ಪೆರ್ನೆ:ನ 25-ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ರೂ.41 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ “ಜ್ಞಾನ ಸೌರಭ” ಗ್ರಂಥಾಲಯವನ್ನು ಜಿ.ವಿ.ಬಿ ರಾಮಯ್ಯ(R.M.Sc Zone Hyderabad) ಇವರು ಉದ್ಘಾಟಿಸಿ ಗ್ರಂಥಾಲಯವು ಗ್ರಾಮೀಣ ಪ್ರದೇಶದ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.ಮುಖ್ಯ ಅತಿಥಿಯಾದ ಉಡುಪಿಯ ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ರಾಜೇಶ್.ವಿ.ಮುಧೋಳ್ ಗ್ರಂಥಾಲಯದಲ್ಲಿರುವ ಪುಸ್ತಕದ ಭಂಡಾರ ಜ್ಞಾನದ ಆಗರವಾಗಲಿ ಎಂದು ತಿಳಿಸಿದರು. ಜೀವ ವಿಮಾನಿಗಮದ ಸೇಲ್ಸ್ ಮ್ಯಾನೇಜರ್ ಪುರಂದರ ರವರು ಮಾತನಾಡಿ ಮಕ್ಕಳ ಪ್ರತಿಭೆ ಅದ್ಭುತ, ಪುಸ್ತಕದ ಓದನ್ನು ಹವ್ಯಾಸವಾಗಿ ಬೆಳೆಸಬೇಕು ಎಂದರು.ದ.ಕ.ಜಿಲ್ಲೆಯ ಪದವಿ ಪೂರ್ವ ವಿಭಾಗದ ಉಪನಿರ್ದೇಶಕರಾದ ಸಿ.ಡಿ.ಜಯಣ್ಣನವರು ವಿದ್ಯಾರ್ಥಿಗಳು ಅತ್ಯುನ್ನತ ರೀತಿಯಲ್ಲಿ ಗ್ರಂಥಾಲಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಭಾರತೀಯ ಜೀವ ವಿಮಾ ನಿಗಮದ ಜಿ.ವಿ.ಬಿ.ರಾಮಯ್ಯ, ರಾಜೇಶ್.ವಿ.ಮುಧೋಳ್,ಕೊಠಡಿಯ ಗುತ್ತಿಗೆದಾರ ಅಬ್ದುಲ್ ಫಾರೂಕ್ ಸತ್ತಿಕಲ್ಲು,ಈ ಹಿಂದೆ ರೋಟರಿ ಕ್ಲಬ್ ವತಿಯಿಂದ ಪೀಠೋಪಕರಣ ನೀಡುವಲ್ಲಿ ಸಹಕರಿಸಿದ ಪುಷ್ಪರಾಜ ಹೆಗ್ಡೆ ಸತ್ತಿಕಲ್ಲು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿದ್ಯಾಸಂಸ್ಥೆಯ ಸಂಚಾಲಕರಾದ ಹರೀಶ್ ಭಂಡಾರಿ.ಟಿ.ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜೀವ ವಿಮಾ ನಿಗಮದ ಮಾರ್ಕೆಟಿಂಗ್ ಮ್ಯಾನೇಜರ್ ಬಿಜು ಜೋಸೆಫ್ ಬಂಟ್ವಾಳ, ಜೀವ ವಿಮಾ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಸತೀಶ್ ಕುಮಾರ್. ಕೆ.ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ ರೈ ಕೆ,ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ರೈ ಕೆ.ಎಂ,ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದವಿ ಪೂರ್ವ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷಕರೂ ಆದ ಮ್ಯಾಕ್ಷಿಂ ಲೋಬೋ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ತಿಮ್ಮಪ್ಪ ಕೆ.,ವೇದಿಯಲ್ಲಿ ಉಪಸ್ಥಿತರಿದ್ದರು.ಉಪನ್ಯಾಸಕ ಗಣೇಶ್ ರೈ ಮತ್ತು ಶಿಕ್ಷಕಿ ಆಶಲತಾ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.
ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯ-“ಜ್ಞಾನ ಸೌರಭ” ಗ್ರಂಥಾಲಯ ಕಟ್ಟಡ ಉದ್ಘಾಟನೆ ಮತ್ತು ಪ್ರತಿಭಾ ದಿನೋತ್ಸವ-2024