• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

September 1, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

3850 ಮಂದಿಗೆ ಟ್ರಸ್ಟ್ ಮೂಲಕ ಉದ್ಯೋಗ, ಅಶಕ್ತರಿಗೆ ಮನೆ,ಟ್ರಸ್ಟ್‌ಗೆ ಜಾಗ ಹಸ್ತಾಂತರ ಆದರೆ ಗೋ ಶಾಲೆಯೂ ಲೋಕಾರ್ಪಣೆʼ- ಅರುಣ್‌ ಕುಮಾರ್‌ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
September 1, 2025
in ಜಿಲ್ಲೆ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ
40
SHARES
113
VIEWS
ShareShareShare

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ  ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು.

Poorna squash

ಜಾಹೀರಾತು

ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ ಕಾರ್ಯಕ್ರಮ ಅಧ್ಯಕ್ಷರಾಗಿ ಖ್ಯಾತ ವಕೀಲರಾದ ಶ್ರೀ ನರಸಿಂಹ ಪ್ರಸಾದ್, ಕಾರ್ಯಾಧ್ಯಕ್ಷರಾಗಿ ಉದ್ಯಮಿಗಳಾದ ಶ್ರೀ ಪ್ರಾಣೇಶ್ ಕೆಮ್ಮಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೋಶಾಧಿಕಾರಿಯಾಗಿ ಶ್ರೀ ಉದಯ್ ಕುಮಾರ್ ರೈ ಸಂಪ್ಯ ಅವರನ್ನು ಆಯ್ಕೆ ಮಾಡಲಾಯಿತು.

Muliya

ಜಾಹೀರಾತು

Scafold Academy

ಜಾಹೀರಾತು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಆರಂಭದಲ್ಲಿ ಮಾತನಾಡಿ, ಹಿಂದುತ್ವ ಮತ್ತು ರಾಷ್ಟ್ರೀಯತೆಯ ಮಹತ್ವವನ್ನು ಜಗತ್ತಿಗೆ ಸಾರಿ, ಸ್ವಾಭಿಮಾನಿ ಸನಾತನ ಹಿಂದೂ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪದಿಂದ ಪುತ್ತಿಲ ಪರಿವಾರ ಟ್ರಸ್ಟ್ ಕಳೆದ 2 ವರ್ಷಗಳ ಹಿಂದೆ ಆರಂಭವಾಗಿ ಹಿಂದೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆರೋಗ್ಯ, ಶಿಕ್ಷಣ, ಉದ್ಯೋಗ ಸಹಿತ ಹಲವು ಸೇವೆಗಳನ್ನು ಮಾಡುತ್ತಾ ಬಂದಿದೆ. ಈ ನಡುವೆ ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ನಡೆಸಿಕೊಂಡು ಬಂದು ಈ ಬಾರಿ 3ನೇ ವರ್ಷದ ಕಾರ್ಯಕ್ರಮವಾಗಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷದ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹವನ್ನು ಮಾಡುವುದಾಗಿ ಘೋಷಣೆ ಮಾಡಿದಂತೆ ಮಾಂಗಲ್ಯಂ ತಂತುನಾನೇನ ಕಾರ್ಯಕ್ರಮ ನಡೆಯಲಿದೆ. ಈಗಗಲೇ 6 ಗ್ರಾಮಗಳಿಂದ 12 ಜೋಡಿ ಸಾಮೂಹಿಕ ವಿವಾಹಕ್ಕೆ ನೋಂದಾವಣೆ ಮಾಡಿದ್ದಾರೆ. ಕಳೆದ ವರ್ಷ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ರೂ. 52 ಲಕ್ಷ ವೆಚ್ಚವಾಗಿದೆ. ಈ ಭಾರಿ ಸಾಮೂಹಿಕ ವಿವಾಹವು ಇರುವುದರಿಂದ ಸುಮಾರು ರೂ. 1.10 ಕೋಟಿ ಖರ್ಚು ಆಗಬಹುದೆಂದು ಅಂದಾಜಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಟ್ರಸ್ಟ್ ಮೂಲಕ ಈಗಾಗಲೇ 100 ಬೂತ್‌ಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಮಾಡಿದ್ದೇವೆ. ಮುಂದೆ ರಕ್ತದಾನ ಕಾರ್ಯಕ್ರಮವನ್ನೂ ಮಾಡಲಿದ್ದೇವೆ. ಹಿಂದೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅಪಮಾನ, ಅವಮಾನ ಆದರೂ ನಾವು ಸುಮ್ಮನಿರದೆ ಅದನ್ನು ಎದುರಿಸಬೇಕು. ಸಮಾಜದ ಮುಂದಿರುವ ಯಾವುದೇ ಸವಾಲು ಇದ್ದರೂ ಹಿಂದೂ ಸಮಾಜ ಒಂದಾಗಿ, ಒಟ್ಟಾಗಿ ಕೆಲಸ ಮಾಡುತ್ತದೆ ಎಂದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಕಳೆದ ಎರಡೂವರೆ ವರ್ಷದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳನ್ನು ಮಾಡಲಾಗಿದೆ. ಈಗಾಗಲೇ ಅಶಕ್ತರಿಗೆ ನಾಲ್ಕೈದು ಮನೆ ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಗಿದೆ. ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಟ್ಸಪ್ ಗ್ರೂಪ್ ಮಾಡಿಕೊಂಡು ಸುಮಾರು 3850 ಮಂದಿಗೆ ಟ್ರಸ್ಟ್ ಮೂಲಕ ಉದ್ಯೋಗ ಕಲ್ಪಿಸಲಾಗಿದೆ. ವಿದ್ಯಾಭ್ಯಾಸಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡಲಾಗಿದೆ. ಅದೇ ರೀತಿ ಸಂಪ್ರದಾಯವನ್ನು ನೆನಪಿಸುವ ನಿಟ್ಟಿನಲ್ಲಿ ಕೆಸರ್‌ದ ಕೂಟ, ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಮಾಡಿದ್ದೇವೆ. ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ನಿಮಿತ್ತ ಪಾಣಾಜೆಯಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಂಕಲ್ಪ ಕೈಗೊಂಡಂತೆ ಅದನ್ನು ಹಸ್ತಾಂತರ ಮಾಡಲಾಗುವುದು. ಮುಂದಿನ ದಿನ ಅಶಕ್ತರಿಗೆ ಮನೆಯ ಅಪೇಕ್ಷೆ ಇದ್ದಾಗ ಅವರಿಗೆ ಮನೆ ಕಟ್ಟಿಕೊಡುವುದು ಸಹಿತ ಹಲವಾರು ಕಾರ್ಯಕ್ರಮ ಪ್ರತಿ ತಿಂಗಳು ನಡೆಯುತ್ತಾ ಬರುತ್ತದೆ. ಇದೆಲ್ಲ ಕಾರ್ಯಕರ್ತರ ಸಹಕಾರದಿಂದ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡ ವಕೀಲ ನರಸಿಂಹಪ್ರಸಾದ್ ಅವರು ಮಾತನಾಡಿ, ನನ್ನ ಮತ್ತು ಅರುಣ್ ಕುಮಾರ್ ಅವರ ನಡುವೆ 30 ವರ್ಷದ ಬಾಂಧವ್ಯ ಇದೆ. ವೃತ್ತಿಯ ಒತ್ತಡದ ನಡುವೆಯೂ ಸಾಮಾಜಿಕ ಕಾರ್ಯದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದೇನೆ. ಇದು ಲೋಕ ಕಲ್ಯಾಣಾರ್ಥವಾಗಿ ನಡೆಯುವ ಕಾರ್ಯಕ್ರಮ. ಈ ಕಾರ್ಯಕ್ರಮದ ಮಹತ್ವವನ್ನು ತಿಳಿಸುವಲ್ಲಿ ಎಲ್ಲರು ಧ್ವನಿಯಾಗಿ ಎಂದ ಅವರು ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ಈ ಭಾರಿ ಸುಮಾರು 1.10 ಕೋಟಿ ರೂ. ಖರ್ಚು ಅಂದಾಜಿಸಲಾಗಿದೆ. ನಮ್ಮ ಧರ್ಮವನ್ನು ಒಡೆಯಲು ಮತಾಂಧರು ಎಷ್ಟೋ ಕೋಟಿ ರೂಪಾಯಿ ವ್ಯಯಿಸುತ್ತಾರಂತೆ. ಇದಕ್ಕೆ ನಿದರ್ಶನವಾಗಿ ಧರ್ಮಸ್ಥಳ ಪ್ರಕರಣ ನೋಡುತ್ತಿದ್ದೇವೆ. ಧರ್ಮವನ್ನು ಒಗ್ಗೂಡಿಸಲು ನಾವೆಷ್ಟು ಕೋಟಿ ಖರ್ಚು ಮಾಡಬೇಕೆಂಬುದನ್ನು ಚಿಂತಿಸಬೇಕು ಎಂದ ಅವರು ಈ ಕಾರ್ಯಕ್ರಮ ಮಾಡಲು ಆರ್ಥಿಕವಾಗಿ ಹಿಂಜರಿಯದೆ ಕಾರ್ಯಕ್ರಮ ಯಶಸ್ವಿಗೊಳಿಸುತ್ತೇವೆ. ಸಾಮೂಹಿಕ ವಿವಾಹ ಎಂಬ ಭ್ರಮೆ ಬೇಡ. ಇಲ್ಲಿ ಸಾಮೂಹಿಕ ವಿವಾಹಕ್ಕೆ ಯೋಗ ಬೇಕು ಎಂಬುದು ಎಲ್ಲರೂ ತಿಳಿದಿರಬೇಕು ಎಂದು ಹೇಳಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ, ಪಕ್ಷ, ಬೇಧ ಮರೆತು ಎಲ್ಲಾ ಹಿಂದೂಗಳು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಜೊತೆ ಗೂಡುವಂತೆ ಹೇಳಿದರು. ವಿಜ್ರಂಭಣೆಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯವಾಗಿ ಬೇಕೆಂದರು.

ಟ್ರಸ್ಟ್‌ನ ನಿರ್ದೇಶಕ ಉಮೇಶ್ ಕೋಡಿಬೈಲು ಅವರು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ವಿವರಣೆ ನೀಡಿದರು. ನ.28ಕ್ಕೆ ಸಂಜೆ ದರ್ಬೆಯಿಂದ ಹೊರೆಕಾಣಿಕೆ ಮೆರವಣಿಗೆ ಬರಲಿದೆ. ನ.29ಕ್ಕೆ ಸಂಜೆ ಗಂಟೆ 4 ರಿಂದ ಬೊಳುವಾರಿನಿಂದ ಶ್ರೀದೇವರನ್ನು ಶೋಭಯಾತ್ರೆಯೊಂದಿಗೆ ಗೋವಿಂದ ಮಂಟಪಕ್ಕೆ ಬರಮಾಡಿಕೊಳ್ಳುವುದು. ಬಳಿಕ ವಿವಿಧ ಕಾರ್ಯಕ್ರಮದೊಂದಿಗೆ ಸಂಜೆ ಹಿಂದವಿ ಸಾಮ್ರಾಜ್ಯ ಧರ್ಮಸಭೆ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ 12 ಮಂದಿ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8.30ರಿಂದ ಹರಿಕಥೆ ನಡೆಯಲಿದೆ. 9 ಗಂಟೆಯಿಂದ ಸಾರ್ವಜನಿಕ ಅನ್ನಸಂರ್ಪಣೆ ನಡೆಯಲಿದೆ. ನ.30ರಂದು ಬೆಳಗ್ಗೆ ಗಂಟೆ 5.30ರಿಂದ ಸುಪ್ರಭಾತ ಸೇವೆ, ಮಧ್ಯಾಹ್ನ ಗಂಟೆ 11ರಿಂದ ಸಾಮೂಹಿಕ ವಿವಾಹ, 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 2.30ರಿಂದ ಭಜನೋತ್ಸವ, ಸಂಜೆ ಗಂಟೆ 4.30ರಿಂದ ಸಂಗೀತ ಕಾರ್ಯಕ್ರಮ. ಸಂಜೆ ಗಂಟೆ 6ರಿಂದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದರು.

Keshari Durga

ಜಾಹೀರಾತು

ವೇದಿಕೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಪ್ರೇಮ್‌ರಾಜ್ ಅರ್ಲಪದವು, ಕೋಶಾಧಿಕಾರಿ ರೂಪೇಶ್ ನಾೖಕ್‌ ಟಿ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನೂತನ ಕಾರ್ಯಾಧ್ಯಕ್ಷ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿ ಉದಯ ಕುಮಾರ್ ಉಪಸ್ಥಿತರಿದ್ದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ ವಂದಿಸಿದರು. ರವಿ ಶೆಟ್ಟಿ ಕೈಂದಾಡಿ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ವಿವಾಹ ನೋಂದಾವಣೆ ಪತ್ರವನ್ನು ನೀಡಲಾಯಿತು. ಈಗಾಗಲೇ 6 ಗ್ರಾಮದಲ್ಲಿ 12 ಜೋಡಿ ನೋಂದಾವಣೆ ಆಗಿದೆ. ಮುಂದೆ ಇನ್ನೂ ನೋಂದಾವಣೆಗೆ ಬಾಕಿ ಇದೆ ಎಂದು ಸಭೆಯಲ್ಲಿ ಸಂಘಟಕರು ತಿಳಿಸಿದರು. ಸಭೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಶಶಾಂಕ್ ಕೊಟೆಚಾ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮಾರಾಧಾಕೃಷ್ಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ನರಸಿಂಹ ಪ್ರಸಾದ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕಾರ್ಯಾಧ್ಯಕ್ಷರಾಗಿ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ಉದಯ ಕುಮಾರ್ ಸಂಪ್ಯ ಅವರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಘೋಷಣೆ ಮಾಡಿ ಒಂದು ವಾರದ ಒಳಗೆ ಪೂರ್ಣ ಪ್ರಮಾಣದ ಸಮಿತಿ ರಚನೆಯಾಗಲಿದೆ. ಇನ್ನಷ್ಟು ಉಪಸಮಿತಿಗಳನ್ನು ಮಾಡುವುದಕ್ಕಿದೆ ಎಂದರು.

Fashion street 9902633624

ಜಾಹೀರಾತು

ಕಳೆದ ವರ್ಷ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಂತೆ ಗೋ ಶಾಲೆ ನಿರ್ಮಾಣದ ಕುರಿತು ಘೋಷಣೆ ಮಾಡಿದ್ದೆವು. ಗೋವಿನಿಂದಾಗಿ ಸಮಾಜದಲ್ಲಿ ನಡೆಯುವ ಸಂಘರ್ಷವನ್ನು ತಡೆಯಲು ಗೋ ಶಾಲೆ ನಿರ್ಮಾಣ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಮುಂಡೂರು ಬದಿಯಡ್ಕದಲ್ಲಿರುವ 5.92 ಎಕ್ರೆ ಗೋಮಾಳ ಜಾಗವನ್ನು ನಮ್ಮ ಟ್ರಸ್ಟ್‌ಗೆ ಹಸ್ತಾಂತರ ಮಾಡುವಂತೆ ಜಿಲ್ಲಾಧಿಕಾರಿಯವರಿಗೆ ನಿವೇದನೆ ಮಾಡಿದ್ದೇವೆ. ಅವರು ಅಲ್ಲಿಂದ ಅದನ್ನು ತಹಸೀಲ್ದಾರ್ ಕಚೇರಿಗೆ ಕಳುಹಿಸಿದ್ದಾರೆ. ಸರಕಾರದ ಕಡೆಯಿಂದ ಆ ಜಾಗ ಟ್ರಸ್ಟ್‌ಗೆ ಹಸ್ತಾಂತರ ಆದಲ್ಲಿ ಸಾಮೂಹಿಕ ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭದಲ್ಲೇ ಗೋ ಶಾಲೆಯನ್ನೂ ಸಹ ಲೋಕಾರ್ಪಣೆ ಮಾಡಲು ಸಿದ್ದರಿದ್ದೇವೆ. ಅರುಣ್‌ ಕುಮಾರ್‌ ಪುತ್ತಿಲ

SendShare16Share
Previous Post

ಕರಾವಳಿ ಕರ್ನಾಟಕ ಮುಂದಿನ 5 ದಿನ ಭಾರಿ ಮಳೆ – ಐಎಂಡಿ ಮುನ್ಸೂಚನೆ

Next Post

ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..