ಪುತ್ತೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14 ರಿಂದ 2018-19ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲಗಳಿಗೆ ಒಟಿಎಸ್ ಅಡಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ.
ವಿವಿಧ ಯೋಜನೆಗಳಡಿಯಲ್ಲಿ ನೀಡಿರುವ ಸಾಲಕ್ಕೆ ಸಂಬಂಧಿಸಿದ ಬಡ್ಡಿ ಮನ್ನಾ ಮಾಡಿದಲ್ಲಿ ಇನ್ನಿತರೆ ನಿಗಮಗಳಿಗೂ ಇದೊಂದು ಪೂರ್ವ ನಿದರ್ಶನವಾಗಲಿದೆ ಎಂದು ಆರ್ಥಿಕ ಇಲಾಖೆ ಹೇಳಿದ್ದರೂ ಸಹ ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದ್ದು ವಿಷಾದನೀಯ.
ಈ ರೀತಿ ನಿತ್ಯ ನಿರಂತರವಾಗಿ ಅಲ್ಪಸಂಖ್ಯಾತರ ಒಲೈಕೆ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ ಬಹುಸಂಖ್ಯಾತ ಹಿಂದೂ ಸಮುದಾಯದ ಮತ ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡುವ ಸರ್ಕಾರವು ರೈತರ ಕೃಷಿ ಸಾಲದ ಬಡ್ಡಿ ಮನ್ನಾ ಯಾಕೆ ಮಾಡುತ್ತಿಲ್ಲ? ಅದೇ ರೀತಿ ಹಿಂದುಗಳಲ್ಲಿ ಬಡವರು ಇಲ್ಲವೇ? ಈ ತಾರತಮ್ಯ ನೀತಿ ಯಾಕೆ?
ರಾಜ್ಯದ ಜನತೆಯ ತೆರಿಗೆ ಹಣವನ್ನು ಮುಸ್ಲಿಮರ ಒಲೈಕೆಗೆ ಬಳಸುವುದನ್ನು ಖಂಡಿಸುತ್ತೇನೆ ಅಂತ ಹೇಳಿದರೆ.


























