ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಹುಲಿ ವೇಷ ಕುಣಿತ ಸ್ಪರ್ಧೆ ಹಾಗೂ ಆಹಾರಮೇಳ ಸಪ್ಟೆಂಬರ್ 28 ರಂದು ನಡೆಯಲಿದೆ ಎಂದು ವಿಜಯ ಸಾಮ್ರಾಟ್ (ರಿ.) ಪುತ್ತೂರು ಗೌರವಾಧ್ಯಕ್ಷರಾದ ಸಹಜ್ ರೈ ಬಳಜ್ಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
‘ಹುಲಿವೇಷ ಕುಣಿತ’ ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇದೇ ಬರುವ 28 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನಿಸಳೆಯುವಂತಹ ‘ಪುತ್ತೂರುದ ಪಿಲಿಗೊಬ್ಬು-2025’ ಸೀಸನ್ -3 ಹಾಗೂ ‘ಪುತ್ತೂರು ಪುಡ್ ಫೆಸ್ಟ್’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.
ಪಿಲಿ ಗೊಬ್ಬು ಕಾರ್ಯಕ್ರಮ ಸೆಪ್ಟೆಂಬರ್ 28 ಆದಿತ್ಯವಾರ ಬೆಳಗ್ಗೆ 10:30 ಗಂಟೆಗೆ ಎಡನೀರು ಶ್ರೀಗಳಾದ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಪಾದಂಗಳವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿ ಚಾಲನೆ ನೀಡಲಿದ್ದಾರೆ, ಪುತ್ತೂರಿನ ಪ್ರತಿಷ್ಠಿತ ಜಿಎಲ್ ಆಚಾರ್ಯ ಜುವೆಲರ್ಸ್ ಇದರ ಆಡಳಿತ ನಿರ್ದೇಶಕರಾದ ಸ್ವರ್ಣೋಧ್ಯಮಿ ಶ್ರೀ ಬಲರಾಮ ಆಚಾರ್ಯ ಜಿ.ಎಲ್ ಇವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.. ಪಿಲಿಗೊಬ್ಬು ವೇದಿಕೆಯ ಉದ್ಘಾಟನೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅವರು ನೆರವೇರಿಸಲಿದ್ದಾರೆ.
ಬಹುಮಾನಗಳ ವಿವರ;-ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಖ್ಯಾತ ಆಯ್ದ 8 ಹುಲಿವೇಷ ತಂಡಗಳನ್ನು ಆಹ್ವಾನಿಸಿ ಅವರೊಳಗೆ ಉತ್ತಮ ನಿರ್ವಹಣೆ ಮಾಡಿದ ತಂಡಕ್ಕೆ ಪ್ರಥಮ ಬಹುಮಾನ ರೂ 3 ಲಕ್ಷ, ದ್ವಿತೀಯ ಬಹುಮಾನ 2 ಲಕ್ಷ, ಹಾಗೂ ತೃತೀಯ ಬಹುಮಾನ 1 ಲಕ್ಷ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು ಮಾತ್ರವಲ್ಲದೆ ಭಾಗಿಯಾದ ತಂಡಗಳಿಗೂ ಗೌರವ ಸಂಭಾವನೆಯನ್ನು ನೀಡಿ ಗೌರವಿಸಲಾಗುವುದು . ಜೊತೆಗೆ ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ, ಗುಂಪು ಪ್ರಶಸ್ತಿ ವಿಭಾಗ ದಲ್ಲಿ ಉತ್ತಮ ತಾಸೆ,ಉತ್ತಮ ಬಣ್ಣ, ಉತ್ತಮ ಧರಣಿ ಮಂಡಲ ಕುಣಿತ ವೈಯುಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಕಪ್ಪು ಹುಲಿ,ಮರಿ ಹುಲಿ ಪುತ್ತೂರುದ ಹುಲಿ, ಮುಡಿ ಹಾರಿಸುವುದು, ನಾಣ್ಯ ತೆಗೆಯುವುದಕ್ಕೆ ವಿಶೇಷ ಬಹುಮಾನವಿದೆ .ಪ್ರತಿ ತಂಡದಲ್ಲಿ 15 ಹುಲಿವೇಷ ಹಾಗೂ ಪ್ರತಿ ತಂಡಕ್ಕೆ ಹುಲಿ ವೇಷ ಕುಣಿತದ ಕಲಾ ಪ್ರದರ್ಶನ ನೀಡಲು 23 ನಿಮಿಷದ ಕಾಲಾವಕಾಶವಿರುತ್ತದೆ. ಈ ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿದ ಜಿಲ್ಲೆಯ ಖ್ಯಾತ ತೀರ್ಪುಗಾರರು ಭಾಗವಹಿಸಲಿದ್ದಾರೆ.
ತಾರಾ ಮೆರುಗು ಕಾರ್ಯಕ್ರಮ ವೀಕ್ಷಿಸಲು ತುಳುನಾಡಿನ ಹೆಸರಾಂತ ಕೋಸ್ಟಲ್ ವುಡ್ ಹಾಗೂ ರಾಜ್ಯದ ಹೆಸರಾಂತ ಸ್ಯಾಂಡಲ್ ವುಡ್ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಪುತ್ತೂರು ಪುಡ್ ಫೆಸ್ಟ್ ಸೆಪ್ಟೆಂಬರ್ 27 ಶನಿವಾರ ಸಂಜೆ ಗಂಟೆ 4:00 ಫುಡ್ ಫೆಸ್ಟ್ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ಇದರ ಆಡಳಿತ ನಿರ್ದೇಶಕರಾದ ಶ್ರೀ ಕೇಶವ್ ಪ್ರಸಾದ್ ಮುಳಿಯ ಇವರು ಉದ್ಘಾಟನೆ ನೆರವೇರಿಸಲಿದ್ದಾರೆ, ಭಟ್ ಅಂಡ್ ಭಟ್ ಯೂಟ್ಯೂಬ್ ಮೂಲಕ ಅಪಾರ ಜನಮನ್ನಣೆ ಹಾಗೂ ಐದು ಲಕ್ಷಕ್ಕೂ ಅಧಿಕ ಅಭಿಮಾನಿ ವರ್ಗ ಪಡೆದ ಸುದರ್ಶನ ಭಟ್ ಬೆದ್ರಾಡಿ ಇವರು ಆಹಾರ ಮಳಿಗೆಗೆ ಚಾಲನೆಯನ್ನು ನೀಡಲಿದ್ದಾರೆ.
ಆಹಾರ ಮೇಳವು ಸೆಪ್ಟೆಂಬರ್ 27 ರ ಶನಿವಾರ ಸಂಜೆ ಗಂಟೆ 4 ರಿಂದ ರಾತ್ರಿ 11 ರ ತನಕ, ಹಾಗೂ ಸೆಪ್ಟೆಂಬರ್ 28ರ ಬೆಳಗ್ಗೆ 10 ಗಂಟೆಯಿಂದ ರಾತ್ರಿ ತನಕ ನಡೆಯಲಿದೆ. ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಪ್ರದಾನ ಕಾರ್ಯದರ್ಶಿ ಶರತ್ ಆಳ್ವಾ ಕೋರೆಲು, ರತನ್ ರೈ ಕುಂಬ್ರ, ಉಪಸ್ಥಿರಿದ್ದರು.