• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

September 10, 2025
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 5, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

13 ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

by ಪ್ರಜಾಧ್ವನಿ ನ್ಯೂಸ್
September 10, 2025
in ಪುತ್ತೂರು
0
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ
5
SHARES
13
VIEWS
ShareShareShare

ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಅವರ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ashwinistudioputtur

ಜಾಹೀರಾತು

ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ, ಕಾರ್ಯಕರ್ತರಿಲ್ಲದಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ, ತಳಮಟ್ಟದ ಕಾರ್ಯಕರ್ತ ಪಕ್ಷದ ಬೆನ್ನೆಲುಬಾಗಿದ್ದಾರೆ ಅವರಿಗೆ ಬೆಂಬಲ ನೀಡುವ ಕೆಲಸ ನಾಯಕರಿಂದ ಆಗಬೇಕು. ಕಾರ್ಯಕರ್ತರ ಸೇರಿದಂತೆ ಬಡ ಜನರ ಸೇವೆಗೆ ನಾವು ಸದಾ ಸಿದ್ದರಾಗಿರಬೇಕು. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಮಂದಿ ಪಕ್ಷದತ್ತ ಒಲವು ತೋರುತ್ತಿದ್ದಾರೆ ಅವರನ್ನು ಮತವಾಗಿ ಬದಲಾಯಿಸುವ ಶಕ್ತಿ ಕಾರ್ಯಕರ್ತನಿಗಿರಬೇಕು ಎಂದು ಹೇಳಿದ ಶಾಕರು ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮದಲ್ಲಿ ಕಾರ್ಯಕರ್ತರ ಮನೆಯಲ್ಲೇ ಸಭೆ ಸಮಾರಂಭಗಳನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕರ್ತರ ಬೇಡಿಕೆ ಈಡೇರಿಸುವೆ

ಕಾರ್ಯಕರ್ತ, ಬೂತ್, ವಲಯ ಸಮಿತಿ ಪದಾಧಿಕಾರಿಗಳು ಅಭಿವೃದ್ದಿಯ ಬೇಡಿಕೆ ಇಟ್ಟಲ್ಲಿ ಅದನ್ನು ಈಡೇರಿಸುವ ಕೆಲಸವನ್ನು ಮಾಡುತ್ತೇನೆ. ಯಾವುದೇ ಪಕ್ಷ ಬೇದವಿಲ್ಲದೆ ನಮ್ಮ ಕಾರ್ಯಕರ್ತರು ಜನರ ಸೇವೆಗೆ ಮುಂದಾಗಬೇಕು. ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ದಾಖಲಿಸಿಕೊಳ್ಳುವ ಕೆಲಸ ಮಾಡಬೇಕು. ತಳಮಟ್ಟದಲ್ಲಿ ಪಕ್ಷವನ್ನು ಈಗಲೇ ಗಟ್ಟಿ ಮಾಡುವ ಮೂಲಕ ಮುಂದೆ ಬರುವ ಗ್ರಾಪಂ , ತಾಪಂ ಹಾಗೂ ಜಿಪಂ ಚುನಾವಣೆಗೆ ಯಾರಿಗೇ ಆಗಲಿ ಟಿಕೆಟ್ ಸಿಕ್ಕಿದಲ್ಲಿ ಅವರು ನಮ್ಮವ ಎಂಬ ಭಾವನೆಯಿಂದ ಕೆಲಸ ಮಾಡಿ ಗೆಲ್ಲಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಶಾಸಕರ ಒಳ್ಳೆಯ ನಿರ್ಧಾರವಾಗಿದೆ; ಕೆ ಪಿ ಆಳ್ವ

ಕಾರ್ಯಕರ್ತರ ಮನೆಯಲ್ಲಿ ಸಭೆ ನಡೆಸುವ ಮೂಲಕ ಪಕ್ಷದ ಬೆಳವಣಿಗೆಗೆ ತಳಮಟ್ಟದಲ್ಲಿ ಕಾರ್ಯಪೃವೃತ್ತರಾಗಬೇಕು ಎಂಬ ಶಾಸಕ ಅಶೋಕ್ ರೈ ಅವರ ನಿರ್ಧಾರ ಅತ್ಯುತ್ತಮವಾಗಿದೆ. ಮುಂದೆ ಪ್ರತೀ ಗ್ರಾಮದಲ್ಲಿಯೂ ಬ್ಲಾಕ್ ಸಭೆಯು ನಡೆಯಲಿದೆ. ವಲಯ ಹಾಗೂ ಬೂತ್ ಮಟ್ಟದ ಸಭೆಯು ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ. ಶಾಸಕರ ಅಭಿವೃದ್ದಿ ಕಾರ್ಯವನ್ನು ಮೆಚ್ಚಿ ಅನೇಕ ಮಂದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಇದು ನಮಗೆ ಹುಮ್ಮಸ್ಸನ್ನು ವೃದ್ದಿಸಿದೆ ಎಂದು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು.

ಶಾಸಕರ ಸೂಚನೆಯಂತೆ ಪಕ್ಷ ಕಟ್ಟುತ್ತೇವೆ: ನಿಹಾಲ್ ಪಿ ಶೆಟ್ಟಿ

ಒಳಮೊಗ್ರು ವಲಯ ಕಾಂಗ್ರೆಸ್ ಉಸ್ತುವಾರಿ , ಪುಡಾ ಸದಸ್ಯರೂ ಆದ ನಿಹಾಲ್ ಪಿ ಶೆಟ್ಟಿ ಮಾತನಾಡಿ ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್ ಭದ್ರವಾಗಿದೆ. ಪಕ್ಷಕ್ಕೆ ಅನೇಕ ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ಗ್ರಾಪಂ ಚುನಾವಣೆ ವೇಳೆ ಇನ್ನಷ್ಟು ಮಂದಿ ಅನ್ಯ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದು ಶಾಸಕರ ಸೂಚನೆಯಂತೆ ನಾವು ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆ

ಇದೇ ಸಂದರ್ಭದಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು.ಬಾಲಪ್ಪ ನಾಯ್ಕ ಮುಡಾಲಮೂಲೆ, ಕೊರಗಪ್ಪ ನಾಯ್ಕ, ದೇವಪ್ಪ ನಾಯ್ಕ,ಶಿವಪ್ಪ ನಾಯ್ಕ, ಜಯಂತಿ , ಜಯಂತಿ ದೇವಪ್ಪ ನಾಯ್ಕ,ವೇದಾವತಿಶಿವಪ್ಪ ನಾಯ್ಕ, ಜಯ, ದನಂಜಯ, ದಿನೇಶ್, ದಯಾನಂದ ಹಾಗೂ ವಿಶ್ವನಾಥ ಕುಲಾಲ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರು ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

camera center ad

ಜಾಹೀರಾತು

ಕಾಂಗ್ರೆಸ್ ಬಡವರ ಪರ: ಕಾವು ಹೇಮನಾಥ ಶೆಟ್ಟಿ

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಬಡವರ ಪಕ್ಷವಾಗಿದೆ. ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಪ್ರತೀ ಕುಟುಂಬಕ್ಕೂ ನೆರವಾಗಿದೆ. ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕೆಲಸವನ್ನು ಜನ ಸ್ವೀಕರಿಸಿದ್ದಾರೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದ ತತ್ತರಿಸಿ ಹೋಗಿದ್ದ ಜನ ಸಾಮಾನ್ಯನಿಗೆ ಕರ್ನಾಟಕದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆ ಆಧಾರ ಸ್ತಂಬವಾಗಿ ನಿಂತಿದೆ. ಮುಂದಿನ ಬಾರಿಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಮ್ತತು ಅಶೋಕ್ ರೈ ಅವರೇ ಮುಂದಿನ ೧೫ ವರ್ಷಗಳ ಕಾಲ ಶಾಸಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು.

Muliya

ಜಾಹೀರಾತು

Poorna squash

ಜಾಹೀರಾತು

ಸ್ವಇಚ್ಚೆಯಿಂದ ಪಕ್ಷಕ್ಕೆ ಸೇರ್ಪಡೆ: ಅಶೋಕ್ ಪೂಜಾರಿ

ಸಭೆಯಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಸ್ವ ಇಚ್ಚೆಯಿಂದ , ಶಾಸಕರ ಅಭಿವೃದ್ದಿ ಕೆಲಸವನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದಾರೆ ಅವರನ್ನು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಬಳಸಿಕೊಳ್ಳಲಾಗುವುದು. ಪ್ರತೀಯೊಬ್ಬ ಕಾರ್ಯಕತನೂ ಪಕ್ಷದ ಆಸ್ತಿಯಾಗಿದ್ದು, ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್‌ನ ಗತ ವೈಭವ ಮರಳಿ ಬರಲಿದೆ. ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಮನಸ್ಸನ್ನು ತಟ್ಟಿದೆ ಎಂದು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಕಾಂಗ್ರೆಸ್ ಮುಖಂಡರಾದ ಶಶಿಕಿರಣ್ ರೈ ನೂಜಿಬೈಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ನೂರುದ್ದೀನ್ ಸಾಲ್ಮರ, ಗ್ರಾಪಂ ಸದಸ್ಯರಾದ ಚಿತ್ರಾ, ಶೀನಪ್ಪ ನಾಯ್ಕ, ವಿನೋದ್ ಶೆಟ್ಟಿ ಮುಡಾಲ, ಸುಂದರಿ, ಮಹಮ್ಮದ್ ಬೊಳ್ಳಾಡಿ, ಇಸುಬು ಅಡ್ಕ, ರಶೀದ್, ನಾಸಿರ್ ಯು ಕೆ, ಬೂತ್ ಅಧ್ಯಕ್ಷ ಚೆನ್ನ, ಅಝೀಝ್, ಮುನೀರ್, ಮಹಮ್ಮದ್ ಅಡ್ಕ, ಹಂಝ ಮೊದಲಾದವರು ಇದ್ದರು.

SendShare2Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..