• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ ) ಸಮಿತಿಯಿಂದ ಡಿಸೆoಬರ್ 28 – 29ರಂದು  ಪುತ್ತೂರಿನಲ್ಲಿ  2 ನೇ ವರ್ಷದ “ವೈಭವದ ಶ್ರೀನಿವಾಸ ಕಲ್ಯಾಣೊತ್ಸವ ” ಧರ್ಮ ಸಂಗಮ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ ) ಸಮಿತಿಯಿಂದ ಡಿಸೆoಬರ್ 28 – 29ರಂದು  ಪುತ್ತೂರಿನಲ್ಲಿ  2 ನೇ ವರ್ಷದ “ವೈಭವದ ಶ್ರೀನಿವಾಸ ಕಲ್ಯಾಣೊತ್ಸವ ” ಧರ್ಮ ಸಂಗಮ

December 4, 2024
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ ) ಸಮಿತಿಯಿಂದ ಡಿಸೆoಬರ್ 28 – 29ರಂದು  ಪುತ್ತೂರಿನಲ್ಲಿ  2 ನೇ ವರ್ಷದ “ವೈಭವದ ಶ್ರೀನಿವಾಸ ಕಲ್ಯಾಣೊತ್ಸವ ” ಧರ್ಮ ಸಂಗಮ

by ಪ್ರಜಾಧ್ವನಿ ನ್ಯೂಸ್
December 4, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ ) ಸಮಿತಿಯಿಂದ ಡಿಸೆoಬರ್ 28 – 29ರಂದು  ಪುತ್ತೂರಿನಲ್ಲಿ  2 ನೇ ವರ್ಷದ “ವೈಭವದ ಶ್ರೀನಿವಾಸ ಕಲ್ಯಾಣೊತ್ಸವ ” ಧರ್ಮ ಸಂಗಮ
82
SHARES
235
VIEWS
ShareShareShare

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ )ಪುತ್ತೂರು ಇದರ ಸಾರಥ್ಯದಲ್ಲಿ ಡಿ. 28.29 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ನಡೆಯುವ” ಶ್ರೀನಿವಾಸ ಕಲ್ಯಾಣೋತ್ಸವ” ಬಗ್ಗೆ ಪತ್ರಿಕಾಗೋಷ್ಠಿಯನ್ನು ದರ್ಬೆ ಪುಷ್ಪಾಂಜಲಿ ಕಲಾ ಮಂದಿರದಲ್ಲಿ ಕರೆದಿದ್ದು, ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ.

ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ವೈದ್ಯಕೀಯ, ಕ್ರೀಡಾ ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಎಲ್ಲರ ಸಹಕಾರದೊಂದಿಗೆ ಸೇವೆ ಮಾಡುತ್ತಿದೆ. ಧಾರ್ಮಿಕ ಜಾಗೃತಿ ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ. ಅದೇ ರೀತಿ ಕಳೆದ ಬಾರಿಯಂತೆ ಈ ಬಾರಿಯೂ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವಂತೆ ಭಕ್ತರ ಅಪೇಕ್ಷೆಯಂತೆ ಡಿ.28 ಮತ್ತು 29ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.

2 ದಿವಸ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಡಿ.27ಕ್ಕೆ ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಗೆ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಎಲ್ಲಾ ಗ್ರಾಮಗಳಲ್ಲಿ ಸಂಗ್ರಹಣೆಯಾದ ಹೊರೆಕಾಣಿಕೆಯನ್ನು ಮೆರವಣಿಗೆ ಮೂಲಕ ತರಲಾಗುವುದು ಎಂದು ಅವರು ಹೇಳಿದರು.

ಡಿ.28ರಂದು ಸಂಜೆ ಗಂಟೆ 4ರಿಂದ ಬೊಳುವಾರಿನಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ವೈಭವದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಬಳಿಕ ಭವ್ಯ ವೇದಿಕೆಯ ಮಂಟಪದಲ್ಲಿ ಶ್ರೀ ದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಸ್ವಾಗತ, ‘ಈಶ ಮಂಟಪಕ್ಕೆ’ ಆಗಮನ ಕಾರ್ಯಕ್ರಮ ನಡೆದು ವೈದಿಕ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ಹಿಂದು ಸಮಾಜದ ಕಲ್ಯಾಣವಾಗಬೇಕೆಂಬ ಮಹಾದಾಸೆಯಿಂದ ಸಂಜೆ ಗಂಟೆ 6ಕ್ಕೆ ಧರ್ಮಸಂಗಮ ಧಾರ್ಮಿಕ ಸಭೆ ನಡೆಯಲಿದೆ.

ashwinistudioputtur

ಜಾಹೀರಾತು

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು, ಅರಕಲಗೂಡು ವಿಶ್ವಬ್ರಾಹ್ಮಣ ಮಹಾ ಸಂಸ್ಥಾನ ಪೀಠದ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಒಡಿಯೂರು ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ, ಕನ್ಯಾನ ಶ್ರೀ ಕ್ಷೇತ್ರ ಕಣಿಯೂರು ಇಲ್ಲಿನ ಶ್ರೀ ಮಹಾಬಲ ಸ್ವಾಮೀಜಿ, ಶ್ರೀ ಕ್ಷೇತ್ರ ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಿಟ್ಲ ಶ್ರೀ ಯೋಗೀಶ್ವರ ಮಠದ ಶ್ರೀ ಯೋಗೀ ಶ್ರದ್ಧಾನಂದಾ ಜೀ, ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಶ್ರೀ ಕೃಷ್ಣಗುರೂಜಿ, ಬೆಳ್ತಂಗಡಿ ಆರಿಕೋಡಿ ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಲಿದ್ದಾರೆ.

ರಾತ್ರಿ ಗಂಟೆ 8ಕ್ಕೆ ಗಾನಸಿರಿ ಡಾ| ಕಿರಣ್ ಕುಮಾರ್ ಪುತ್ತೂರು ಇವರಿಂದ ಭಕ್ತಿ ಗಾನಸುಧೆ ನಡೆಯಲಿದೆ. ರಾತ್ರಿ ಗಂಟೆ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 9ಕ್ಕೆ ತೆಲಿಕೆದ ಬೊಳ್ಳಿ. ಡಾ| ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಚಾಪರ್ಕ ಕಲಾವಿದರಿಂದ 921ನೇ ಪ್ರದರ್ಶನವಾಗಿ ಪುದರ್ ದೀತಿಜಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಡಿ.29ರಂದು ಬೆಳಗ್ಗೆ ಗಂಟೆ 6.30 ರಿಂದ ಸುಪ್ರಭಾತ ಪೂಜಾ ಸೇವೆ, ಮಧ್ಯಾಹ್ನ ಗಂಟೆ 12.30ರಿಂದ ಮಹಾಪೂಜೆ, ಅನ್ನಸಂತರ್ಪಣೆ, ಮಧ್ಯಾಹ್ನ ಗಂಟೆ 2.30 ರಿಂದ ಭಜನಾ ತಂಡಗಳಿಂದ ಭಜನೋತ್ಸವ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಶ್ರೀ ಹರಿಗಾನಾಮೃತ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6 ರಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಕಳೆದ ಬಾರಿಯ ಭಕ್ತರ ಸಂಖ್ಯೆಯನ್ನು ನೋಡಿಕೊಂಡು ಈ ಬಾರಿ ಸುಮಾರು 75ಸಾವಿರ ಮಂದಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಮಾಡಿದ್ದೇವೆ. ಜೊತೆಗೆ 25ಸಾವಿರಕ್ಕಿಂತಲೂ ಮಿಕ್ಕಿ ಲಾಡು ಸೇವೆಗೆ ಸಿದ್ಧಪಡಿಸಲಾಗುತ್ತಿದೆ. ಕಳೆದ ವರ್ಷ ನಮಗೆ ಸಮಯದ ಕೊರತೆ ಇತ್ತು. ಈ ಬಾರಿ ಡಿ.20ರ ಒಳಗಾಗಿ ಎಲ್ಲಾ ಬೂತ್ ಸಮಿತಿಯಿಂದ ಸೇವಾ ರಶೀದಿಯನ್ನು ನೋಂದಾಯಿಸಲು ತಿಳಿಸಿದ್ದೇವೆ ಎಂದು ಅರುಣ್ ಕುಮಾರ ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಒಂದೇ ವೇದಿಕೆಯಲ್ಲಿ ನಡೆಯಲಿದೆ. ಹಾಗಾಗಿ ಶ್ರೀನಿವಾಸ ದೇವರಿಗೆ ಎತ್ತರದ ವೇದಿಕೆ ಮತ್ತು ಅದರ ಕೆಳಗೆ ಇನ್ನೊಂದು ವೇದಿಕೆ ನಿರ್ಮಾಣ ಮಾಡಲಾಗುವುದು. ಒಟ್ಟು 86 ಚದರ ಅಡಿಯ ವೇದಿಕೆ ನಿರ್ಮಾಣ ಮಾಡಲಾಗುವುದು ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು. ಮಾಧ್ಯಮ ಸಂವಾದದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಶಶಾಂಕ ಕೊಟೇಚಾ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಸಹಸಂಚಾಲಕ ಮನೀಶ್ ಕುಲಾಲ್, ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಅವರು ಉಪಸ್ಥಿತರಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವದ ಸೇವಾ ಚಟುವಟಿಕೆಯ ಹಿನ್ನೆಲೆಯಲ್ಲಿ ಮತ್ತು ವಿವಿಧ ಪೂಜಾ ಸೇವಾ ರಶೀದಿ ಮಾಡಿಸುವ ಭಕ್ತರ ಸಹಕಾರಕ್ಕಾಗಿ ಡಿ.15ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಮಂದಿರ ಮುಂದೆ ಸೇವಾ ಕಾರ್ಯಾಲಯ ಉದ್ಘಾಟಿಸಲಾಗುವುದು. ಇದೇ ಸಂದರ್ಭ ಚಪ್ಪರ ಮುಹೂರ್ತಕ್ಕೆ ಭೂಮಿ ಪೂಜೆಯೂ ನಡೆಯಲಿದೆ.

Muliya

ಜಾಹೀರಾತು

1 ವರ್ಷದ ಅವಧಿಯಲ್ಲಿ ಸುಮಾರು ರೂ. 20ಲಕ್ಷ ಕ್ಕೂ ಮಿಕ್ಕಿ ಸೇವಾ ಚಟುವಟಿಕೆಯನ್ನು ಟ್ರಸ್ಟ್ ಮೂಲಕ ಮಾಡಿದ್ದೇವೆ. ಅಸಹಾಯಕರಿಗೆ ಟ್ರಸ್ಟ್ ಮೂಲಕ ನಾಲ್ಕು ಮನೆಗಳನ್ನು ನಿರ್ಮಾಣ ಮಾಡಿ ಕೊಡಲಾಗಿದೆ. ಆರೋಗ್ಯ ಸಮಸ್ಯೆಯಲ್ಲಿರುವ ಎರಡುಮೂರು ಮಂದಿಗೆ ತಲಾ ರೂ. 1ಲಕ್ಷ ನೀಡಿದ್ದೇವೆ. ವೈದ್ಯಕೀಯ ಶಿಬಿರ ಮತ್ತು ಕಳೆದ ಒಂದು ವರ್ಷದಲ್ಲಿ ಕ್ಷೇತ್ರದಲ್ಲಿ ಧಾರ್ಮಿಕ ಶಿಬಿರ ಆಯೋಜನೆ ಮಾಡಿ. ಧರ್ಮ ಜಾಗೃತಿ ಕಾರ್ಯಕ್ರಮ ಮಾಡಿದ್ದೇವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸುಳ್ಯ, ಕಡಬ ಭಾಗದಲ್ಲಿ ಸಂಪರ್ಕ ಮಾಡಿ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣವನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಟ್ರಸ್ಟ್ನ ಬೂತ್ ಸಮಿತಿಗಳಿಂದ ಮಾಡಲಾಗುತ್ತಿದೆ. ಜೊತೆಗೆ ಪಕ್ಷ, ಸಂಘಪರಿವಾರವನ್ನು ಸೇರಿಸಿಕೊಂಡು ಕಾರ್ಯಕ್ರಮದ ಯಶಸ್ವಿಗೆ ಸಭೆ ಮಾಡುತ್ತಿದ್ದೇವೆ. ಒಂದು ವಾರದಲ್ಲಿ ಎಲ್ಲಾ ಕೆಲಸ ಕಾರ್ಯ ಪೂರ್ಣಗೊಳ್ಳಲಿದೆ.

 

 

SendShare33Share
Previous Post

ವಿಪರೀತ ಮಳೆಯಾಗುವ ಕಾರಣ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Next Post

ಕೋರಂ ಕೊರತೆ ಹಿನ್ನೆಲೆ- ಕೋಡಿಂಬಾಡಿ ಗ್ರಾ.ಪಂಚಾಯತ್ ಸಾಮಾನ್ಯ ಸಭೆ – ರದ್ದು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಕೋರಂ ಕೊರತೆ ಹಿನ್ನೆಲೆ- ಕೋಡಿಂಬಾಡಿ ಗ್ರಾ.ಪಂಚಾಯತ್ ಸಾಮಾನ್ಯ ಸಭೆ - ರದ್ದು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..