ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀವಿಜಯ ಕುಮಾರ , ಸಹ ಶಿಕ್ಷಕರು ಸರಕಾರಿಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಇವರು ಉದ್ಘಾಟಿಸಿ ಶುಭ ಹಾರೈಸಿದರು. ಇವರು ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿಗಳನ್ನು ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕು ಮೇರು ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಭಾಗವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳುಪಡೆದುಕೊಂಡರು.
ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.























