ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.
ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ʼರಿವರ್ ಫೆಸ್ಟ್ರವಲ್ʼ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.
-ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು, ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.
ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ʼರಿವರ್ ಫೆಸ್ಟ್ರವಲ್ʼ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.
ಉಡುಪಿ ಜಿಲ್ಲೆಯ ಸದರಿ ಮೂರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್ ತಾಂತ್ರಿಕ ಬಿಡ್ಡನ್ನು ಸೆ.12ರಂದು ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರು ತಿಳಿಸಿದ್ದಾರೆ.