಾಡಲಾಗುವುದು. 250ರಿಂದ 350 ಗಿಡಗಳನ್ನು ಈಗಾಗಲೇ ನಾಟಿ ಮಾಡಲಾಗಿದೆ.

ನಗರ ಸಭಾ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಇದರ ಜವಾಬ್ದಾರಿ ನೀಡಲಾಗಿದೆ. ಇದಕ್ಕಾಗಿ 10 ಲಕ್ಷ ರೂ.ಗಳನ್ನು ನೀಡಲಾಗಿದೆ. ಇದಕ್ಕೆ ಇನ್ನು ಹೆಚ್ಚಿನ ಅನುದಾನ ಬೇಕಿದ್ದರೆ ನೀಡಲಾಗುವುದು. ಬರೇ ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅದನ್ನು ಪೋಷಣೆ ಮಾಡುವ ಕೆಲಸವೂ ಆಗಬೇಕಿದೆ. ಬೇಸಿಗೆಯಲ್ಲಿ ಇದಕ್ಕೆ ನೀರಿನ ವ್ಯವಸ್ಥೆ ಮಾಡಲು ಆಯಾಯ ಗ್ರಾ.ಪಂ.ಗೆ ಸೂಚಿಸಲಾಗುವುದು.

ರಸ್ತೆಯ ಮಧ್ಯದಲ್ಲಿರುವ ಹೂವಿನ ಗಿಡಗಳು ಹಾಗೂ ರಸ್ತೆ ಬದಿಯ ಹಣ್ಣಿನ ಗಿಡಗಳಿಗೆ ಡ್ರಿಪ್ ಹಾಗೂ ಸ್ಪಿಂಕರ್ ಸಿಸ್ಟಮ್ ಮಾಡಿ, ಪೈಪ್ ಹಾಕಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ. ಅದಕ್ಕೆ ಗೇಟ್‌ವಾಲ್ ಓನ್ ಮಾಡಿ ನೀರುಣಿಸುವ ಜವಾಬ್ದಾರಿ ಮಾತ್ರ ಆಯಾ ವ್ಯಾಪ್ತಿಯ ಗ್ರಾ.ಪಂ. ಮಾಡಬೇಕಿದೆ. ಅದಕ್ಕೆ ಕಾಲ ಕಾಲಕ್ಕೆ ತಕ್ಕ ಗೊಬ್ಬರ ಹಾಕುವ ವ್ಯವಸ್ಥೆ, ನಿರ್ವಹಣೆಯನ್ನು ಅರಣ್ಯ ಇಲಾಖೆಯವರು ಮಾಡುತ್ತಾರೆ. ಒಟ್ಟಿನಲ್ಲಿ ನೆಕ್ಕಿಲಾಡಿ- ಬೊಳುವಾರು ರಸ್ತೆಯು ಹಸೀರಿಕರಣ, ಸೌಂದರ್ಯದಿಂದ ಕೂಡಿ ಒಂದು ಮಾದರಿ ರಸ್ತೆಯಾಗಿ ರೂಪುಗೊಳ್ಳಬೇಕಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಾಸಕರು, ಮಳೆ ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಕೆಲವು ಕಾಮಗಾರಿಗಳಿಗೆ ತಡೆಯಾಗಿತ್ತು. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ ಕಾಮಗಾರಿಯೂ ನಡೆಯಲಿದ್ದು, ಇನ್ನುಳಿದ ರಸ್ತೆ ಕಾಮಗಾರಿಯೂ ನಡೆಯಲಿದೆ ಎಂದರು.

ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಎಇಇ ರಾಜಾರಾಮ್, ಎಇ ತೌಸೀಫ್, ವಲಯ ಅರಣ್ಯಾಧಿಕಾರಿ ಕಿರಣ್, ಸಾಮಾಜಿಕ ಅರಣ್ಯದ ವಲಯ ಅರಣ್ಯಾಧಿಕಾರಿ ಪಿ.ಕೆ. ವಿದ್ಯಾರಾಣಿ, ಉಪ ವಲಯ ಅರಣ್ಯಾಧಿಕಾರಿ ಯಶೋಧರ ಕೆ. ಹಾಗೂ 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಯುನಿಕ್, ವಿಕ್ರಂ ಶೆಟ್ಟಿ ಅಂತರ, ಪ್ರಹ್ಲಾದ್ ಬೆಳ್ಳಿಪ್ಪಾಡಿ ಮತ್ತಿತರರಿದ್ದರು.

ರಸ್ತೆ ಮಧ್ಯೆ ನೆಟ್ಟಿರುವ ಹೂವಿನ ಗಿಡಗಳನ್ನು ಹಾಗೂ ರಸ್ತೆ ಬದಿ ನೆಟ್ಟಿರುವ ಹಣ್ಣಿನ ಗಿಡಗಳನ್ನು, ಅದರ ರಕ್ಷಣೆಗೆಂದು ಅದಕ್ಕೆ ಸುತ್ತಿರುವ ಮ್ಯಾಟ್ ಅನ್ನು, ಅವುಗಳಿಗೆ ಜೋಡಿಸಿರುವ ನೀರಿನ ಪೈಪ್‌ಗಳನ್ನು ಕೆಲವರು ಕಿತ್ತುಕೊಂಡು ಹೋಗುತ್ತಾರೆ. ದಯಮಾಡಿ ಆ ಕೆಲಸ ಮಾಡಬೇಡಿ. ನಿಮಗೆ ಹೂವಿನ ಗಿಡಗಳು, ಹಣ್ಣಿನ ಗಿಡಗಳ ಅಗತ್ಯತೆ ಇದ್ದರೆ ನನ್ನ ಬಳಿ ಹೇಳಿ ನಾನು ಅದನ್ನು ವ್ಯವಸ್ಥೆ ಮಾಡಿಕೊಡುತ್ತೇನೆ. ಅದು ಬಿಟ್ಟು ಅವುಗಳನ್ನು ಕಿತ್ತುಕೊಂಡು ಹೋಗುವ ಕೆಲಸ ಮಾಡಬೇಡಿ. ಅಭಿವೃದ್ಧಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಮಾಧ್ಯಮದೆದುರು ಕೈ ಮುಗಿದು ಮನವಿ ಮಾಡಿಕೊಂಡ ಶಾಸಕ ಅಶೋಕ್ ಕುಮಾರ್ ರೈಯವರು, ಒಂದು ವೇಳೆ ಆ ರೀತಿಯ ದುರ್ನಡತೆ ಯಾರಾದರೂ ಮಾಡಿದರೆ ಅದರ ಪೋಟೋ ತೆಗೆದು ನನಗೆ ಕಳುಹಿಸಿ. ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ವ್ಯವಸ್ಥೆ ನಾನು ಮಾಡುತ್ತೇನೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare15Share
Previous Post

ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

Next Post

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು   ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..